AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhoni Birthday: ಧೋನಿ ಬರ್ತ್​ಡೇ ಆಚರಿಸಿ ಹೊಸ ನಿಕ್ ನೇಮ್ ಕೊಟ್ಟ ಸಲ್ಮಾನ್ ಖಾನ್

ಕ್ರಿಕೆಟ್ ಲೋಕ ಹಾಗೂ ಬಣ್ಣದ ಲೋಕದ ಮಧ್ಯೆ ಒಳ್ಳೆಯ ನಂಟಿದೆ. ಅನೇಕ ಕ್ರಿಕೆಟರ್​ಗಳು ಸೆಲೆಬ್ರಿಟಿಗಳ ಜೊತೆ ಕಾಣಿಸಿಕೊಳ್ಳುತ್ತಾರೆ. ಈಗ ಸಲ್ಮಾನ್ ಖಾನ್ ಅವರು ಧೋನಿ ಬರ್ತ್​ಡೇನ ಆಚರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.

Dhoni Birthday: ಧೋನಿ ಬರ್ತ್​ಡೇ ಆಚರಿಸಿ ಹೊಸ ನಿಕ್ ನೇಮ್ ಕೊಟ್ಟ ಸಲ್ಮಾನ್ ಖಾನ್
ಸಲ್ಮಾನ್-ಧೋನಿ
ರಾಜೇಶ್ ದುಗ್ಗುಮನೆ
|

Updated on: Jul 08, 2024 | 11:29 AM

Share

ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರು ಭಾನುವಾರ (ಜುಲೈ) 43ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರ ಬರ್ತ್​ಡೇನ ನಟ ಸಲ್ಮಾನ್ ಖಾನ್ ಅವರು ಮುಂಬೈನಲ್ಲಿರುವ ತಮ್ಮ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಅದ್ದೂರಿಯಾಗಿ ಆಚರಿಸಿದ್ದಾರೆ. ಈ ವೇಳೆ ಧೋನಿ ಜೊತೆ ಅವರ ಪತ್ನಿ ಸಾಕ್ಷಿ ಕೂಡ ಇದ್ದರು. ಬರ್ತ್​ಡೇ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ.

ಧೋನಿ ಅವರಿಗಾಗಿ ಸಲ್ಮಾನ್ ಖಾನ್ ಅವರು ವಿಶೇಷ ಕೇಕ್ ತರಿಸಿದ್ದರು. ಈ ಕೇಕ್​ನ ಧೋನಿ ಅವರು ಕತ್ತರಿಸಿದ್ದಾರೆ. ಕೇಕ್​ನ ಮೊದಲು ಪತ್ನಿ ಸಾಕ್ಷಿಗೆ ತಿನ್ನಿಸಿದ್ದಾರೆ. ಸಲ್ಮಾನ್ ಖಾನ್ ಅವರು ಧೋನಿ ಜೊತೆ ಇರೋ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಜನ್ಮದಿನದ ಶುಭಾಶಯಗಳು ಕಪ್ತಾನ್ (ಕ್ಯಾಪ್ಟನ್) ಸಹಾಬ್’ ಎಂದಿದ್ದಾರೆ. ಧೋನಿಗೆ ಸಲ್ಲು ಕೊಟ್ಟಿರೋ ವಿಶೇಷ ಹೆಸರು ಇಷ್ಟ ಆಗಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್, ಕಮಲ್ ಹಾಸನ್ ಜೊತೆ ಅಟ್ಲಿ ಹೊಸ ಸಿನಿಮಾ? ಸನ್ ಪಿಕ್ಚರ್ಸ್ ನಿರ್ಮಾಣ

ಸಲ್ಮಾನ್ ಹಾಗೂ ಧೋನಿ ಒಟ್ಟಾಗಿ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಸಂಗೀತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಲ್ಮಾನ್ ಖಾನ್ ಅವರು ಧೋನಿಯವರನ್ನು ತಮ್ಮ ಮನೆಗೆ ಆಮಂತ್ರಿಸಿರಬಹುದು ಎಂದು ಅನೇಕರು ಹೇಳಿದ್ದಾರೆ. ಈ ಸಂಗೀತ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಅವರು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದರು.

ಸಲ್ಮಾನ್ ಖಾನ್ ಅವರು ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಎಆರ್​ ಮುರುಗದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಈ ಚಿತ್ರಕ್ಕೆ ನಾಯಕಿ. ಇಬ್ಬರೂ ಇದೇ ಮೊದಲ ಬಾರಿಗೆ ಒಂದಾಗಿದ್ದಾರೆ. ಧೋನಿ ಅವರು ಸಿನಿಮಾ ನಿರ್ಮಾಣದಲ್ಲಿ ಬ್ಯುಸಿ ಆಗಿದ್ದಾರೆ. ಅವರು ಶೀಘ್ರವೇ ಕನ್ನಡ ಸಿನಿಮಾ ನಿರ್ಮಾಣ ಮಾಡುತ್ತಾರೆ ಎನ್ನುವ ಸುದ್ದಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ