AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಾಲ್​ ಖಾನ್​ ಮೇಲೆ ಸಲ್ಲು ಮಾನನಷ್ಟ ಮೊಕದ್ದಮೆ ಹಾಕಲು ರಾಧೆ ವಿಮರ್ಶೆ ಕಾರಣವಲ್ಲ; ಮತ್ತೇನು?

Kamaal R Khan: ಪ್ರಚಾರದ ಆಸೆಗಾಗಿ ಕಮಾಲ್​ ಆರ್​. ಖಾನ್​ ಅವರು ಇದನ್ನೆಲ್ಲ ಮಾಡಿದ್ದಾರೆ ಎಂದು ಸಲ್ಲು ಪರ ವಕೀಲರು ಹೇಳಿದ್ದಾರೆ. ಈಗಾಗಲೇ ಅನೇಕ ಬಾರಿ ವಿವಾದ ಮಾಡಿಕೊಂಡಿರುವ ಕಮಾಲ್​ ಖಾನ್​ಗೆ ಇದೆಲ್ಲ ಹೊಸದೇನೂ ಅಲ್ಲ.

ಕಮಾಲ್​ ಖಾನ್​ ಮೇಲೆ ಸಲ್ಲು ಮಾನನಷ್ಟ ಮೊಕದ್ದಮೆ ಹಾಕಲು ರಾಧೆ ವಿಮರ್ಶೆ ಕಾರಣವಲ್ಲ; ಮತ್ತೇನು?
ಸಲ್ಮಾನ್​ ಖಾನ್​, ಕಮಾಲ್​ ಆರ್​. ಖಾನ್​
ಮದನ್​ ಕುಮಾರ್​
|

Updated on: May 28, 2021 | 8:14 AM

Share

‘ರಾಧೆ: ಯುವರ್​ ಮೋಸ್ಟ್​ ವಾಂಡೆಟ್​ ಭಾಯ್​’ ಸಿನಿಮಾ ರಿಲೀಸ್​ ಆದಾಗಿನಿಂದ ನಟ ಸಲ್ಮಾನ್​ ಖಾನ್​ ಹಲವು ವಿಚಾರಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ಈ ಚಿತ್ರಕ್ಕೆ ವಿಮರ್ಶಕರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಲಿಲ್ಲ. ಪ್ರೇಕ್ಷಕರು ಕೂಡ ರಾಧೆಯನ್ನು ಹೊಗಳಲಿಲ್ಲ. ಮೊದಲ ದಿನ ಭರ್ಜರಿ ಹಣ ಗಳಿಸಿದ್ದು ಬಿಟ್ಟರೆ ಬೇರೆ ಎಲ್ಲ ಆಯಾಮದಲ್ಲೂ ಈ ಸಿನಿಮಾ ಸೋಲಿನ ಹಾದಿ ಹಿಡಿಯಿತು. ರಾಧೆ ಸರಿಯಿಲ್ಲ ಎಂದು ಅನೇಕ ಬಗೆಯ ಮೀಮ್​ಗಳನ್ನು ಹರಿಬಿಡಲಾಯಿತು. ಜನರು ತಮ್ಮ ವಿಮರ್ಶೆಯನ್ನು ಮುಕ್ತವಾಗಿ ಹೇಳಿದರು. ಅದೇ ರೀತಿ ವಿವಾದಾತ್ಮಕ ನಟ ಕಮಾಲ್​ ಆರ್​. ಖಾನ್​ ಕೂಡ ರಾಧೆಯನ್ನು ತೆಗಳಿದ್ದರು. ಹಾಗಾಗಿ ಅವರ ಮೇಲೆ ಸಲ್ಮಾನ್​ ಖಾನ್​ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಆ ವಿಚಾರಕ್ಕೆ ಈಗ ಬೇರೆ ಟ್ವಿಸ್ಟ್​ ಸಿಕ್ಕಿದೆ.

ತಾವು ರಾಧೆ ಸಿನಿಮಾವನ್ನು ನಿಷ್ಠುರವಾಗಿ ವಿಮರ್ಶೆ ಮಾಡಿದ್ದಕ್ಕಾಗಿಯೇ ಸಲ್ಮಾನ್​ ಖಾನ್​ ಅವರು ತಮ್ಮ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ ಎಂದು ಕಮಾಲ್​ ಖಾನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಅದು ದೊಡ್ಡ ಸುದ್ದಿ ಆಗಿತ್ತು ಕೂಡ. ಆದರೆ ಈ ಮಾನನಷ್ಟ ಮೊಕದ್ದಮೆಗೆ ಕಾರಣ ಬೇರೆಯೇ ಇದೆ ಎಂಬುದನ್ನು ಸಲ್ಮಾನ್​ ಖಾನ್​ ಪರ ವಕೀಲರು ಈಗ ಬಹಿರಂಗ ಪಡಿಸಿದ್ದಾರೆ.

‘ಹಲವು ದಿನಗಳಿಂದ ಸಲ್ಮಾನ್​ ಖಾನ್​ ಅವರ ಮೇಲೆ ಕಮಾಲ್​ ಖಾನ್​ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಬಂದಿದ್ದಾರೆ. ಸಲ್ಮಾನ್​ ಖಾನ್​ ಭ್ರಷ್ಟಾಚಾರಿ. ಅವರ ಬೀಯಿಂಗ್​ ಹ್ಯೂಮನ್​ ಬ್ರಾಂಡ್​ ಮೂಲಕ ಮೋಸ ಮಾಡಲಾಗುತ್ತಿದೆ. ಮನಿ ಲಾಂಡರಿಂಗ್​​ ಮಾಡಲಾಗುತ್ತಿದೆ. ಸಲ್ಮಾನ್​ ಖಾನ್​ ಸಿನಿಮಾ ನಿರ್ಮಾಣ ಸಂಸ್ಥೆಯಲ್ಲಿ ದರೋಡೆಕೋರರು ಇದ್ದಾರೆ ಎಂದೆಲ್ಲ ಕಮಾಲ್​ ಖಾನ್​ ಮಾತನಾಡಿದ್ದಾರೆ. ಹಾಗಾಗಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ’ ಎಂದು ಸಲ್ಮಾನ್​ ಪರ ವಕೀಲರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಪ್ರಚಾರದ ಆಸೆಗಾಗಿ ಕಮಾಲ್​ ಆರ್​. ಖಾನ್​ ಅವರು ಇದನ್ನೆಲ್ಲ ಮಾಡಿದ್ದಾರೆ ಎಂದು ಸಲ್ಲು ಪರ ವಕೀಲರು ಹೇಳಿದ್ದಾರೆ. ಈಗಾಗಲೇ ಅನೇಕ ಬಾರಿ ವಿವಾದ ಮಾಡಿಕೊಂಡಿರುವ ಕಮಾಲ್​ ಖಾನ್​ಗೆ ಇದೆಲ್ಲ ಹೊಸದೇನೂ ಅಲ್ಲ. ಒಟ್ಟಿನಲ್ಲಿ ರಾಧೆ ಸಿನಿಮಾವನ್ನು ವಿಮರ್ಶೆ ಮಾಡಿದ್ದಕ್ಕೂ ಈ ಮಾನನಷ್ಟ ಮೊಕದ್ದಮೆಗೂ ಯಾವುದೇ ಸಂಬಂದ ಇಲ್ಲ ಎಂಬುದು ಬಯಲಾಗಿದೆ. ರಾಧೆ ಸಿನಿಮಾ ತಮಗೆ ಇಷ್ಟ ಆಗಿಲ್ಲ ಎಂದು ಸಲ್ಮಾನ್​ ಖಾನ್​ ಅವರ ತಂದೆ ಸಲೀಮ್​ ಖಾನ್​ ಅವರೇ ಇತ್ತೀಚೆಗೆ ಹೇಳಿದ್ದರು. ಮೇ 13ರಂದು ಈದ್​ ಪ್ರಯುಕ್ತ ಬಿಡುಗಡೆ ಆದ ಈ ಚಿತ್ರ ಸಲ್ಲು ವೃತ್ತಿಜೀವನದ ಕಳಪೆ ಸಿನಿಮಾಗಳಲ್ಲೊಂದು ಎಂಬ ಹಣೆಪಟ್ಟೆ ಕಟ್ಟಿಕೊಂಡಿದೆ.

ಇದನ್ನೂ ಓದಿ:

ಸಲ್ಮಾನ್​ ಖಾನ್​ ತಂದೆಗೇ ಇಷ್ಟವಾಗಿಲ್ಲ ರಾಧೆ; ಸಿನಿಮಾ ನೋಡಿದ ಸಲೀಮ್​ ಖಾನ್​ ಹೇಳಿದ್ದೇನು?

ಥಿಯೇಟರ್​ನಲ್ಲಿ ಬಹುಕೋಟಿ ಬಾಚುತ್ತಿದ್ದ ಸಲ್ಮಾನ್​ ಖಾನ್​ ಈಗ ರಾಧೆ ಚಿತ್ರದಿಂದ ಮೊದಲ ದಿನ ಗಳಿಸಿದ್ದು ಬರೀ 10 ಸಾವಿರ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ