AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲ್ಲುಗೆ ವಯಸ್ಸಾಯ್ತು’; ಕುರ್ಚಿಯಿಂದ ಎದ್ದೇಳಲು ಕಷ್ಟಪಟ್ಟ ಸಲ್ಮಾನ್ ಖಾನ್

‘ಸಿಖಂದರ್’ ಸಿನಿಮಾ 2025ರ ಈದ್​ಗೆ ರಿಲೀಸ್ ಆಗಲಿದೆ. ಇದು ಬಿಗ್ ಬಜೆಟ್ ಸಿನಿಮಾ. ಅಲ್ಲದೆ, ಬೇರೆ ಬೇರೆ ಕಡೆಗಳಲ್ಲಿ ಸಿನಿಮಾದ ಶೂಟ್ ನಡೆಯಲಿದೆ. ಈ ಎಲ್ಲಾ ಕಾರಣದಿಂದ ಆದಷ್ಟು ಬೇಗ ಸಿನಿಮಾದ ಕೆಲಸ ಮುಗಿಸಿಕೊಳ್ಳುವ ಆಲೋಚನೆ ತಂಡಕ್ಕೆ ಇದೆ. ಈ ಮಧ್ಯೆ ಸಲ್ಲು ಹೊಸ ವಿಡಿಯೋ ವೈರಲ್ ಆಗಿದೆ.

‘ಸಲ್ಲುಗೆ ವಯಸ್ಸಾಯ್ತು’; ಕುರ್ಚಿಯಿಂದ ಎದ್ದೇಳಲು ಕಷ್ಟಪಟ್ಟ ಸಲ್ಮಾನ್ ಖಾನ್
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Aug 29, 2024 | 8:21 AM

Share

ಸಲ್ಮಾನ್ ಖಾನ್​ಗೆ 58 ವರ್ಷ ಮುಗಿದಿದೆ. ಇನ್ನು ಕೆಲವೇ ತಿಂಗಳಲ್ಲಿ (ಡಿಸೆಂಬರ್ 27) 59ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಅವರು ನಿತ್ಯ ಜಿಮ್ ಮಾಡುತ್ತಾರೆ. ಸಿನಿಮಾಗಳಲ್ಲಿ ಆ್ಯಕ್ಷನ್ ದೃಶ್ಯಗಳನ್ನು ಮಾಡೋಕೆ ಆದ್ಯತೆ ನೀಡುತ್ತಾರೆ. ಆದರೆ, ಸಲ್ಲುಗೆ ಈಗ ಮೊದಲು ಇದ್ದಷ್ಟು ಎನರ್ಜಿ ಇಲ್ಲ. ಅವರಿಗೆ ವಯಸ್ಸಾಗಿದ್ದು, ಎದ್ದೇಳಲು ಕಷ್ಟಪಟ್ಟಿದ್ದಾರೆ ಸದ್ಯ ವೈರಲ್ ಆಗಿರೋ ವಿಡಿಯೋ ಹೀಗೊಂದು ಅನುಮಾನ ಹುಟ್ಟುಹಾಕಿದೆ.

ಸಲ್ಮಾನ್ ಖಾನ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಅವರು ಇತ್ತೀಚೆಗೆ ಈವೆಂಟ್​ ಒಂದರಲ್ಲಿ ಭಾಗಿ ಆಗಿದ್ದರು. ಈ ಈವೆಂಟ್​ನಲ್ಲಿ ಸೋನಾಲಿ ಬೇಂದ್ರೆ ಅವರು ಆಗಮಿಸಿದರು. ಅವರನ್ನು ಭೇಟಿ ಮಾಡಲು ಎದ್ದರು. ಈ ವೇಳೆ ಎದ್ದೇಳಲು ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಸಲ್ಲು ಆರೋಗ್ಯದ ಬಗ್ಗೆ ಅನೇಕರು ಆತಂಕ ಹೊರಹಾಕಿದ್ದಾರೆ. ಸಲ್ಲುಗೆ ವಯಸ್ಸಾಗಿದೆ ಎಂದು ಕೆಲವರು ಹೇಳಿದ್ದಾರೆ.

ಸಲ್ಮಾನ್ ಖಾನ್ ಹಾಗೂ ಸೋನಾಲಿ ಬೇಂದ್ರೆ ಅವರು ಈ ಮೊದಲು ‘ಹಮ್ ಸಾತ್ ಸಾತ್ ಮೇ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಗಮನ ಸೆಳೆದಿತ್ತು. ಈಗ ಬೇರೆ ಕಾರ್ಯಕ್ರಮದಲ್ಲಿ ಇವರ ಭೇಟಿ ನಡೆದಿದೆ. ಸಲ್ಮಾನ್ ಖಾನ್ ಅವರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ  ವೈರಲ್ ಆಗಿದೆ.

ಇದನ್ನೂ ಓದಿ: ರಶ್ಮಿಕಾ ಜೊತೆ ಒಂದೂವರೆ ತಿಂಗಳು ನಿರಂತರವಾಗಿ ಶೂಟಿಂಗ್ ಮಾಡಲಿದ್ದಾರೆ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು ಸದ್ಯ ‘ಸಿಖಂದರ್’ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕಾಗಿ ಅವರು ಮುಂಬೈನಲ್ಲಿ ನಿರಂತರವಾಗಿ 45 ದಿನಗಳ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರವನ್ನು ತಮಿಳಿನ ಎಆರ್​ ಮುರುಗುದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅಟ್ಲಿ ಜೊತೆಗೂ ಸಲ್ಮಾನ್ ಖಾನ್ ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್