AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhoni Birthday: ಧೋನಿ ಬರ್ತ್​ಡೇ ಆಚರಿಸಿ ಹೊಸ ನಿಕ್ ನೇಮ್ ಕೊಟ್ಟ ಸಲ್ಮಾನ್ ಖಾನ್

ಕ್ರಿಕೆಟ್ ಲೋಕ ಹಾಗೂ ಬಣ್ಣದ ಲೋಕದ ಮಧ್ಯೆ ಒಳ್ಳೆಯ ನಂಟಿದೆ. ಅನೇಕ ಕ್ರಿಕೆಟರ್​ಗಳು ಸೆಲೆಬ್ರಿಟಿಗಳ ಜೊತೆ ಕಾಣಿಸಿಕೊಳ್ಳುತ್ತಾರೆ. ಈಗ ಸಲ್ಮಾನ್ ಖಾನ್ ಅವರು ಧೋನಿ ಬರ್ತ್​ಡೇನ ಆಚರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.

Dhoni Birthday: ಧೋನಿ ಬರ್ತ್​ಡೇ ಆಚರಿಸಿ ಹೊಸ ನಿಕ್ ನೇಮ್ ಕೊಟ್ಟ ಸಲ್ಮಾನ್ ಖಾನ್
ಸಲ್ಮಾನ್-ಧೋನಿ
ರಾಜೇಶ್ ದುಗ್ಗುಮನೆ
|

Updated on: Jul 08, 2024 | 11:29 AM

Share

ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರು ಭಾನುವಾರ (ಜುಲೈ) 43ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರ ಬರ್ತ್​ಡೇನ ನಟ ಸಲ್ಮಾನ್ ಖಾನ್ ಅವರು ಮುಂಬೈನಲ್ಲಿರುವ ತಮ್ಮ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಅದ್ದೂರಿಯಾಗಿ ಆಚರಿಸಿದ್ದಾರೆ. ಈ ವೇಳೆ ಧೋನಿ ಜೊತೆ ಅವರ ಪತ್ನಿ ಸಾಕ್ಷಿ ಕೂಡ ಇದ್ದರು. ಬರ್ತ್​ಡೇ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ.

ಧೋನಿ ಅವರಿಗಾಗಿ ಸಲ್ಮಾನ್ ಖಾನ್ ಅವರು ವಿಶೇಷ ಕೇಕ್ ತರಿಸಿದ್ದರು. ಈ ಕೇಕ್​ನ ಧೋನಿ ಅವರು ಕತ್ತರಿಸಿದ್ದಾರೆ. ಕೇಕ್​ನ ಮೊದಲು ಪತ್ನಿ ಸಾಕ್ಷಿಗೆ ತಿನ್ನಿಸಿದ್ದಾರೆ. ಸಲ್ಮಾನ್ ಖಾನ್ ಅವರು ಧೋನಿ ಜೊತೆ ಇರೋ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಜನ್ಮದಿನದ ಶುಭಾಶಯಗಳು ಕಪ್ತಾನ್ (ಕ್ಯಾಪ್ಟನ್) ಸಹಾಬ್’ ಎಂದಿದ್ದಾರೆ. ಧೋನಿಗೆ ಸಲ್ಲು ಕೊಟ್ಟಿರೋ ವಿಶೇಷ ಹೆಸರು ಇಷ್ಟ ಆಗಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್, ಕಮಲ್ ಹಾಸನ್ ಜೊತೆ ಅಟ್ಲಿ ಹೊಸ ಸಿನಿಮಾ? ಸನ್ ಪಿಕ್ಚರ್ಸ್ ನಿರ್ಮಾಣ

ಸಲ್ಮಾನ್ ಹಾಗೂ ಧೋನಿ ಒಟ್ಟಾಗಿ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಸಂಗೀತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಲ್ಮಾನ್ ಖಾನ್ ಅವರು ಧೋನಿಯವರನ್ನು ತಮ್ಮ ಮನೆಗೆ ಆಮಂತ್ರಿಸಿರಬಹುದು ಎಂದು ಅನೇಕರು ಹೇಳಿದ್ದಾರೆ. ಈ ಸಂಗೀತ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಅವರು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದರು.

ಸಲ್ಮಾನ್ ಖಾನ್ ಅವರು ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಎಆರ್​ ಮುರುಗದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಈ ಚಿತ್ರಕ್ಕೆ ನಾಯಕಿ. ಇಬ್ಬರೂ ಇದೇ ಮೊದಲ ಬಾರಿಗೆ ಒಂದಾಗಿದ್ದಾರೆ. ಧೋನಿ ಅವರು ಸಿನಿಮಾ ನಿರ್ಮಾಣದಲ್ಲಿ ಬ್ಯುಸಿ ಆಗಿದ್ದಾರೆ. ಅವರು ಶೀಘ್ರವೇ ಕನ್ನಡ ಸಿನಿಮಾ ನಿರ್ಮಾಣ ಮಾಡುತ್ತಾರೆ ಎನ್ನುವ ಸುದ್ದಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ