AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಲಾರೆನ್ಸ್​ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ ಎದುರಾಗಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಖಾನ್​ಗೆ ಇದೀಗ ಲಾರೆನ್ಸ್​ ಬಿಷ್ಣೋಯ್ ಸಹೋದರ ಹೊಸ ಬೆದರಿಕೆ ಹಾಕಿದ್ದಾನೆ. ಕಳೆದ 10 ದಿನಗಳಲ್ಲಿ ಮೂರು ಬೆದರಿಕೆಗಳು ಬಂದಿವೆ.

ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಲಾರೆನ್ಸ್​ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ
ಸಲ್ಮಾನ್ ಖಾನ್ Image Credit source: Bollywood Hungama
ನಯನಾ ರಾಜೀವ್
|

Updated on:Nov 05, 2024 | 9:56 AM

Share

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ ಎದುರಾಗಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಖಾನ್​ಗೆ ಇದೀಗ ಲಾರೆನ್ಸ್​ ಬಿಷ್ಣೋಯ್ ಸಹೋದರ ಹೊಸ ಬೆದರಿಕೆ ಹಾಕಿದ್ದಾನೆ. ಕಳೆದ 10 ದಿನಗಳಲ್ಲಿ ಮೂರು ಬೆದರಿಕೆಗಳು ಬಂದಿವೆ.

ಮುಂಬೈ ಸಂಚಾರ ಪೊಲೀಸರಿಗೆ ಕರೆ ಬಂದಿದ್ದು, ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ. ಕೊಡಬೇಕು ಇಲ್ಲವಾದಲ್ಲಿ ಕೊಲ್ಲುವುದೊಂದೇ ಸಾರಿ ಎಂದು ಹೇಳಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಎಂದು ಹೇಳಿಕೊಳ್ಳುವ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 30ರಂದು ಮತ್ತೊಂದು ಕೊಲೆ ಬೆದರಿಕೆ ಬಂದಿತ್ತು ಯಾರೋ ಮುಂಬೈ ಟ್ರಾಫಿಕ್ ಪೊಲೀಸರಿಗೆ ಕರೆ ಮಾಡಿ 2 ಕೋಟಿ ರೂ. ಕೊಡದಿದ್ದರೆ ಸಲ್ಮಾನ್​ ಖಾನ್​ರನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಬೆದರಿಕೆ ಸಂದೇಶ ಬಂದ ನಂತರ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಶಾಸಕ ಮತ್ತು ದಿ. ಬಾಬಾ ಸಿದ್ದಿಕಿ ಅವರ ಪುತ್ರ ಸಲ್ಮಾನ್ ಖಾನ್ ಮತ್ತು ಜೀಶನ್ ಸಿದ್ದಿಕಿ ಅವರನ್ನು ಒಳಗೊಂಡ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಕಳೆದ ನೋಯ್ಡಾದಲ್ಲಿ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ .

ಮತ್ತಷ್ಟು ಓದಿ: ‘ಆ ಮೆಸೇಜ್ ಮಿಸ್ ಆಗಿ ಹೋಯ್ತು’; ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿ ಕ್ಷಮೆ ಕೇಳಿದ ವ್ಯಕ್ತಿ

ಗುರ್ಫಾನ್ ಖಾನ್ ಎಂದು ಕರೆಯಲ್ಪಡುವ ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಯನ್ನು ನೋಯ್ಡಾದ ಸೆಕ್ಟರ್ 39 ರಲ್ಲಿ ಬಂಧಿಸಲಾಗಿದೆ. ಬೆದರಿಕೆ ಹಾಕಿದ್ದಲ್ಲದೆ, ಆರೋಪಿ ಮೊಹಮ್ಮದ್ ತಯ್ಯಬ್ ಅಲಿಯಾಸ್ ಗುರ್ಫಾನ್, ಜೀಶನ್ ಸಿದ್ದಿಕಿ ಮತ್ತು ಸಲ್ಮಾನ್ ಖಾನ್ ಅವರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.

ಅಕ್ಟೋಬರ್ 12 ರಂದು, ಬಾಬಾ ಸಿದ್ದಿಕಿ ಅವರು ದಸರಾ ಸಂದರ್ಭದಲ್ಲಿ ಪಟಾಕಿ ಸಿಡಿಸುವಾಗ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಹತ್ಯೆಯಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:55 am, Tue, 5 November 24

Follow Us
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ