AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ತಂದೆಗೇ ಇಷ್ಟವಾಗಿಲ್ಲ ರಾಧೆ; ಸಿನಿಮಾ ನೋಡಿದ ಸಲೀಮ್​ ಖಾನ್​ ಹೇಳಿದ್ದೇನು?

ಹಿಂದಿ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಲ್ಮಾನ್​ ಖಾನ್ ತಂದೆ ಹಾಗೂ ಚಿತ್ರಕಥೆ ಬರಹಗಾರ ಸಲೀಮ್​ ಖಾನ್​ ಮಾತನಾಡಿದ್ದಾರೆ. ಈ ವೇಳೆ ಅವರು ರಾಧೆ ಬಗ್ಗ ಮಾತನಾಡಿದ್ದಾರೆ.

ಸಲ್ಮಾನ್​ ಖಾನ್​ ತಂದೆಗೇ ಇಷ್ಟವಾಗಿಲ್ಲ ರಾಧೆ; ಸಿನಿಮಾ ನೋಡಿದ ಸಲೀಮ್​ ಖಾನ್​ ಹೇಳಿದ್ದೇನು?
ಸಲ್ಮಾನ್​ ಖಾನ್​-ಸಲೀಮ್​ ಖಾನ್
ರಾಜೇಶ್ ದುಗ್ಗುಮನೆ
|

Updated on: May 27, 2021 | 6:56 PM

Share

‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ವಿಮರ್ಶೆ ಧನಾತ್ಮಕವಾಗಿರಲಿಲ್ಲ. ಈ ಚಿತ್ರವನ್ನು ಹೊಗಳಿದ್ದಕ್ಕಿಂತ ತೆಗಳಿದವರೇ ಹೆಚ್ಚು. ಈಗ ರಾಧೆ ಚಿತ್ರವನ್ನು ಸಲ್ಮಾನ್​ ಖಾನ್​ ತಂದೆ ಹಾಗೂ ಚಿತ್ರಕಥೆ ಬರಹಗಾರ ಸಲೀಮ್​ ಖಾನ್​ ಅವರೇ ತೆಗಳಿದ್ದಾರೆ. ರಾಧೆ ಸಿನಿಮಾದಿಂದ ಸಾಕಷ್ಟು ನಿರಾಸೆ ಉಂಟಾಗಿದೆ ಎಂದಿದ್ದಾರೆ. ಇದು ಸಲ್ಮಾನ್​ ಖಾನ್​ಗೆ ತೀವ್ರ ಮುಖಭಂಗ ಉಂಟು ಮಾಡಿದೆ.

ಹಿಂದಿ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಲೀಮ್​ ಖಾನ್​ ಮಾತನಾಡಿದ್ದಾರೆ. ದಬಾಂಗ್​-3 ಸಾಧಾರಾಣವಾಗಿತ್ತು. ಭಜರಂಗಿ ಭಾಯಿಜಾನ್​ ಸಿನಿಮಾ ತುಂಬಾ ಉತ್ತಮವಾಗಿತ್ತು. ಆದರೆ, ರಾಧೆ ಸಿನಿಮಾ ನನಗೆ ಇಷ್ಟವಾಗಿಲ್ಲ ಎಂದು ಸಲೀಮ್​ ಖಾನ್​ ಅಭಿಪ್ರಾಯಪಟ್ಟಿದ್ದಾರೆ.

ಹಿಂದಿಯಲ್ಲಿ ಉತ್ತಮ ಕಥೆ ಬರಹಗಾರರಿಲ್ಲ. ಕಥೆ ಬರೆಯುವವರು ಹಿಂದಿ ಅಥವಾ ಉರ್ದು ಸಾಹಿತ್ಯವನ್ನು ಓದಿಲ್ಲ. ಹೊರಗಿನ ಯಾವುದೋ ಸಿನಿಮಾ ನೋಡುತ್ತಾರೆ. ಅದನ್ನು ಇಲ್ಲಿನ ಶೈಲಿಗೆ ತಕ್ಕಂತೆ ಬದಲಾಯಿಸಲು ಪ್ರಯತ್ನಿಸುತ್ತಾರೆ ಎಂದು ಹೇಳುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸತನ ಇಲ್ಲ ಎಂಬುದನ್ನು ಸಲೀಮ್​ ಖಾನ್​ ಒತ್ತಿ ಹೇಳಿದ್ದಾರೆ.

ಕಮರ್ಷಿಯಲ್​ ಸಿನಿಮಾಗಳು ಅದ್ದರದ್ದೇ ಆದ ಜವಾಬ್ದಾರಿ ಹೊಂದಿದೆ. ಕಮರ್ಷಿಯಲ್​ ಚಿತ್ರದಿಂದ ಪ್ರತಿಯೊಬ್ಬನಿಗೂ ಹಣ ದೊರಕಬೇಕು. ಕಲಾವಿದರು​, ನಿರ್ಮಾಪಕರು, ಹಂಚಿಕೆದಾರರು ಸೇರಿ ಎಲ್ಲರಿಗೂ ಹಣ ಸಿಗಬೇಕು. ರಾಧೆ ಸಿನಿಮಾ ಹಣ ಮಾಡಿದೆ. ಆದರೆ, ಸಿನಿಮಾ ಅಷ್ಟೊಂದು ಉತ್ತಮವಾಗಿ ಮೂಡಿ ಬಂದಿಲ್ಲ ಎಂದಿದ್ದಾರೆ.

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಮೊದಲ ದಿನ ಸಿನಿಮಾ ನೋಡೋಕೆ ಸಿನಿಪ್ರಿಯರು ಮುಗಿ ಬಿದ್ದಿದ್ದರು. ಇಷ್ಟೆಲ್ಲ ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ ಸೋತಿತ್ತು. ರಾಧೆ ಚಿತ್ರವನ್ನು ಬಾಲಿವುಡ್​ ನಟ ಕಮಾಲ್​ ಖಾನ್ ಕಳಪೆ ಎಂದು ಹೇಳಿದ್ದರು. ಇದಕ್ಕೆ ಸಂಬಂಧಿಸಿ ಕಮಾಲ್​ ವಿರುದ್ಧ ಸಲ್ಮಾನ್​ ಖಾನ್​ ಮಾನನಷ್ಟ ಮೊಕದ್ದಮೆ ಹೂಡಿದ್ದರು.

‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಈಗ ಸಲ್ಮಾನ್​ ಖಾನ್​ ನನ್ನ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ನಾನು ಅವರ ಸಿನಿಮಾಗಳನ್ನು ಇನ್ಮುಂದೆ ವಿಮರ್ಶೆ ಮಾಡುವುದಿಲ್ಲ’ ಎಂದು ಕಮಾಲ್​ ಶಪಥ ಮಾಡಿದ್ದರು.

ಇದನ್ನೂ ಓದಿ: ರಾಧೆ ಸಿನಿಮಾ ಕಳಪೆ ಎಂದ ನಟನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಲ್ಮಾನ್​ ಖಾನ್​

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ