AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್​’, ‘ಪುಷ್ಪ 2’ ಮುಂತಾದ ಚಿತ್ರಗಳ ಬಗ್ಗೆ ಬ್ಯಾಡ್​ ನ್ಯೂಸ್​; ಆ.1ರಿಂದ ಶೂಟಿಂಗ್​ ಸ್ಥಗಿತ; ಕಾರಣ ಏನು?

Active Telugu Producers Guild: ಚಿತ್ರರಂಗದಲ್ಲಿನ ಹಲವು ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಅಲ್ಲಿಯವರೆಗೂ ಯಾವುದೇ ಸಿನಿಮಾಗಳ ಶೂಟಿಂಗ್​ ಮಾಡದಿರಲು ನಿರ್ಮಾಪಕರ ಸಂಘದವರು ನಿರ್ಧರಿಸಿದ್ದಾರೆ.

‘ಸಲಾರ್​’, ‘ಪುಷ್ಪ 2’ ಮುಂತಾದ ಚಿತ್ರಗಳ ಬಗ್ಗೆ ಬ್ಯಾಡ್​ ನ್ಯೂಸ್​; ಆ.1ರಿಂದ ಶೂಟಿಂಗ್​ ಸ್ಥಗಿತ; ಕಾರಣ ಏನು?
ಅಲ್ಲು ಅರ್ಜುನ್​, ಪ್ರಭಾಸ್​, ಮಹೇಶ್​ ಬಾಬು
Follow us
TV9 Web
| Updated By: ಮದನ್​ ಕುಮಾರ್​

Updated on:Jul 27, 2022 | 8:05 AM

ಕೊವಿಡ್​ ಕಾರಣದಿಂದ ಚಿತ್ರರಂಗಕ್ಕೆ ಸಾಕಷ್ಟು ನಷ್ಟ ಆಗಿತ್ತು. ಹಲವು ತಿಂಗಳ ಕಾಲ ಸಿನಿಮಾ ಚಟುವಟಿಕೆಗಳು ನಿಂತುಹೋಗಿದ್ದವು. ಈಗ ಮತ್ತೆ ಅನೇಕ ಸಮಸ್ಯೆಗಳು ಕಾಡುತ್ತಿವೆ. ಅವುಗಳಿಗೆಲ್ಲ ಪರಿಹಾರ ಕಂಡುಕೊಳ್ಳಲು ತೆಲುಗು ಸಿನಿಮಾ (Telugu Film Industry) ನಿರ್ಮಾಪಕರ ಸಂಘದವರು ನಿರ್ಧರಿಸಿದ್ದಾರೆ. ಆಗಸ್ಟ್​ 1ರಿಂದ ಯಾವುದೇ ಸಿನಿಮಾದ ಶೂಟಿಂಗ್​ ಮಾಡದಂತೆ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಂಘದ ವತಿಯಿಂದ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗಿದೆ. ಇದರಿಂದ ಅನೇಕ ಬಹುನಿರಿಕ್ಷಿತ ಸಿನಿಮಾಗಳ ಚಿತ್ರೀಕರಣ​ ಕೂಡ ನಿಲ್ಲುವ ಸಾಧ್ಯತೆ ದಟ್ಟವಾಗಿದೆ. ಪ್ರಭಾಸ್​ (Prabhas) ನಟನೆಯ ‘ಸಲಾರ್​’, ಮಹೇಶ್​ ಬಾಬು ನಟನೆಯ ಹೊಸ ಚಿತ್ರ ಸೇರಿದಂತೆ ಹಲವು ಸಿನಿಮಾಗಳ ಶೂಟಿಂಗ್​ ಸ್ಥಗಿತಗೊಳ್ಳುವ ಬಗ್ಗೆ ಟಾಲಿವುಡ್​ (Tollywood) ಅಂಗಳದಿಂದ ಸುದ್ದಿ ಕೇಳಿಬಂದಿದೆ.

ಸದ್ಯಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಗೆಲ್ಲುತ್ತಿರುವ ಸಿನಿಮಾಗಳ ಸಂಖ್ಯೆ ಬೆರಳೆಣಿಕೆಯಷ್ಟು ಮಾತ್ರ. ಇದು ಟಾಲಿವುಡ್​ ನಿರ್ಮಾಪಕರ ಚಿಂತೆಗೆ ಕಾರಣ ಆಗಿದೆ. ಕೊವಿಡ್​ ಬಳಿಕ ಚಿತ್ರರಂಗದಲ್ಲಿ ನಿರ್ಮಾಣದ ವೆಚ್ಚ ಜಾಸ್ತಿ ಆಗಿದೆ. ಟಿಕೆಟ್​ ಬೆಲೆಗಳು ಸಹ ದುಬಾರಿ ಆಗಿವೆ. ಇದರಿಂದ ನಿರ್ಮಾಪಕರಿಗೆ ಮತ್ತು ಪ್ರೇಕ್ಷಕರಿಗೆ ಹೊರೆ ಆಗುತ್ತಿದೆ. ಆ ಕಾರಣದಿಂದಲೇ ಚಿತ್ರಮಂದಿರಕ್ಕೆ ಜನರು ಬರುತ್ತಿಲ್ಲ ಎಂಬ ವಾದ ಇದೆ.

ತೆಲುಗು ಚಿತ್ರರಂಗದಲ್ಲಿ ನಿರ್ಮಾಪಕರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಟಾಲಿವುಡ್​ನ ಪ್ರಮುಖರೆಲ್ಲರೂ ಸಭೆ ಸೇರಿ ಈ ಬಗ್ಗೆ ಚರ್ಚೆ ಮಾಡಬೇಕು. ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಅಲ್ಲಿಯವರೆಗೂ ಯಾವುದೇ ಸಿನಿಮಾಗಳ ಶೂಟಿಂಗ್​ ಮಾಡದಿರಲು ನಿರ್ಮಾಪಕರ ಸಂಘದವರು ನಿರ್ಧರಿಸಿದ್ದಾರೆ. ಇದರಿಂದಾಗಿ ಕೆಲವು ಬಹುನಿರೀಕ್ಷಿತ ಸಿನಿಮಾಗಳ ಚಿತ್ರೀಕರಣ ಸಾಕಷ್ಟು ವಿಳಂಬ ಆಗುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ
Image
‘ಯಶ್ ಇಂಡಿಯಾ ಬಾಕ್ಸ್ ಆಫೀಸ್​ ಹೊಡೆದ್ರು, ನಾವು ವರ್ಲ್ಡ್​​ನ ಹೊಡಿತೀವಿ’; ‘ವಿಕ್ರಾಂತ್ ರೋಣ’ ಬಗ್ಗೆ ಉಪೇಂದ್ರ ಮಾತು
Image
‘ಕೊನೆಯದಾಗಿ ಲೈಂಗಿಕ ಕ್ರಿಯೆ ನಡೆಸಿದ್ದು ಯಾವಾಗ?’; ದೇವರಕೊಂಡಗೆ ಕೇಳಿದ ಪ್ರಶ್ನೆಗೆ ಅನನ್ಯಾ ಪಾಂಡೆ ಕೊಟ್ರು ಉತ್ತರ
Image
‘ಕೆಜಿಎಫ್ 2’ ಎದುರು ಬರದೆ ನಾವು ಬದುಕಿದೆವು; ಆಮಿರ್ ಖಾನ್​ಗೂ ಭಯ ಹುಟ್ಟಿಸಿದ್ದ ಯಶ್ ಚಿತ್ರದ ಅಬ್ಬರ
Image
‘ಇನ್ಮುಂದೆ ಇಂಥ ಸಿನಿಮಾ ಮಾಡಲ್ಲ’: ರಶ್ಮಿಕಾ ಜತೆ ನಟಿಸಿದ ಬಳಿಕ ಮಹತ್ವದ ನಿರ್ಧಾರ ತಿಳಿಸಿದ ದುಲ್ಕರ್​ ಸಲ್ಮಾನ್​

ಪ್ರಭಾಸ್​ ನಟನೆಯ ‘ಸಲಾರ್​’ ಚಿತ್ರಕ್ಕೆ ಶೂಟಿಂಗ್​ ನಡೆಯುತ್ತಿದೆ. ಈ ಸಿನಿಮಾದ ಕೆಲಸಗಳು ಬೇಗ ಮುಗಿಯಲಿ ಎಂದು ಅಭಿಮಾನಿಗಳು ಅಪೇಕ್ಷಿಸುತ್ತಿದ್ದಾರೆ. ಅಲ್ಲು ಅರ್ಜುನ್​ ಅವರು ಆದಷ್ಟು ಬೇಗ ‘ಪುಷ್ಪ 2’ ಶೂಟಿಂಗ್​ ಆರಂಭಿಸಲಿ ಎಂದು ಸಿನಿಪ್ರಿಯರು ಹಂಬಲಿಸುತ್ತಿದ್ದಾರೆ. ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​ ಮುಂತಾದ ​ಸ್ಟಾರ್​ ನಟರ ಹೊಸ ಸಿನಿಮಾಗಳು ಕೂಡ ಚಿತ್ರೀಕರಣಕ್ಕೆ ಸಕಲ ತಯಾರಿ ಮಾಡಿಕೊಂಡಿವೆ. ಆದರೆ ಈ ಸಂದರ್ಭದಲ್ಲಿ ನಿರ್ಮಾಪಕರ ಸಂಘದವರು ಮುಷ್ಕರ ಹೂಡಿರುವುದರಿಂದ ತೆಲುಗು ಚಿತ್ರರಂಗದಲ್ಲಿ ಗೊಂದಲದ ವಾತಾವರಣ ನಿರ್ಮಾಣ ಆಗಿದೆ. ಎಲ್ಲ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ಸಿಗಲಿ ಎಂದು ಸಿನಿಪ್ರಿಯರು ಆಶಿಸುತ್ತಿದ್ದಾರೆ.

Published On - 8:05 am, Wed, 27 July 22

ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ