ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಲಾರೆನ್ಸ್​ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ ಎದುರಾಗಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಖಾನ್​ಗೆ ಇದೀಗ ಲಾರೆನ್ಸ್​ ಬಿಷ್ಣೋಯ್ ಸಹೋದರ ಹೊಸ ಬೆದರಿಕೆ ಹಾಕಿದ್ದಾನೆ. ಕಳೆದ 10 ದಿನಗಳಲ್ಲಿ ಮೂರು ಬೆದರಿಕೆಗಳು ಬಂದಿವೆ.

ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಲಾರೆನ್ಸ್​ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ
ಸಲ್ಮಾನ್ ಖಾನ್
Image Credit source: Bollywood Hungama

Updated on: Nov 05, 2024 | 9:56 AM

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ ಎದುರಾಗಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಖಾನ್​ಗೆ ಇದೀಗ ಲಾರೆನ್ಸ್​ ಬಿಷ್ಣೋಯ್ ಸಹೋದರ ಹೊಸ ಬೆದರಿಕೆ ಹಾಕಿದ್ದಾನೆ. ಕಳೆದ 10 ದಿನಗಳಲ್ಲಿ ಮೂರು ಬೆದರಿಕೆಗಳು ಬಂದಿವೆ.

ಮುಂಬೈ ಸಂಚಾರ ಪೊಲೀಸರಿಗೆ ಕರೆ ಬಂದಿದ್ದು, ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ. ಕೊಡಬೇಕು ಇಲ್ಲವಾದಲ್ಲಿ ಕೊಲ್ಲುವುದೊಂದೇ ಸಾರಿ ಎಂದು ಹೇಳಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಎಂದು ಹೇಳಿಕೊಳ್ಳುವ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 30ರಂದು ಮತ್ತೊಂದು ಕೊಲೆ ಬೆದರಿಕೆ ಬಂದಿತ್ತು
ಯಾರೋ ಮುಂಬೈ ಟ್ರಾಫಿಕ್ ಪೊಲೀಸರಿಗೆ ಕರೆ ಮಾಡಿ 2 ಕೋಟಿ ರೂ. ಕೊಡದಿದ್ದರೆ ಸಲ್ಮಾನ್​ ಖಾನ್​ರನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಬೆದರಿಕೆ ಸಂದೇಶ ಬಂದ ನಂತರ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಶಾಸಕ ಮತ್ತು ದಿ. ಬಾಬಾ ಸಿದ್ದಿಕಿ ಅವರ ಪುತ್ರ ಸಲ್ಮಾನ್ ಖಾನ್ ಮತ್ತು ಜೀಶನ್ ಸಿದ್ದಿಕಿ ಅವರನ್ನು ಒಳಗೊಂಡ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಕಳೆದ ನೋಯ್ಡಾದಲ್ಲಿ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ .

ಮತ್ತಷ್ಟು ಓದಿ: ‘ಆ ಮೆಸೇಜ್ ಮಿಸ್ ಆಗಿ ಹೋಯ್ತು’; ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿ ಕ್ಷಮೆ ಕೇಳಿದ ವ್ಯಕ್ತಿ

ಗುರ್ಫಾನ್ ಖಾನ್ ಎಂದು ಕರೆಯಲ್ಪಡುವ ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಯನ್ನು ನೋಯ್ಡಾದ ಸೆಕ್ಟರ್ 39 ರಲ್ಲಿ ಬಂಧಿಸಲಾಗಿದೆ. ಬೆದರಿಕೆ ಹಾಕಿದ್ದಲ್ಲದೆ, ಆರೋಪಿ ಮೊಹಮ್ಮದ್ ತಯ್ಯಬ್ ಅಲಿಯಾಸ್ ಗುರ್ಫಾನ್, ಜೀಶನ್ ಸಿದ್ದಿಕಿ ಮತ್ತು ಸಲ್ಮಾನ್ ಖಾನ್ ಅವರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.

ಅಕ್ಟೋಬರ್ 12 ರಂದು, ಬಾಬಾ ಸಿದ್ದಿಕಿ ಅವರು ದಸರಾ ಸಂದರ್ಭದಲ್ಲಿ ಪಟಾಕಿ ಸಿಡಿಸುವಾಗ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಹತ್ಯೆಯಾಗಿದ್ದರು.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published On - 9:55 am, Tue, 5 November 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us