AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಲ್ಲೂ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್;​ ಆದ್ರೂ ಇದು ಮೆಚ್ಚುವ ಕೆಲಸ

Salman Khan Viral Video: ಕಳೆದ ವರ್ಷ ಕಠಿಣ ಲಾಕ್​ಡೌನ್​ ಜಾರಿ ಆಗಿದ್ದಾಗ ಸಲ್ಮಾನ್​ ಖಾನ್​ ಮುಂಬೈ ಹೊರವಲಯದಲ್ಲಿ ಇರುವ ತಮ್ಮ ಫಾರ್ಮ್​ಹೌಸ್​ ಸೇರಿಕೊಂಡಿದ್ದರು. ಹಾಗಾದರೆ ಈ ಬಾರಿ ಏನು ಮಾಡುತ್ತಿದ್ದಾರೆ?

ಲಾಕ್​ಡೌನ್​ನಲ್ಲೂ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್;​ ಆದ್ರೂ ಇದು ಮೆಚ್ಚುವ ಕೆಲಸ
ಸಲ್ಮಾನ್ ಖಾನ್
ಮದನ್​ ಕುಮಾರ್​
| Updated By: Digi Tech Desk|

Updated on:Apr 26, 2021 | 11:42 AM

Share

ನಟ ಸಲ್ಮಾನ್​ ಖಾನ್​ ಪ್ರತಿದಿನ ಒಂದಿಲ್ಲೊಂದು ಕಾರಣಗಳಿಂದಾಗಿ ಸುದ್ದಿ ಆಗುತ್ತಲೇ ಇರುತ್ತಾರೆ. ಕೆಲವೇ ದಿನಗಳ ಹಿಂದೆ ಅವರ ‘ರಾಧೆ: ಯುವರ್​ ಮೋಸ್ಟ್​ ವಾಟೆಂಡ್​ ಭಾಯ್​’ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಸದ್ದು ಮಾಡಿತ್ತು. ಜನರಿಂದ ಅದಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅದೇನೇ ಇರಲಿ, ಈಗ ಸಿನಿಮಾ ಹೊರದಾತ ಕಾರಣದಿಂದ ಸಲ್ಲು ಮತ್ತೆ ಸುದ್ದಿ ಆಗುತ್ತಿದ್ದಾರೆ. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಮನೆಬಿಟ್ಟು ಹೊರಗೆ ಬಂದಿದ್ದಾರೆ.

ಮುಂಬೈನಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದೆ. ಹಾಗಾಗಿ ಸದ್ಯ ಅಲ್ಲಿ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಬೇರೆ ಸ್ಟಾರ್​ ನಟರು ಮನೆಯೊಳಗೆ ಕೂತಿರುವಾಗ ಸಲ್ಮಾನ್​ ಖಾನ್​​ ಮಾತ್ರ ಮುಂಬೈ ನಗರವನ್ನು ಸುತ್ತುತ್ತಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲೊ ವೈರಲ್​ ಆಗುತ್ತಿವೆ. ಸಲ್ಲು ಮುಂಬೈ ಸುತ್ತುತ್ತಿದ್ದಾರೆ ಎಂದರೆ ಅವರು ಮೋಜು ಮಸ್ತಿ ಮಾಡುತ್ತಿದ್ದಾರೆ ಎಂದರ್ಥವಲ್ಲ. ಲಾಕ್​ಡೌನ್​ನಲ್ಲಿ ಒಂದೊಳ್ಳೆಯ ಕಾರಣಕ್ಕಾಗಿ ಅವರು ಮನೆಯಿಂದ ಆಚೆ ಬಂದಿದ್ದಾರೆ.

ಸಿನಿಮಾದ ಜೊತೆಜೊತೆಗೆ ಕೆಲವು ಸಮಾಜಮುಖಿ ಕಾರ್ಯಗಳಿಂದಲೂ ಸಲ್ಮಾನ್​ ಖಾನ್​ ಗುರುತಿಸಿಕೊಂಡಿದ್ದಾರೆ. ಭಾನುವಾರ (ಏ.25) ಅವರು ಕೋವಿಡ್​ ವಾರಿಯರ್​ಗಳಿಗಾಗಿ ಶ್ರಮಿಸಿದ್ದಾರೆ. ಕೊರೊನಾ ವೈರಸ್​ ಎರಡನೇ ಅಲೆ ತೀವ್ರ ಕಾಟ ಕೊಡುತ್ತಿರುವ ಈ ಸಂದರ್ಭದಲ್ಲಿ ಮುಂಬೈ ನಗರದಲ್ಲಿ ಕೆಲಸ ಮಾಡುತ್ತಿರುವ ಫ್ರಂಟ್​ಲೈನ್​ ವರ್ಕರ್​ಗಳಿಗೆ ಅವರು ಫುಡ್​ ಕಿಟ್​ಗಳನ್ನು ವಿತರಿಸಿದ್ದಾರೆ.

ಮುಂಬೈ ಪೊಲೀಸರು, ಬೃಹನ್​ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗೆ 5 ಸಾವಿರ ಆಹಾರದ ಪ್ಯಾಕೆಟ್​ ಮತ್ತು ನೀರಿನ ಬಾಟಲಿಗಳನ್ನು ಸಲ್ಮಾನ್​ ಖಾನ್​ ನೇತೃತ್ವದಲ್ಲಿ ವಿತರಣೆ ಮಾಡಲಾಗಿದೆ. ಈ ಫೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರ ಅಭಿಮಾನಿಗಳು ಸಲ್ಲು ಕೆಲಸಕ್ಕೆ ಭಾರಿ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕಳೆದ ವರ್ಷ ಕಠಿಣ ಲಾಕ್​ಡೌನ್​ ಜಾರಿ ಆಗಿದ್ದಾಗ ಸಲ್ಮಾನ್​ ಖಾನ್​ ಅವರು ಮುಂಬೈ ಹೊರವಲಯದಲ್ಲಿ ಇರುವ ತಮ್ಮ ಫಾರ್ಮ್​ಹೌಸ್​ ಸೇರಿಕೊಂಡಿದ್ದರು. ಅಲ್ಲಿಂದಲೇ ಜನರಿಗೆ ತಮ್ಮ ಕೈಲಾದ ಸಹಾಯವನ್ನು ಮಾಡಿದ್ದರು.

ಸಿನಿಮಾ ವಿಚಾರಕ್ಕೆ ಬರುವುದಾದರೆ ಸಲ್ಲು ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅನುಮತಿ ಇರುವ ಚಿತ್ರಮಂದಿರಗಳು ಮತ್ತು ಕೆಲವು ಓಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ಮೇ 13ರಂದು  ಈ ಸಿನಿಮಾ ರಿಲೀಸ್​ ಆಗಲಿದೆ. ಚಿತ್ರವನ್ನು ಬಹಿಷ್ಕಾರ ಮಾಡಬೇಕು ಎಂದು ಸುಶಾಂತ್​ ಸಿಂಗ್ ರಜಪೂತ್​ ಅಭಿಮಾನಿಗಳು ಪಟ್ಟು ಹಿಡಿದು ಕೂತಿದ್ದಾರೆ. ಅದರ ನಡುವೆ ‘ರಾಧೆ’ ಸಿನಿಮಾ ಹಣೆಬರಹ ಏನಾಗಲಿದೆ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.

ಇದನ್ನೂ ಓದಿ: Salman Khan: ಸಲ್ಮಾನ್​ ಖಾನ್​ ವಿರುದ್ಧ ತಿರುಗಿ ಬಿದ್ದ ಸುಶಾಂತ್ ಫ್ಯಾನ್ಸ್​; ‘ರಾಧೆ’ ಬಹಿಷ್ಕಾರ ಮಾಡಲು ಶಪಥ

Radhe Trailer: ರಾಧೆ ಟ್ರೇಲರ್ ಮೂಲಕ ಧೂಳೆಬ್ಬಿಸಿದ ಸಲ್ಮಾನ್ ಖಾನ್; ಹೇಗಿದ್ದಾನೆ ಮೋಸ್ಟ್ ವಾಂಟೆಡ್ ಭಾಯ್?

Published On - 11:29 am, Mon, 26 April 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ