AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಲ್​ಫ್ರೆಂಡ್ ಬರ್ತ್​ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಈ ಮೊದಲು ಅನೇಕ ಹುಡುಗಿಯರ ಜೊತೆ ಸುತ್ತಾಟ ನಡೆಸಿದ್ದಾರೆ. ಆದರೆ, ಯಾರನ್ನೂ ಅವರು ಮದುವೆ ಆಗುವ ನಿರ್ಧಾರ ತೆಗೆದುಕೊಂಡಿಲ್ಲ. ಈ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ. ಈಗ ಅವರು ಯೂಲಿಯಾ ಜೊತೆ ಸುತ್ತಾಟ ನಡೆಸುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ.

ಗರ್ಲ್​ಫ್ರೆಂಡ್ ಬರ್ತ್​ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್
ಬರ್ತ್​ಡೇ ಸೆಲೆಬ್ರೇಷನ್​ನಲ್ಲಿ ಸಲ್ಲು
ರಾಜೇಶ್ ದುಗ್ಗುಮನೆ
|

Updated on: Jul 27, 2024 | 7:31 AM

Share

ಸಲ್ಮಾನ್ ಖಾನ್ ಅವರು ಯೂಲಿಯಾ ವಂಟೂರ್ ಅವರ ಬರ್ತ್​ಡೇನ ಅದ್ದೂರಿಯಾಗಿ ಆಚರಿಸಿದ್ದಾರೆ. ಸಲ್ಲು ಸದ್ಯ ಇವರ ಜೊತೆ ಸುತ್ತಾಟ ನಡೆಸುತ್ತಿದ್ದಾರೆ ಎಂದು ಸುದ್ದಿ ಆಗಿತ್ತು. ಈಗ ಯೂಲಿಯಾ ಬರ್ತ್​ಡೇನ ಅದ್ದೂರಿಯಾಗಿ ಆಚರಿಸುವ ಮೂಲಕ ವದಂತಿ ಹೆಚ್ಚುವಂತೆ ಆಗಿದೆ. ಈ ಬರ್ತ್​ಡೇ ಪಾರ್ಟಿಗೆ ಸಾಜಿದ್ ಅಲಿ ಖಾನ್, ಹಿಮೇಶ್ ರೇಶಮಿಯಾ, ಮಿಕಾ ಸಿಂಗ್ ಸೇರಿ ಅನೇಕರು ಆಗಮಿಸಿದ್ದರು. ಸಲ್ಮಾನ್ ಖಾನ್ ಅವರು ಮಿಕಾ ಸಿಂಗ್ ಜೊತೆ ಹಗ್ ಮಾಡಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ. ಇದರ ಜೊತೆಗೆ ಬರ್ತ್​ಡೇ ಗರ್ಲ್ ಯೂಲಿಯಾ ಜೊತೆಯೂ ಕಾಣಿಸಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಈ ಮೊದಲು ಅನೇಕ ಹುಡುಗಿಯರ ಜೊತೆ ಸುತ್ತಾಟ ನಡೆಸಿದ್ದಾರೆ. ಆದರೆ, ಯಾರನ್ನೂ ಅವರು ಮದುವೆ ಆಗುವ ನಿರ್ಧಾರ ತೆಗೆದುಕೊಂಡಿಲ್ಲ. ಈ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ. ಈಗ ಅವರು ಯೂಲಿಯಾ ಜೊತೆ ಸುತ್ತಾಟ ನಡೆಸುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ.

‘ಯೂಲಿಯಾ ವಂಟೂರ್ ಬರ್ತ್​ಡೇ ಸೆಲೆಬ್ರೇಷನ್ ಮಾಡಲು ಒಳ್ಳೆಯ ಗೆಟ್​ ಟುಗೇದರ್ ಆಯೋಜಿಸಲಾಗಿತ್ತು’ ಎಂದು ಮಿಕಾ ಸಿಂಗ್ ಬರೆದುಕೊಂಡಿದ್ದಾರೆ. ಅಲ್ಲದೆ ನಟಿ, ಗಾಯಕಿ ಯೂಲಿಯಾಗೆ ಅವರು ಬರ್ತ್​ಡೇ ವಿಶ್ ತಿಳಿಸಿದ್ದಾರೆ.

ಹಿಮೇಶ್ ರೇಶಮಿಯಾ ಅವರು ಸಲ್ಮಾನ್ ಖಾನ್ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಹಿಮೇಶ್ ಕೆನ್ನೆಗೆ ಸಲ್ಲು ಕಿಸ್ ಮಾಡಿದ್ದಾರೆ. ಈ ಮೂಲಕ ಇಬ್ಬರ ಮಧ್ಯೆ ಇರುವ ಫ್ರೆಂಡ್​ಶಿಪ್ ಎಂಥದ್ದು ಎಂಬುದನ್ನು ತೋರಿಸಿದ್ದಾರೆ. ಈ ಬರ್ತ್​ಡೇ ಸೆಲೆಬ್ರೇಷನ್​ನಿಂದ ಸಲ್ಲು ಹಾಗೂ ಯೂಲಿಯಾ ಮಧ್ಯೆ ಏನೋ ನಡೆಯುತ್ತಿದೆ ಎನ್ನುವ ವಿಚಾರ ಅಧಿಕೃತ ಆದಂತೆ ಆಗಿದೆ.

ಇದನ್ನೂ ಓದಿ: ಕಿಮ್ ಕರ್ದಾಶಿಯಾನ್ ಮೈಮಾಟ ನೋಡಿ ಕಣ್ಣರಳಿಸಿದ ಸಲ್ಮಾನ್ ಖಾನ್; ವಿಡಿಯೋ ವೈರಲ್

2022ರಲ್ಲಿ ಶೆಹನಾಜ್ ಗಿಲ್ ಅವರು ಬಿಗ್ ಬಾಸ್ ವೇದಿಕೆ ಮೇಲೆ ಒಂದು ಮಾತನ್ನು ಹೇಳಿದ್ದರು. ‘ನೀವು ಸಿಂಗಲ್ ಆಗಿದ್ದರೆ ಚೆನ್ನಾಗಿ ಕಾಣುತ್ತೀರಿ’ ಎಂದಿದ್ದರು. ‘ನಾನು ಸಿಂಗಲ್ ಆದಾಗ ಇನ್ನೂ ಚೆನ್ನಾಗಿ ಕಾಣುತ್ತೇನೆ’ ಎಂದಿದ್ದರು ಸಲ್ಲು. ಈ ಮೂಲಕ ತಮಗೆ ಗರ್ಲ್​ಫ್ರೆಂಡ್ ಇದ್ದಾರೆ ಎಂದು ಪರೋಕ್ಷವಾಗಿ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್