AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್​’, ‘ಪುಷ್ಪ 2’ ಮುಂತಾದ ಚಿತ್ರಗಳ ಬಗ್ಗೆ ಬ್ಯಾಡ್​ ನ್ಯೂಸ್​; ಆ.1ರಿಂದ ಶೂಟಿಂಗ್​ ಸ್ಥಗಿತ; ಕಾರಣ ಏನು?

Active Telugu Producers Guild: ಚಿತ್ರರಂಗದಲ್ಲಿನ ಹಲವು ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಅಲ್ಲಿಯವರೆಗೂ ಯಾವುದೇ ಸಿನಿಮಾಗಳ ಶೂಟಿಂಗ್​ ಮಾಡದಿರಲು ನಿರ್ಮಾಪಕರ ಸಂಘದವರು ನಿರ್ಧರಿಸಿದ್ದಾರೆ.

‘ಸಲಾರ್​’, ‘ಪುಷ್ಪ 2’ ಮುಂತಾದ ಚಿತ್ರಗಳ ಬಗ್ಗೆ ಬ್ಯಾಡ್​ ನ್ಯೂಸ್​; ಆ.1ರಿಂದ ಶೂಟಿಂಗ್​ ಸ್ಥಗಿತ; ಕಾರಣ ಏನು?
ಅಲ್ಲು ಅರ್ಜುನ್​, ಪ್ರಭಾಸ್​, ಮಹೇಶ್​ ಬಾಬು
TV9 Web
| Edited By: |

Updated on:Jul 27, 2022 | 8:05 AM

Share

ಕೊವಿಡ್​ ಕಾರಣದಿಂದ ಚಿತ್ರರಂಗಕ್ಕೆ ಸಾಕಷ್ಟು ನಷ್ಟ ಆಗಿತ್ತು. ಹಲವು ತಿಂಗಳ ಕಾಲ ಸಿನಿಮಾ ಚಟುವಟಿಕೆಗಳು ನಿಂತುಹೋಗಿದ್ದವು. ಈಗ ಮತ್ತೆ ಅನೇಕ ಸಮಸ್ಯೆಗಳು ಕಾಡುತ್ತಿವೆ. ಅವುಗಳಿಗೆಲ್ಲ ಪರಿಹಾರ ಕಂಡುಕೊಳ್ಳಲು ತೆಲುಗು ಸಿನಿಮಾ (Telugu Film Industry) ನಿರ್ಮಾಪಕರ ಸಂಘದವರು ನಿರ್ಧರಿಸಿದ್ದಾರೆ. ಆಗಸ್ಟ್​ 1ರಿಂದ ಯಾವುದೇ ಸಿನಿಮಾದ ಶೂಟಿಂಗ್​ ಮಾಡದಂತೆ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಂಘದ ವತಿಯಿಂದ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗಿದೆ. ಇದರಿಂದ ಅನೇಕ ಬಹುನಿರಿಕ್ಷಿತ ಸಿನಿಮಾಗಳ ಚಿತ್ರೀಕರಣ​ ಕೂಡ ನಿಲ್ಲುವ ಸಾಧ್ಯತೆ ದಟ್ಟವಾಗಿದೆ. ಪ್ರಭಾಸ್​ (Prabhas) ನಟನೆಯ ‘ಸಲಾರ್​’, ಮಹೇಶ್​ ಬಾಬು ನಟನೆಯ ಹೊಸ ಚಿತ್ರ ಸೇರಿದಂತೆ ಹಲವು ಸಿನಿಮಾಗಳ ಶೂಟಿಂಗ್​ ಸ್ಥಗಿತಗೊಳ್ಳುವ ಬಗ್ಗೆ ಟಾಲಿವುಡ್​ (Tollywood) ಅಂಗಳದಿಂದ ಸುದ್ದಿ ಕೇಳಿಬಂದಿದೆ.

ಸದ್ಯಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಗೆಲ್ಲುತ್ತಿರುವ ಸಿನಿಮಾಗಳ ಸಂಖ್ಯೆ ಬೆರಳೆಣಿಕೆಯಷ್ಟು ಮಾತ್ರ. ಇದು ಟಾಲಿವುಡ್​ ನಿರ್ಮಾಪಕರ ಚಿಂತೆಗೆ ಕಾರಣ ಆಗಿದೆ. ಕೊವಿಡ್​ ಬಳಿಕ ಚಿತ್ರರಂಗದಲ್ಲಿ ನಿರ್ಮಾಣದ ವೆಚ್ಚ ಜಾಸ್ತಿ ಆಗಿದೆ. ಟಿಕೆಟ್​ ಬೆಲೆಗಳು ಸಹ ದುಬಾರಿ ಆಗಿವೆ. ಇದರಿಂದ ನಿರ್ಮಾಪಕರಿಗೆ ಮತ್ತು ಪ್ರೇಕ್ಷಕರಿಗೆ ಹೊರೆ ಆಗುತ್ತಿದೆ. ಆ ಕಾರಣದಿಂದಲೇ ಚಿತ್ರಮಂದಿರಕ್ಕೆ ಜನರು ಬರುತ್ತಿಲ್ಲ ಎಂಬ ವಾದ ಇದೆ.

ತೆಲುಗು ಚಿತ್ರರಂಗದಲ್ಲಿ ನಿರ್ಮಾಪಕರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಟಾಲಿವುಡ್​ನ ಪ್ರಮುಖರೆಲ್ಲರೂ ಸಭೆ ಸೇರಿ ಈ ಬಗ್ಗೆ ಚರ್ಚೆ ಮಾಡಬೇಕು. ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಅಲ್ಲಿಯವರೆಗೂ ಯಾವುದೇ ಸಿನಿಮಾಗಳ ಶೂಟಿಂಗ್​ ಮಾಡದಿರಲು ನಿರ್ಮಾಪಕರ ಸಂಘದವರು ನಿರ್ಧರಿಸಿದ್ದಾರೆ. ಇದರಿಂದಾಗಿ ಕೆಲವು ಬಹುನಿರೀಕ್ಷಿತ ಸಿನಿಮಾಗಳ ಚಿತ್ರೀಕರಣ ಸಾಕಷ್ಟು ವಿಳಂಬ ಆಗುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ
Image
‘ಯಶ್ ಇಂಡಿಯಾ ಬಾಕ್ಸ್ ಆಫೀಸ್​ ಹೊಡೆದ್ರು, ನಾವು ವರ್ಲ್ಡ್​​ನ ಹೊಡಿತೀವಿ’; ‘ವಿಕ್ರಾಂತ್ ರೋಣ’ ಬಗ್ಗೆ ಉಪೇಂದ್ರ ಮಾತು
Image
‘ಕೊನೆಯದಾಗಿ ಲೈಂಗಿಕ ಕ್ರಿಯೆ ನಡೆಸಿದ್ದು ಯಾವಾಗ?’; ದೇವರಕೊಂಡಗೆ ಕೇಳಿದ ಪ್ರಶ್ನೆಗೆ ಅನನ್ಯಾ ಪಾಂಡೆ ಕೊಟ್ರು ಉತ್ತರ
Image
‘ಕೆಜಿಎಫ್ 2’ ಎದುರು ಬರದೆ ನಾವು ಬದುಕಿದೆವು; ಆಮಿರ್ ಖಾನ್​ಗೂ ಭಯ ಹುಟ್ಟಿಸಿದ್ದ ಯಶ್ ಚಿತ್ರದ ಅಬ್ಬರ
Image
‘ಇನ್ಮುಂದೆ ಇಂಥ ಸಿನಿಮಾ ಮಾಡಲ್ಲ’: ರಶ್ಮಿಕಾ ಜತೆ ನಟಿಸಿದ ಬಳಿಕ ಮಹತ್ವದ ನಿರ್ಧಾರ ತಿಳಿಸಿದ ದುಲ್ಕರ್​ ಸಲ್ಮಾನ್​

ಪ್ರಭಾಸ್​ ನಟನೆಯ ‘ಸಲಾರ್​’ ಚಿತ್ರಕ್ಕೆ ಶೂಟಿಂಗ್​ ನಡೆಯುತ್ತಿದೆ. ಈ ಸಿನಿಮಾದ ಕೆಲಸಗಳು ಬೇಗ ಮುಗಿಯಲಿ ಎಂದು ಅಭಿಮಾನಿಗಳು ಅಪೇಕ್ಷಿಸುತ್ತಿದ್ದಾರೆ. ಅಲ್ಲು ಅರ್ಜುನ್​ ಅವರು ಆದಷ್ಟು ಬೇಗ ‘ಪುಷ್ಪ 2’ ಶೂಟಿಂಗ್​ ಆರಂಭಿಸಲಿ ಎಂದು ಸಿನಿಪ್ರಿಯರು ಹಂಬಲಿಸುತ್ತಿದ್ದಾರೆ. ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​ ಮುಂತಾದ ​ಸ್ಟಾರ್​ ನಟರ ಹೊಸ ಸಿನಿಮಾಗಳು ಕೂಡ ಚಿತ್ರೀಕರಣಕ್ಕೆ ಸಕಲ ತಯಾರಿ ಮಾಡಿಕೊಂಡಿವೆ. ಆದರೆ ಈ ಸಂದರ್ಭದಲ್ಲಿ ನಿರ್ಮಾಪಕರ ಸಂಘದವರು ಮುಷ್ಕರ ಹೂಡಿರುವುದರಿಂದ ತೆಲುಗು ಚಿತ್ರರಂಗದಲ್ಲಿ ಗೊಂದಲದ ವಾತಾವರಣ ನಿರ್ಮಾಣ ಆಗಿದೆ. ಎಲ್ಲ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ಸಿಗಲಿ ಎಂದು ಸಿನಿಪ್ರಿಯರು ಆಶಿಸುತ್ತಿದ್ದಾರೆ.

Published On - 8:05 am, Wed, 27 July 22

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ