AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhoni Birthday: ಧೋನಿ ಬರ್ತ್​ಡೇ ಆಚರಿಸಿ ಹೊಸ ನಿಕ್ ನೇಮ್ ಕೊಟ್ಟ ಸಲ್ಮಾನ್ ಖಾನ್

ಕ್ರಿಕೆಟ್ ಲೋಕ ಹಾಗೂ ಬಣ್ಣದ ಲೋಕದ ಮಧ್ಯೆ ಒಳ್ಳೆಯ ನಂಟಿದೆ. ಅನೇಕ ಕ್ರಿಕೆಟರ್​ಗಳು ಸೆಲೆಬ್ರಿಟಿಗಳ ಜೊತೆ ಕಾಣಿಸಿಕೊಳ್ಳುತ್ತಾರೆ. ಈಗ ಸಲ್ಮಾನ್ ಖಾನ್ ಅವರು ಧೋನಿ ಬರ್ತ್​ಡೇನ ಆಚರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.

Dhoni Birthday: ಧೋನಿ ಬರ್ತ್​ಡೇ ಆಚರಿಸಿ ಹೊಸ ನಿಕ್ ನೇಮ್ ಕೊಟ್ಟ ಸಲ್ಮಾನ್ ಖಾನ್
ಸಲ್ಮಾನ್-ಧೋನಿ
ರಾಜೇಶ್ ದುಗ್ಗುಮನೆ
|

Updated on: Jul 08, 2024 | 11:29 AM

Share

ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರು ಭಾನುವಾರ (ಜುಲೈ) 43ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರ ಬರ್ತ್​ಡೇನ ನಟ ಸಲ್ಮಾನ್ ಖಾನ್ ಅವರು ಮುಂಬೈನಲ್ಲಿರುವ ತಮ್ಮ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಅದ್ದೂರಿಯಾಗಿ ಆಚರಿಸಿದ್ದಾರೆ. ಈ ವೇಳೆ ಧೋನಿ ಜೊತೆ ಅವರ ಪತ್ನಿ ಸಾಕ್ಷಿ ಕೂಡ ಇದ್ದರು. ಬರ್ತ್​ಡೇ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ.

ಧೋನಿ ಅವರಿಗಾಗಿ ಸಲ್ಮಾನ್ ಖಾನ್ ಅವರು ವಿಶೇಷ ಕೇಕ್ ತರಿಸಿದ್ದರು. ಈ ಕೇಕ್​ನ ಧೋನಿ ಅವರು ಕತ್ತರಿಸಿದ್ದಾರೆ. ಕೇಕ್​ನ ಮೊದಲು ಪತ್ನಿ ಸಾಕ್ಷಿಗೆ ತಿನ್ನಿಸಿದ್ದಾರೆ. ಸಲ್ಮಾನ್ ಖಾನ್ ಅವರು ಧೋನಿ ಜೊತೆ ಇರೋ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಜನ್ಮದಿನದ ಶುಭಾಶಯಗಳು ಕಪ್ತಾನ್ (ಕ್ಯಾಪ್ಟನ್) ಸಹಾಬ್’ ಎಂದಿದ್ದಾರೆ. ಧೋನಿಗೆ ಸಲ್ಲು ಕೊಟ್ಟಿರೋ ವಿಶೇಷ ಹೆಸರು ಇಷ್ಟ ಆಗಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್, ಕಮಲ್ ಹಾಸನ್ ಜೊತೆ ಅಟ್ಲಿ ಹೊಸ ಸಿನಿಮಾ? ಸನ್ ಪಿಕ್ಚರ್ಸ್ ನಿರ್ಮಾಣ

ಸಲ್ಮಾನ್ ಹಾಗೂ ಧೋನಿ ಒಟ್ಟಾಗಿ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಸಂಗೀತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಲ್ಮಾನ್ ಖಾನ್ ಅವರು ಧೋನಿಯವರನ್ನು ತಮ್ಮ ಮನೆಗೆ ಆಮಂತ್ರಿಸಿರಬಹುದು ಎಂದು ಅನೇಕರು ಹೇಳಿದ್ದಾರೆ. ಈ ಸಂಗೀತ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಅವರು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದರು.

ಸಲ್ಮಾನ್ ಖಾನ್ ಅವರು ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಎಆರ್​ ಮುರುಗದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಈ ಚಿತ್ರಕ್ಕೆ ನಾಯಕಿ. ಇಬ್ಬರೂ ಇದೇ ಮೊದಲ ಬಾರಿಗೆ ಒಂದಾಗಿದ್ದಾರೆ. ಧೋನಿ ಅವರು ಸಿನಿಮಾ ನಿರ್ಮಾಣದಲ್ಲಿ ಬ್ಯುಸಿ ಆಗಿದ್ದಾರೆ. ಅವರು ಶೀಘ್ರವೇ ಕನ್ನಡ ಸಿನಿಮಾ ನಿರ್ಮಾಣ ಮಾಡುತ್ತಾರೆ ಎನ್ನುವ ಸುದ್ದಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ