AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಲ್ಲೂ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್;​ ಆದ್ರೂ ಇದು ಮೆಚ್ಚುವ ಕೆಲಸ

Salman Khan Viral Video: ಕಳೆದ ವರ್ಷ ಕಠಿಣ ಲಾಕ್​ಡೌನ್​ ಜಾರಿ ಆಗಿದ್ದಾಗ ಸಲ್ಮಾನ್​ ಖಾನ್​ ಮುಂಬೈ ಹೊರವಲಯದಲ್ಲಿ ಇರುವ ತಮ್ಮ ಫಾರ್ಮ್​ಹೌಸ್​ ಸೇರಿಕೊಂಡಿದ್ದರು. ಹಾಗಾದರೆ ಈ ಬಾರಿ ಏನು ಮಾಡುತ್ತಿದ್ದಾರೆ?

ಲಾಕ್​ಡೌನ್​ನಲ್ಲೂ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್;​ ಆದ್ರೂ ಇದು ಮೆಚ್ಚುವ ಕೆಲಸ
ಸಲ್ಮಾನ್ ಖಾನ್
ಮದನ್​ ಕುಮಾರ್​
| Edited By: |

Updated on:Apr 26, 2021 | 11:42 AM

Share

ನಟ ಸಲ್ಮಾನ್​ ಖಾನ್​ ಪ್ರತಿದಿನ ಒಂದಿಲ್ಲೊಂದು ಕಾರಣಗಳಿಂದಾಗಿ ಸುದ್ದಿ ಆಗುತ್ತಲೇ ಇರುತ್ತಾರೆ. ಕೆಲವೇ ದಿನಗಳ ಹಿಂದೆ ಅವರ ‘ರಾಧೆ: ಯುವರ್​ ಮೋಸ್ಟ್​ ವಾಟೆಂಡ್​ ಭಾಯ್​’ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಸದ್ದು ಮಾಡಿತ್ತು. ಜನರಿಂದ ಅದಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅದೇನೇ ಇರಲಿ, ಈಗ ಸಿನಿಮಾ ಹೊರದಾತ ಕಾರಣದಿಂದ ಸಲ್ಲು ಮತ್ತೆ ಸುದ್ದಿ ಆಗುತ್ತಿದ್ದಾರೆ. ಲಾಕ್​ಡೌನ್​ ಸಂದರ್ಭದಲ್ಲಿ ಅವರು ಮನೆಬಿಟ್ಟು ಹೊರಗೆ ಬಂದಿದ್ದಾರೆ.

ಮುಂಬೈನಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದೆ. ಹಾಗಾಗಿ ಸದ್ಯ ಅಲ್ಲಿ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಬೇರೆ ಸ್ಟಾರ್​ ನಟರು ಮನೆಯೊಳಗೆ ಕೂತಿರುವಾಗ ಸಲ್ಮಾನ್​ ಖಾನ್​​ ಮಾತ್ರ ಮುಂಬೈ ನಗರವನ್ನು ಸುತ್ತುತ್ತಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲೊ ವೈರಲ್​ ಆಗುತ್ತಿವೆ. ಸಲ್ಲು ಮುಂಬೈ ಸುತ್ತುತ್ತಿದ್ದಾರೆ ಎಂದರೆ ಅವರು ಮೋಜು ಮಸ್ತಿ ಮಾಡುತ್ತಿದ್ದಾರೆ ಎಂದರ್ಥವಲ್ಲ. ಲಾಕ್​ಡೌನ್​ನಲ್ಲಿ ಒಂದೊಳ್ಳೆಯ ಕಾರಣಕ್ಕಾಗಿ ಅವರು ಮನೆಯಿಂದ ಆಚೆ ಬಂದಿದ್ದಾರೆ.

ಸಿನಿಮಾದ ಜೊತೆಜೊತೆಗೆ ಕೆಲವು ಸಮಾಜಮುಖಿ ಕಾರ್ಯಗಳಿಂದಲೂ ಸಲ್ಮಾನ್​ ಖಾನ್​ ಗುರುತಿಸಿಕೊಂಡಿದ್ದಾರೆ. ಭಾನುವಾರ (ಏ.25) ಅವರು ಕೋವಿಡ್​ ವಾರಿಯರ್​ಗಳಿಗಾಗಿ ಶ್ರಮಿಸಿದ್ದಾರೆ. ಕೊರೊನಾ ವೈರಸ್​ ಎರಡನೇ ಅಲೆ ತೀವ್ರ ಕಾಟ ಕೊಡುತ್ತಿರುವ ಈ ಸಂದರ್ಭದಲ್ಲಿ ಮುಂಬೈ ನಗರದಲ್ಲಿ ಕೆಲಸ ಮಾಡುತ್ತಿರುವ ಫ್ರಂಟ್​ಲೈನ್​ ವರ್ಕರ್​ಗಳಿಗೆ ಅವರು ಫುಡ್​ ಕಿಟ್​ಗಳನ್ನು ವಿತರಿಸಿದ್ದಾರೆ.

ಮುಂಬೈ ಪೊಲೀಸರು, ಬೃಹನ್​ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗೆ 5 ಸಾವಿರ ಆಹಾರದ ಪ್ಯಾಕೆಟ್​ ಮತ್ತು ನೀರಿನ ಬಾಟಲಿಗಳನ್ನು ಸಲ್ಮಾನ್​ ಖಾನ್​ ನೇತೃತ್ವದಲ್ಲಿ ವಿತರಣೆ ಮಾಡಲಾಗಿದೆ. ಈ ಫೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರ ಅಭಿಮಾನಿಗಳು ಸಲ್ಲು ಕೆಲಸಕ್ಕೆ ಭಾರಿ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕಳೆದ ವರ್ಷ ಕಠಿಣ ಲಾಕ್​ಡೌನ್​ ಜಾರಿ ಆಗಿದ್ದಾಗ ಸಲ್ಮಾನ್​ ಖಾನ್​ ಅವರು ಮುಂಬೈ ಹೊರವಲಯದಲ್ಲಿ ಇರುವ ತಮ್ಮ ಫಾರ್ಮ್​ಹೌಸ್​ ಸೇರಿಕೊಂಡಿದ್ದರು. ಅಲ್ಲಿಂದಲೇ ಜನರಿಗೆ ತಮ್ಮ ಕೈಲಾದ ಸಹಾಯವನ್ನು ಮಾಡಿದ್ದರು.

ಸಿನಿಮಾ ವಿಚಾರಕ್ಕೆ ಬರುವುದಾದರೆ ಸಲ್ಲು ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅನುಮತಿ ಇರುವ ಚಿತ್ರಮಂದಿರಗಳು ಮತ್ತು ಕೆಲವು ಓಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ಮೇ 13ರಂದು  ಈ ಸಿನಿಮಾ ರಿಲೀಸ್​ ಆಗಲಿದೆ. ಚಿತ್ರವನ್ನು ಬಹಿಷ್ಕಾರ ಮಾಡಬೇಕು ಎಂದು ಸುಶಾಂತ್​ ಸಿಂಗ್ ರಜಪೂತ್​ ಅಭಿಮಾನಿಗಳು ಪಟ್ಟು ಹಿಡಿದು ಕೂತಿದ್ದಾರೆ. ಅದರ ನಡುವೆ ‘ರಾಧೆ’ ಸಿನಿಮಾ ಹಣೆಬರಹ ಏನಾಗಲಿದೆ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.

ಇದನ್ನೂ ಓದಿ: Salman Khan: ಸಲ್ಮಾನ್​ ಖಾನ್​ ವಿರುದ್ಧ ತಿರುಗಿ ಬಿದ್ದ ಸುಶಾಂತ್ ಫ್ಯಾನ್ಸ್​; ‘ರಾಧೆ’ ಬಹಿಷ್ಕಾರ ಮಾಡಲು ಶಪಥ

Radhe Trailer: ರಾಧೆ ಟ್ರೇಲರ್ ಮೂಲಕ ಧೂಳೆಬ್ಬಿಸಿದ ಸಲ್ಮಾನ್ ಖಾನ್; ಹೇಗಿದ್ದಾನೆ ಮೋಸ್ಟ್ ವಾಂಟೆಡ್ ಭಾಯ್?

Published On - 11:29 am, Mon, 26 April 21

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ