AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್​’, ‘ಪುಷ್ಪ 2’ ಮುಂತಾದ ಚಿತ್ರಗಳ ಬಗ್ಗೆ ಬ್ಯಾಡ್​ ನ್ಯೂಸ್​; ಆ.1ರಿಂದ ಶೂಟಿಂಗ್​ ಸ್ಥಗಿತ; ಕಾರಣ ಏನು?

Active Telugu Producers Guild: ಚಿತ್ರರಂಗದಲ್ಲಿನ ಹಲವು ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಅಲ್ಲಿಯವರೆಗೂ ಯಾವುದೇ ಸಿನಿಮಾಗಳ ಶೂಟಿಂಗ್​ ಮಾಡದಿರಲು ನಿರ್ಮಾಪಕರ ಸಂಘದವರು ನಿರ್ಧರಿಸಿದ್ದಾರೆ.

‘ಸಲಾರ್​’, ‘ಪುಷ್ಪ 2’ ಮುಂತಾದ ಚಿತ್ರಗಳ ಬಗ್ಗೆ ಬ್ಯಾಡ್​ ನ್ಯೂಸ್​; ಆ.1ರಿಂದ ಶೂಟಿಂಗ್​ ಸ್ಥಗಿತ; ಕಾರಣ ಏನು?
ಅಲ್ಲು ಅರ್ಜುನ್​, ಪ್ರಭಾಸ್​, ಮಹೇಶ್​ ಬಾಬು
TV9 Web
| Edited By: |

Updated on:Jul 27, 2022 | 8:05 AM

Share

ಕೊವಿಡ್​ ಕಾರಣದಿಂದ ಚಿತ್ರರಂಗಕ್ಕೆ ಸಾಕಷ್ಟು ನಷ್ಟ ಆಗಿತ್ತು. ಹಲವು ತಿಂಗಳ ಕಾಲ ಸಿನಿಮಾ ಚಟುವಟಿಕೆಗಳು ನಿಂತುಹೋಗಿದ್ದವು. ಈಗ ಮತ್ತೆ ಅನೇಕ ಸಮಸ್ಯೆಗಳು ಕಾಡುತ್ತಿವೆ. ಅವುಗಳಿಗೆಲ್ಲ ಪರಿಹಾರ ಕಂಡುಕೊಳ್ಳಲು ತೆಲುಗು ಸಿನಿಮಾ (Telugu Film Industry) ನಿರ್ಮಾಪಕರ ಸಂಘದವರು ನಿರ್ಧರಿಸಿದ್ದಾರೆ. ಆಗಸ್ಟ್​ 1ರಿಂದ ಯಾವುದೇ ಸಿನಿಮಾದ ಶೂಟಿಂಗ್​ ಮಾಡದಂತೆ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಂಘದ ವತಿಯಿಂದ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗಿದೆ. ಇದರಿಂದ ಅನೇಕ ಬಹುನಿರಿಕ್ಷಿತ ಸಿನಿಮಾಗಳ ಚಿತ್ರೀಕರಣ​ ಕೂಡ ನಿಲ್ಲುವ ಸಾಧ್ಯತೆ ದಟ್ಟವಾಗಿದೆ. ಪ್ರಭಾಸ್​ (Prabhas) ನಟನೆಯ ‘ಸಲಾರ್​’, ಮಹೇಶ್​ ಬಾಬು ನಟನೆಯ ಹೊಸ ಚಿತ್ರ ಸೇರಿದಂತೆ ಹಲವು ಸಿನಿಮಾಗಳ ಶೂಟಿಂಗ್​ ಸ್ಥಗಿತಗೊಳ್ಳುವ ಬಗ್ಗೆ ಟಾಲಿವುಡ್​ (Tollywood) ಅಂಗಳದಿಂದ ಸುದ್ದಿ ಕೇಳಿಬಂದಿದೆ.

ಸದ್ಯಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಗೆಲ್ಲುತ್ತಿರುವ ಸಿನಿಮಾಗಳ ಸಂಖ್ಯೆ ಬೆರಳೆಣಿಕೆಯಷ್ಟು ಮಾತ್ರ. ಇದು ಟಾಲಿವುಡ್​ ನಿರ್ಮಾಪಕರ ಚಿಂತೆಗೆ ಕಾರಣ ಆಗಿದೆ. ಕೊವಿಡ್​ ಬಳಿಕ ಚಿತ್ರರಂಗದಲ್ಲಿ ನಿರ್ಮಾಣದ ವೆಚ್ಚ ಜಾಸ್ತಿ ಆಗಿದೆ. ಟಿಕೆಟ್​ ಬೆಲೆಗಳು ಸಹ ದುಬಾರಿ ಆಗಿವೆ. ಇದರಿಂದ ನಿರ್ಮಾಪಕರಿಗೆ ಮತ್ತು ಪ್ರೇಕ್ಷಕರಿಗೆ ಹೊರೆ ಆಗುತ್ತಿದೆ. ಆ ಕಾರಣದಿಂದಲೇ ಚಿತ್ರಮಂದಿರಕ್ಕೆ ಜನರು ಬರುತ್ತಿಲ್ಲ ಎಂಬ ವಾದ ಇದೆ.

ತೆಲುಗು ಚಿತ್ರರಂಗದಲ್ಲಿ ನಿರ್ಮಾಪಕರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಟಾಲಿವುಡ್​ನ ಪ್ರಮುಖರೆಲ್ಲರೂ ಸಭೆ ಸೇರಿ ಈ ಬಗ್ಗೆ ಚರ್ಚೆ ಮಾಡಬೇಕು. ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಅಲ್ಲಿಯವರೆಗೂ ಯಾವುದೇ ಸಿನಿಮಾಗಳ ಶೂಟಿಂಗ್​ ಮಾಡದಿರಲು ನಿರ್ಮಾಪಕರ ಸಂಘದವರು ನಿರ್ಧರಿಸಿದ್ದಾರೆ. ಇದರಿಂದಾಗಿ ಕೆಲವು ಬಹುನಿರೀಕ್ಷಿತ ಸಿನಿಮಾಗಳ ಚಿತ್ರೀಕರಣ ಸಾಕಷ್ಟು ವಿಳಂಬ ಆಗುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ
Image
‘ಯಶ್ ಇಂಡಿಯಾ ಬಾಕ್ಸ್ ಆಫೀಸ್​ ಹೊಡೆದ್ರು, ನಾವು ವರ್ಲ್ಡ್​​ನ ಹೊಡಿತೀವಿ’; ‘ವಿಕ್ರಾಂತ್ ರೋಣ’ ಬಗ್ಗೆ ಉಪೇಂದ್ರ ಮಾತು
Image
‘ಕೊನೆಯದಾಗಿ ಲೈಂಗಿಕ ಕ್ರಿಯೆ ನಡೆಸಿದ್ದು ಯಾವಾಗ?’; ದೇವರಕೊಂಡಗೆ ಕೇಳಿದ ಪ್ರಶ್ನೆಗೆ ಅನನ್ಯಾ ಪಾಂಡೆ ಕೊಟ್ರು ಉತ್ತರ
Image
‘ಕೆಜಿಎಫ್ 2’ ಎದುರು ಬರದೆ ನಾವು ಬದುಕಿದೆವು; ಆಮಿರ್ ಖಾನ್​ಗೂ ಭಯ ಹುಟ್ಟಿಸಿದ್ದ ಯಶ್ ಚಿತ್ರದ ಅಬ್ಬರ
Image
‘ಇನ್ಮುಂದೆ ಇಂಥ ಸಿನಿಮಾ ಮಾಡಲ್ಲ’: ರಶ್ಮಿಕಾ ಜತೆ ನಟಿಸಿದ ಬಳಿಕ ಮಹತ್ವದ ನಿರ್ಧಾರ ತಿಳಿಸಿದ ದುಲ್ಕರ್​ ಸಲ್ಮಾನ್​

ಪ್ರಭಾಸ್​ ನಟನೆಯ ‘ಸಲಾರ್​’ ಚಿತ್ರಕ್ಕೆ ಶೂಟಿಂಗ್​ ನಡೆಯುತ್ತಿದೆ. ಈ ಸಿನಿಮಾದ ಕೆಲಸಗಳು ಬೇಗ ಮುಗಿಯಲಿ ಎಂದು ಅಭಿಮಾನಿಗಳು ಅಪೇಕ್ಷಿಸುತ್ತಿದ್ದಾರೆ. ಅಲ್ಲು ಅರ್ಜುನ್​ ಅವರು ಆದಷ್ಟು ಬೇಗ ‘ಪುಷ್ಪ 2’ ಶೂಟಿಂಗ್​ ಆರಂಭಿಸಲಿ ಎಂದು ಸಿನಿಪ್ರಿಯರು ಹಂಬಲಿಸುತ್ತಿದ್ದಾರೆ. ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​ ಮುಂತಾದ ​ಸ್ಟಾರ್​ ನಟರ ಹೊಸ ಸಿನಿಮಾಗಳು ಕೂಡ ಚಿತ್ರೀಕರಣಕ್ಕೆ ಸಕಲ ತಯಾರಿ ಮಾಡಿಕೊಂಡಿವೆ. ಆದರೆ ಈ ಸಂದರ್ಭದಲ್ಲಿ ನಿರ್ಮಾಪಕರ ಸಂಘದವರು ಮುಷ್ಕರ ಹೂಡಿರುವುದರಿಂದ ತೆಲುಗು ಚಿತ್ರರಂಗದಲ್ಲಿ ಗೊಂದಲದ ವಾತಾವರಣ ನಿರ್ಮಾಣ ಆಗಿದೆ. ಎಲ್ಲ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ಸಿಗಲಿ ಎಂದು ಸಿನಿಪ್ರಿಯರು ಆಶಿಸುತ್ತಿದ್ದಾರೆ.

Published On - 8:05 am, Wed, 27 July 22

Follow Us
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ