AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲ್ಲುಗೆ ವಯಸ್ಸಾಯ್ತು’; ಕುರ್ಚಿಯಿಂದ ಎದ್ದೇಳಲು ಕಷ್ಟಪಟ್ಟ ಸಲ್ಮಾನ್ ಖಾನ್

‘ಸಿಖಂದರ್’ ಸಿನಿಮಾ 2025ರ ಈದ್​ಗೆ ರಿಲೀಸ್ ಆಗಲಿದೆ. ಇದು ಬಿಗ್ ಬಜೆಟ್ ಸಿನಿಮಾ. ಅಲ್ಲದೆ, ಬೇರೆ ಬೇರೆ ಕಡೆಗಳಲ್ಲಿ ಸಿನಿಮಾದ ಶೂಟ್ ನಡೆಯಲಿದೆ. ಈ ಎಲ್ಲಾ ಕಾರಣದಿಂದ ಆದಷ್ಟು ಬೇಗ ಸಿನಿಮಾದ ಕೆಲಸ ಮುಗಿಸಿಕೊಳ್ಳುವ ಆಲೋಚನೆ ತಂಡಕ್ಕೆ ಇದೆ. ಈ ಮಧ್ಯೆ ಸಲ್ಲು ಹೊಸ ವಿಡಿಯೋ ವೈರಲ್ ಆಗಿದೆ.

‘ಸಲ್ಲುಗೆ ವಯಸ್ಸಾಯ್ತು’; ಕುರ್ಚಿಯಿಂದ ಎದ್ದೇಳಲು ಕಷ್ಟಪಟ್ಟ ಸಲ್ಮಾನ್ ಖಾನ್
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Aug 29, 2024 | 8:21 AM

Share

ಸಲ್ಮಾನ್ ಖಾನ್​ಗೆ 58 ವರ್ಷ ಮುಗಿದಿದೆ. ಇನ್ನು ಕೆಲವೇ ತಿಂಗಳಲ್ಲಿ (ಡಿಸೆಂಬರ್ 27) 59ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಅವರು ನಿತ್ಯ ಜಿಮ್ ಮಾಡುತ್ತಾರೆ. ಸಿನಿಮಾಗಳಲ್ಲಿ ಆ್ಯಕ್ಷನ್ ದೃಶ್ಯಗಳನ್ನು ಮಾಡೋಕೆ ಆದ್ಯತೆ ನೀಡುತ್ತಾರೆ. ಆದರೆ, ಸಲ್ಲುಗೆ ಈಗ ಮೊದಲು ಇದ್ದಷ್ಟು ಎನರ್ಜಿ ಇಲ್ಲ. ಅವರಿಗೆ ವಯಸ್ಸಾಗಿದ್ದು, ಎದ್ದೇಳಲು ಕಷ್ಟಪಟ್ಟಿದ್ದಾರೆ ಸದ್ಯ ವೈರಲ್ ಆಗಿರೋ ವಿಡಿಯೋ ಹೀಗೊಂದು ಅನುಮಾನ ಹುಟ್ಟುಹಾಕಿದೆ.

ಸಲ್ಮಾನ್ ಖಾನ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಅವರು ಇತ್ತೀಚೆಗೆ ಈವೆಂಟ್​ ಒಂದರಲ್ಲಿ ಭಾಗಿ ಆಗಿದ್ದರು. ಈ ಈವೆಂಟ್​ನಲ್ಲಿ ಸೋನಾಲಿ ಬೇಂದ್ರೆ ಅವರು ಆಗಮಿಸಿದರು. ಅವರನ್ನು ಭೇಟಿ ಮಾಡಲು ಎದ್ದರು. ಈ ವೇಳೆ ಎದ್ದೇಳಲು ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಸಲ್ಲು ಆರೋಗ್ಯದ ಬಗ್ಗೆ ಅನೇಕರು ಆತಂಕ ಹೊರಹಾಕಿದ್ದಾರೆ. ಸಲ್ಲುಗೆ ವಯಸ್ಸಾಗಿದೆ ಎಂದು ಕೆಲವರು ಹೇಳಿದ್ದಾರೆ.

ಸಲ್ಮಾನ್ ಖಾನ್ ಹಾಗೂ ಸೋನಾಲಿ ಬೇಂದ್ರೆ ಅವರು ಈ ಮೊದಲು ‘ಹಮ್ ಸಾತ್ ಸಾತ್ ಮೇ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಗಮನ ಸೆಳೆದಿತ್ತು. ಈಗ ಬೇರೆ ಕಾರ್ಯಕ್ರಮದಲ್ಲಿ ಇವರ ಭೇಟಿ ನಡೆದಿದೆ. ಸಲ್ಮಾನ್ ಖಾನ್ ಅವರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ  ವೈರಲ್ ಆಗಿದೆ.

ಇದನ್ನೂ ಓದಿ: ರಶ್ಮಿಕಾ ಜೊತೆ ಒಂದೂವರೆ ತಿಂಗಳು ನಿರಂತರವಾಗಿ ಶೂಟಿಂಗ್ ಮಾಡಲಿದ್ದಾರೆ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು ಸದ್ಯ ‘ಸಿಖಂದರ್’ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕಾಗಿ ಅವರು ಮುಂಬೈನಲ್ಲಿ ನಿರಂತರವಾಗಿ 45 ದಿನಗಳ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ ಎಂದು ವರದಿ ಆಗಿದೆ. ಈ ಚಿತ್ರವನ್ನು ತಮಿಳಿನ ಎಆರ್​ ಮುರುಗುದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅಟ್ಲಿ ಜೊತೆಗೂ ಸಲ್ಮಾನ್ ಖಾನ್ ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!