AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhoni Birthday: ಧೋನಿ ಬರ್ತ್​ಡೇ ಆಚರಿಸಿ ಹೊಸ ನಿಕ್ ನೇಮ್ ಕೊಟ್ಟ ಸಲ್ಮಾನ್ ಖಾನ್

ಕ್ರಿಕೆಟ್ ಲೋಕ ಹಾಗೂ ಬಣ್ಣದ ಲೋಕದ ಮಧ್ಯೆ ಒಳ್ಳೆಯ ನಂಟಿದೆ. ಅನೇಕ ಕ್ರಿಕೆಟರ್​ಗಳು ಸೆಲೆಬ್ರಿಟಿಗಳ ಜೊತೆ ಕಾಣಿಸಿಕೊಳ್ಳುತ್ತಾರೆ. ಈಗ ಸಲ್ಮಾನ್ ಖಾನ್ ಅವರು ಧೋನಿ ಬರ್ತ್​ಡೇನ ಆಚರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.

Dhoni Birthday: ಧೋನಿ ಬರ್ತ್​ಡೇ ಆಚರಿಸಿ ಹೊಸ ನಿಕ್ ನೇಮ್ ಕೊಟ್ಟ ಸಲ್ಮಾನ್ ಖಾನ್
ಸಲ್ಮಾನ್-ಧೋನಿ
ರಾಜೇಶ್ ದುಗ್ಗುಮನೆ
|

Updated on: Jul 08, 2024 | 11:29 AM

Share

ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರು ಭಾನುವಾರ (ಜುಲೈ) 43ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರ ಬರ್ತ್​ಡೇನ ನಟ ಸಲ್ಮಾನ್ ಖಾನ್ ಅವರು ಮುಂಬೈನಲ್ಲಿರುವ ತಮ್ಮ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಅದ್ದೂರಿಯಾಗಿ ಆಚರಿಸಿದ್ದಾರೆ. ಈ ವೇಳೆ ಧೋನಿ ಜೊತೆ ಅವರ ಪತ್ನಿ ಸಾಕ್ಷಿ ಕೂಡ ಇದ್ದರು. ಬರ್ತ್​ಡೇ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ.

ಧೋನಿ ಅವರಿಗಾಗಿ ಸಲ್ಮಾನ್ ಖಾನ್ ಅವರು ವಿಶೇಷ ಕೇಕ್ ತರಿಸಿದ್ದರು. ಈ ಕೇಕ್​ನ ಧೋನಿ ಅವರು ಕತ್ತರಿಸಿದ್ದಾರೆ. ಕೇಕ್​ನ ಮೊದಲು ಪತ್ನಿ ಸಾಕ್ಷಿಗೆ ತಿನ್ನಿಸಿದ್ದಾರೆ. ಸಲ್ಮಾನ್ ಖಾನ್ ಅವರು ಧೋನಿ ಜೊತೆ ಇರೋ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಜನ್ಮದಿನದ ಶುಭಾಶಯಗಳು ಕಪ್ತಾನ್ (ಕ್ಯಾಪ್ಟನ್) ಸಹಾಬ್’ ಎಂದಿದ್ದಾರೆ. ಧೋನಿಗೆ ಸಲ್ಲು ಕೊಟ್ಟಿರೋ ವಿಶೇಷ ಹೆಸರು ಇಷ್ಟ ಆಗಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್, ಕಮಲ್ ಹಾಸನ್ ಜೊತೆ ಅಟ್ಲಿ ಹೊಸ ಸಿನಿಮಾ? ಸನ್ ಪಿಕ್ಚರ್ಸ್ ನಿರ್ಮಾಣ

ಸಲ್ಮಾನ್ ಹಾಗೂ ಧೋನಿ ಒಟ್ಟಾಗಿ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಸಂಗೀತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಲ್ಮಾನ್ ಖಾನ್ ಅವರು ಧೋನಿಯವರನ್ನು ತಮ್ಮ ಮನೆಗೆ ಆಮಂತ್ರಿಸಿರಬಹುದು ಎಂದು ಅನೇಕರು ಹೇಳಿದ್ದಾರೆ. ಈ ಸಂಗೀತ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಅವರು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದರು.

ಸಲ್ಮಾನ್ ಖಾನ್ ಅವರು ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಎಆರ್​ ಮುರುಗದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಈ ಚಿತ್ರಕ್ಕೆ ನಾಯಕಿ. ಇಬ್ಬರೂ ಇದೇ ಮೊದಲ ಬಾರಿಗೆ ಒಂದಾಗಿದ್ದಾರೆ. ಧೋನಿ ಅವರು ಸಿನಿಮಾ ನಿರ್ಮಾಣದಲ್ಲಿ ಬ್ಯುಸಿ ಆಗಿದ್ದಾರೆ. ಅವರು ಶೀಘ್ರವೇ ಕನ್ನಡ ಸಿನಿಮಾ ನಿರ್ಮಾಣ ಮಾಡುತ್ತಾರೆ ಎನ್ನುವ ಸುದ್ದಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ