‘ಸ್ಟ್ರಗಲಿಂಗ್ ಡೈರೆಕ್ಟರ್ ಜೊತೆ ಸಿನಿಮಾ ಮಾಡಲ್ಲ’; ಹೊಸ ಶಪಥ ಮಾಡಿದ ನಟ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು ‘ಕಿಸಿ ಕ ಭಾಯ್ ಕಿ ಜಾನ್’ ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರೀಕ್ಷೆ ಸುಳ್ಳಾಗಿದೆ. ಸ್ಕ್ರಿಪ್ಟ್ ಆಯ್ಕೆಯಲ್ಲಿ ಸಲ್ಮಾನ್ ಖಾನ್ ಪದೇಪದೇ ಎಡವುತ್ತಿರುವುದೇ ಸೋಲಿಗೆ ಕಾರಣ.

‘ಸ್ಟ್ರಗಲಿಂಗ್ ಡೈರೆಕ್ಟರ್ ಜೊತೆ ಸಿನಿಮಾ ಮಾಡಲ್ಲ’; ಹೊಸ ಶಪಥ ಮಾಡಿದ ನಟ ಸಲ್ಮಾನ್ ಖಾನ್
ಸಲ್ಮಾನ್ ಖಾನ್
Follow us
|

Updated on: Jul 04, 2023 | 10:39 AM

ನಟ ಸಲ್ಮಾನ್ ಖಾನ್ (Salman Khan) ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದ್ದ ಕಾಲ ಒಂದಿತ್ತು. ಆದರೆ, ಈಗ ಕಾಲ ಬದಲಾಗಿದೆ. ಇತ್ತೀಚೆಗೆ ಅವರಿಗೆ ಯಶಸ್ಸು ಸಿಗುತ್ತಿಲ್ಲ. ಈ ಕಾರಣಕ್ಕೆ ಅವರು ಹೊಸ ನಿರ್ಧಾರಕ್ಕೆ ಬಂದಿದ್ದಾರೆ. ಯಾವುದೇ ಕಾರಣಕ್ಕೂ ಅವರು ಸ್ಟ್ರಗಲಿಂಗ್ ನಿರ್ದೇಶಕರ ಜೊತೆ ಸಿನಿಮಾ ಮಾಡದೇ ಇರಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಕುಟುಂಬದವರ ಜೊತೆಗೂ ಅವರು ಸಿನಿಮಾ ಮಾಡದೇ ಇರುವ ನಿರ್ಧಾರಕ್ಕೆ ಬಂದಿದ್ದಾರೆ. ದೊಡ್ಡ ಯಶಸ್ಸು ಕಾಣಬೇಕು ಎಂಬುದಕ್ಕೆ ಅವರು ಈ ರೀತಿ ಆಲೋಚಿಸಿದ್ದಾರೆ.

ಸಲ್ಮಾನ್ ಖಾನ್ ಅವರು ‘ಕಿಸಿ ಕ ಭಾಯ್ ಕಿ ಜಾನ್’ ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರೀಕ್ಷೆ ಸುಳ್ಳಾಗಿದೆ. ಈ ಸಿನಿಮಾ ಹೇಳಿಕೊಳ್ಳುವಂಥ ಯಶಸ್ಸು ಪಡೆಯಲೇ ಇಲ್ಲ. ಇದಕ್ಕೂ ಮೊದಲು ರಿಲೀಸ್ ಆದ ಚಿತ್ರಗಳ ಹಣೆಬರಹವೂ ಅಷ್ಟೇ. ಸ್ಕ್ರಿಪ್ಟ್ ಆಯ್ಕೆಯಲ್ಲಿ ಸಲ್ಮಾನ್ ಖಾನ್ ಪದೇಪದೇ ಎಡವುತ್ತಿರುವುದೇ ಸೋಲಿಗೆ ಕಾರಣ.

ಸಲ್ಮಾನ್ ಖಾನ್ ಅವರು ದೊಡ್ಡ ಹೃದಯ ಹೊಂದಿದ್ದಾರೆ. ಈ ಕಾರಣಕ್ಕೆ ಅನೇಕ ಸ್ಟ್ರಗಲಿಂಗ್ ಡೈರೆಕ್ಟರ್ ಜೊತೆ ಅವರು ಕೆಲಸ ಮಾಡಿದ್ದಾರೆ. ಆದರೆ, ಇದರಿಂದ ಸಲ್ಮಾನ್ ಖಾನ್ ಅವರಿಗೆ ಯಾವುದೇ ಪ್ರಯೋಜನ ಆಗಿಲ್ಲ. ಅವರು ಸಾಲು ಸಾಲು ಸೋಲುಗಳನ್ನು ಕಾಣುತ್ತಿದ್ದಾರೆ. ಈ ಕಾರಣಕ್ಕೆ ಅವರು ಹೊಸ ನಿರ್ಧಾರ ತೆಗೆದುಕೊಂಡಿದ್ದಾರೆ. ‘ಗೆಳೆತನದ ಹೆಸರಿನಲ್ಲಿ ಯಾರ ಸಿನಿಮಾದಲ್ಲೂ ನಟಿಸಲ್ಲ ಎಂಬುದು ಸಲ್ಮಾನ್ ಖಾನ್ ನಿರ್ಧಾರ. ಒಳ್ಳೆಯ ಸ್ಕ್ರಿಪ್ಟ್ ಆಯ್ಕೆಗೆ ಅವರು ಪ್ರಯತ್ನಿಸುತ್ತಿದ್ದಾರೆ. ಇಲ್ಲಿಯವರೆಗೆ ಮಾಡದೇ ಇರುವಂಥ ಪಾತ್ರ ಮಾಡಲು ಸಲ್ಮಾನ್ ಖಾನ್ ಆಲೋಚಿಸುತ್ತಿದ್ದಾರೆ’ ಎಂಬುದಾಗಿ ಮೂಲಗಳು ಹೇಳಿರುವುದಾಗಿ ವರದಿ ಆಗಿದೆ. ಸಹೋದರನ ಜೊತೆ, ಹೋಂ ಬ್ಯಾನರ್​ನಲ್ಲಿ ಸಿನಿಮಾ ಮಾಡದೇ ಇರಲು ಸಲ್ಮಾನ್ ಖಾನ್ ನಿರ್ಧರಿಸಿದ್ದಾರೆ. ಅವರ ವೃತ್ತಿ ಜೀವನಕ್ಕೆ ಮೈಲೇಜ್ ಕೊಡಲೇಬೇಕಾದ ಅಗತ್ಯ ಈಗ ಬಂದೊದಗಿದೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ಗೆ ಬಂತು ಮದುವೆ ಪ್ರಪೋಸಲ್​; ಶಾರುಖ್​ ಖಾನ್​ ಹೆಸರು ಹೇಳಿ ತಪ್ಪಿಸಿಕೊಂಡ ನಟ

ಸಂಜಯ್ ​ಲೀಲಾ ಬನ್ಸಾಲಿ ಜೊತೆ ಸಲ್ಮಾನ್ ಖಾನ್ ಸಿನಿಮಾ ಮಾಡಬೇಕಿತ್ತು. ಇದಕ್ಕೆ ‘ಇನ್ಶಾಅಲ್ಲಾಹ್’ ಎಂದು ಹೆಸರು ಇಡಲಾಗಿತ್ತು. ಆದರೆ, ಇಬ್ಬರ ಮಧ್ಯೆ ಸ್ಕ್ರಿಪ್ಟ್ ವಿಚಾರದಲ್ಲಿ ವೈಮನಸ್ಸು ಮೂಡಿತ್ತು. ಈ ಕಾರಣಕ್ಕೆ ಸಿನಿಮಾ ಅರ್ಧಕ್ಕೆ ನಿಂತಿತ್ತು. ಈಗ ಬನ್ಸಾಲಿ ಅವರನ್ನು ಸಲ್ಮಾನ್ ಖಾನ್ ಮತ್ತೆ ಸಂಪರ್ಕಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ