AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಅಪಘಾತ, ಕೃಷ್ಣ ಮೃಗ ಹತ್ಯೆ; ಸಲ್ಮಾನ್ ಖಾನ್ ಮಾಡಿಕೊಂಡ ವಿವಾದಗಳು ಒಂದೆರಡಲ್ಲ

ಸಲ್ಮಾನ್ ಖಾನ್ ಸಾಕಷ್ಟು ಬಾರಿ ಜೈಲು ಸೇರಬೇಕಾಯಿತು. ಅವರು ಮಾಡಿರುವ ವಿವಾದಗಳು ಒಂದೆರಡಲ್ಲ. ಅವರು ಮಾಡಿಕೊಂಡಿರುವುದು ಸಣ್ಣ ವಿವಾದಗಳು ಅಲ್ಲವೇ ಅಲ್ಲ. ಆ ಬಗ್ಗೆ ಇಲ್ಲಿದೆ ವಿವರ.

ಕಾರು ಅಪಘಾತ, ಕೃಷ್ಣ ಮೃಗ ಹತ್ಯೆ; ಸಲ್ಮಾನ್ ಖಾನ್ ಮಾಡಿಕೊಂಡ ವಿವಾದಗಳು ಒಂದೆರಡಲ್ಲ
ಸಲ್ಮಾನ್ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 27, 2023 | 8:28 AM

Share

ನಟ ಸಲ್ಮಾನ್ ಖಾನ್ (Salman Khan) ಅವರು ಬಾಲಿವುಡ್​ನ ಫೇಮಸ್ ಹೀರೋ. ಅವರ ಆಸ್ತಿ ಸಾವಿರಾರು ಕೋಟಿ ರೂಪಾಯಿ ಇದೆ. ಇಷ್ಟೊಂದು ಹಣ ಹಾಗೂ ಜನಪ್ರಿಯತೆ ಸಂಪಾದಿಸಲು ಅವರು ಸಾಕಷ್ಟು ಶ್ರಮಿಸಿದ್ದಾರೆ. ಇದರ ಜೊತೆಗೆ ಅವರು ಮಾಡಿಕೊಂಡಿರುವ ವಿವಾದಗಳು ಒಂದೆರಡಲ್ಲ. ಇದರಿಂದ ಸಲ್ಮಾನ್ ಖಾನ್ ಸಾಕಷ್ಟು ಬಾರಿ ಜೈಲು ಕೂಡ ಸೇರಬೇಕಾಯಿತು. ಇಂದು (ಡಿಸೆಂಬರ್ 27) ಅವರ ಜನ್ಮದಿನ. ಈ ದಿನದಂದು ಅವರು ಮಾಡಿರುವ ವಿವಾದಗಳನ್ನು ಕೂಡ ನೆನಪಿಸಿಕೊಳ್ಳಲಾಗುತ್ತಿದೆ. ಹಾಗಂತ ಅವರು ಮಾಡಿಕೊಂಡಿರುವುದು ಸಣ್ಣ ವಿವಾದಗಳು ಅಲ್ಲವೇ ಅಲ್ಲ. ಆ ಬಗ್ಗೆ ಇಲ್ಲಿದೆ ವಿವರ.

ಕೃಷ್ಣಮೃಗ ಹತ್ಯೆ

ಕೃಷ್ಣಮೃಗ ಹತ್ಯೆ ಪ್ರಕರಣ ಸಲ್ಮಾನ್ ಖಾನ್ ಜೀವನದಲ್ಲಿ ಕಪ್ಪು ಚುಕ್ಕೆ ಆಗಿ ಉಳಿದಿದೆ. 1999ರಲ್ಲಿ ಸಲ್ಮಾನ್ ಖಾನ್ ಅವರ ‘ಹಮ್ ಸಾತ್​ ಸಾತ್ ಹೈ’ ಸಿನಿಮಾ ಶೂಟಿಂಗ್​ಗೆ ಜೋದ್​ಪುರ್​ಗೆ ತೆರಳಿದ್ದರು. ಶೂಟಿಂಗ್ ಬಿಡುವಿನ ವೇಳೆ ಅವರು ಕಾಡಿಗೆ ತೆರಳಿ ಕೃಷ್ಣಮೃಗ ಬೇಟೆ ಆಡಿದ್ದರು. ಇದರಿಂದ ಅವರು ಜೈಲು ವಾಸ ಅನುಭವಿಸಿದ್ದರು. ಈ ಪ್ರಕರಣದಲ್ಲಿ ಶಿಕ್ಷೆ ಕೂಡ ಆಯಿತು. ಇದನ್ನು ಅವರು ಪ್ರಶ್ನಿಸಿದರು. ಸದ್ಯ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಇದೇ ಪ್ರಕರಣದಲ್ಲಿ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಬೆದರಿಕೆ ಇದೆ.

ಹಿಟ್ ಆ್ಯಂಡ್ ರನ್ ಕೇಸ್

ಕೃಷ್ಣ ಮೃಗ ಹತ್ಯೆಯ ಪ್ರಕರಣದ ಕಾವು ತಣ್ಣಗಾಗುತ್ತಿದ್ದಂತೆ ಹಿಟ್ ಆ್ಯಂಡ್ ರನ್ ಕೇಸ್ ಮೂಲಕ ಸಲ್ಮಾನ್ ಖಾನ್ ಸುದ್ದಿ ಆದರು. 2002ರಲ್ಲಿ ಸಲ್ಮಾನ್ ಖಾನ್ ಅವರ ಕಾರು ಬೇಕರಿ ಒಳಗೆ ನುಗ್ಗಿತ್ತು. ಬೇಕರಿ ಸಮೀಪ ಮಲಗಿದ್ದ ವ್ಯಕ್ತಿ ಮೃತಪಟ್ಟಿದ್ದ. ನಂತರ ಸಲ್ಮಾನ್ ಅವರನ್ನು ಬಂಧಿಸಲಾಯಿತು. ಈ ಪ್ರಕರಣದಲ್ಲಿ ತಮ್ಮ ತಪ್ಪು ಇಲ್ಲ ಎಂದು ಸಲ್ಮಾನ್ ಖಾನ್ ಹೇಳಿಕೊಂಡಿದ್ದರು. ತಮ್ಮ ಡ್ರೈವರ್ ಕಾರು ಚಲಾಯಿಸುತ್ತಿದ್ದದಾಗಿ ಸಲ್ಲು ಹೇಳಿಕೊಂಡಿದ್ದರು.

ಐಶ್ವರ್ಯಾ ರೈ

ಸಲ್ಮಾನ್ ಖಾನ್ ಹಾಗೂ ಐಶ್ವರ್ಯಾ ರೈ ಪರಸ್ಪರ ಪ್ರೀತಿಸುತ್ತಿದ್ದರು. ಅನೇಕ ಕಡೆಗಳಲ್ಲಿ ಇವರು ಸುತ್ತಾಡಿದ್ದರು. ಐಶ್ವರ್ಯಾ ಅವರ ಮೇಲೆ ಸಲ್ಲು ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಅವರು ಐಶ್ವರ್ಯಾ ರೈ ಕೆನ್ನೆಗೆ ಬಾರಿಸಿದ್ದರು ಎಂದು ಸುದ್ದಿ ಆಗಿತ್ತು. ಸಲ್ಲು ಜೊತೆ ಬ್ರೇಕಪ್ ಆದ ಬಳಿಕ ಐಶ್ವರ್ಯಾ ರೈ ಅವರು ವಿವೇಕ್ ಒಬೆರಾಯ್ ಜೊತೆ ಡೇಟಿಂಗ್ ಆರಂಭಿಸಿದರು. ಈ ಕಾರಣಕ್ಕೆ ವಿವೇಕ್ ಮೇಲೆ ಸಲ್ಲು ಹಗೆ ಸಾಧಿಸಿದ್ದರು.

ಲವ್ ರಿಲೇಶನ್

ಸಲ್ಮಾನ್ ಖಾನ್ ಅವರು ಕತ್ರಿನಾ, ಐಶ್ವರ್ಯಾ ರೈ ಸೇರಿ ಅನೇಕ ನಟಿಯರ ಜೊತೆ ಸುತ್ತಾಟ ನಡೆಸಿದ್ದಿದೆ. ಈ ಮೂಲಕ ಅವರು ಸಾಕಷ್ಟು ಸುದ್ದಿ ಆಗಿದ್ದರು. ಸದ್ಯ ಸಲ್ಮಾನ್ ಖಾನ್ ಅವರು ಬ್ಯಾಚುಲರ್ ಆಗಿದ್ದಾರೆ.

ಶಾರುಖ್ ಖಾನ್ ಜೊತೆ ಕಿತ್ತಾಟ

ಸಲ್ಮಾನ್ ಖಾನ್ ಅವರು ಕತ್ರಿನಾ ಜೊತೆ ಡೇಟ್ ಮಾಡುತ್ತಿದ್ದ ಸಮಯವದು. ಸಲ್ಮಾನ್ ಖಾನ್ ಹಾಗೂ ಶಾರುಖ್ ಇಬ್ಬರೂ ಕತ್ರಿನಾ ಬರ್ತ್​ಡೇ ಪಾರ್ಟಿಗೆ ಆಗಮಿಸಿದ್ದರು. ಈ ವೇಳೆ ಸಲ್ಲು ಹಾಗೂ ಶಾರುಖ್ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಕಿರಿಕ್ ಆಗಿತ್ತು. ನಂತರ ಇಬ್ಬರೂ ದ್ವೇಷ ಮರೆತು ಒಂದಾದರು.

ಇದನ್ನೂ ಓದಿ: ಎರಡನೇ ಮದುವೆ ಆದ ಸಲ್ಮಾನ್ ಖಾನ್ ಸಹೋದರ ಅರ್ಬಾಜ್; ಹಾರೈಸಿದ ಮಲೈಕಾ ಪುತ್ರ

ಬಿಗ್ ಬಾಸ್

ಸಲ್ಮಾನ್ ಖಾನ್ ಅವರು ಬಿಗ್ ಬಾಸ್ ಶೋನ ನಡೆಸಿಕೊಡುತ್ತಿದ್ದಾರೆ. ಈ ಶೋಗೆ ಬರುವ ಸ್ಪರ್ಧಿಗಳ ಮೇಲೆ ಸಲ್ಲು ಬಳಕೆ ಮಾಡುವ ಶಬ್ದ ಚರ್ಚೆ ಹುಟ್ಟುಹಾಕಿದ್ದಿದೆ. ಅನೇಕ ಬಾರಿ ಇದರಿಂದ ಅವರು ವಿವಾದ ಮಾಡಿಕೊಂಡಿದ್ದರು.

ವೃತ್ತಿ ಜೀವನ ಕೊನೆಗೊಳಿಸಿದ್ರು

ಸಲ್ಮಾನ್ ಖಾನ್ ಅವರಿಗೆ ಯಾರಾದರೂ ಇಷ್ಟ ಆಗಿಲ್ಲ ಎಂದರೆ ಅವರ ವೃತ್ತಿಜೀವನವನ್ನೇ ಕೊನೆಗೊಳಿಸಿ ಬಿಡುತ್ತಾರೆ. ಈ ರೀತಿ ಆದ ಸಾಕಷ್ಟು ಉದಾಹರಣೆ ಇದೆ. ಸಲ್ಮಾನ್ ಖಾನ್ ಅವರು ಈ ರೀತಿ ಸಾಕಷ್ಟು ಬಾರಿ ಟೀಕೆಗೆ ಒಳಗಾಗಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ