AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ತಂದೆಗೇ ಇಷ್ಟವಾಗಿಲ್ಲ ರಾಧೆ; ಸಿನಿಮಾ ನೋಡಿದ ಸಲೀಮ್​ ಖಾನ್​ ಹೇಳಿದ್ದೇನು?

ಹಿಂದಿ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಲ್ಮಾನ್​ ಖಾನ್ ತಂದೆ ಹಾಗೂ ಚಿತ್ರಕಥೆ ಬರಹಗಾರ ಸಲೀಮ್​ ಖಾನ್​ ಮಾತನಾಡಿದ್ದಾರೆ. ಈ ವೇಳೆ ಅವರು ರಾಧೆ ಬಗ್ಗ ಮಾತನಾಡಿದ್ದಾರೆ.

ಸಲ್ಮಾನ್​ ಖಾನ್​ ತಂದೆಗೇ ಇಷ್ಟವಾಗಿಲ್ಲ ರಾಧೆ; ಸಿನಿಮಾ ನೋಡಿದ ಸಲೀಮ್​ ಖಾನ್​ ಹೇಳಿದ್ದೇನು?
ಸಲ್ಮಾನ್​ ಖಾನ್​-ಸಲೀಮ್​ ಖಾನ್
ರಾಜೇಶ್ ದುಗ್ಗುಮನೆ
|

Updated on: May 27, 2021 | 6:56 PM

Share

‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ವಿಮರ್ಶೆ ಧನಾತ್ಮಕವಾಗಿರಲಿಲ್ಲ. ಈ ಚಿತ್ರವನ್ನು ಹೊಗಳಿದ್ದಕ್ಕಿಂತ ತೆಗಳಿದವರೇ ಹೆಚ್ಚು. ಈಗ ರಾಧೆ ಚಿತ್ರವನ್ನು ಸಲ್ಮಾನ್​ ಖಾನ್​ ತಂದೆ ಹಾಗೂ ಚಿತ್ರಕಥೆ ಬರಹಗಾರ ಸಲೀಮ್​ ಖಾನ್​ ಅವರೇ ತೆಗಳಿದ್ದಾರೆ. ರಾಧೆ ಸಿನಿಮಾದಿಂದ ಸಾಕಷ್ಟು ನಿರಾಸೆ ಉಂಟಾಗಿದೆ ಎಂದಿದ್ದಾರೆ. ಇದು ಸಲ್ಮಾನ್​ ಖಾನ್​ಗೆ ತೀವ್ರ ಮುಖಭಂಗ ಉಂಟು ಮಾಡಿದೆ.

ಹಿಂದಿ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಲೀಮ್​ ಖಾನ್​ ಮಾತನಾಡಿದ್ದಾರೆ. ದಬಾಂಗ್​-3 ಸಾಧಾರಾಣವಾಗಿತ್ತು. ಭಜರಂಗಿ ಭಾಯಿಜಾನ್​ ಸಿನಿಮಾ ತುಂಬಾ ಉತ್ತಮವಾಗಿತ್ತು. ಆದರೆ, ರಾಧೆ ಸಿನಿಮಾ ನನಗೆ ಇಷ್ಟವಾಗಿಲ್ಲ ಎಂದು ಸಲೀಮ್​ ಖಾನ್​ ಅಭಿಪ್ರಾಯಪಟ್ಟಿದ್ದಾರೆ.

ಹಿಂದಿಯಲ್ಲಿ ಉತ್ತಮ ಕಥೆ ಬರಹಗಾರರಿಲ್ಲ. ಕಥೆ ಬರೆಯುವವರು ಹಿಂದಿ ಅಥವಾ ಉರ್ದು ಸಾಹಿತ್ಯವನ್ನು ಓದಿಲ್ಲ. ಹೊರಗಿನ ಯಾವುದೋ ಸಿನಿಮಾ ನೋಡುತ್ತಾರೆ. ಅದನ್ನು ಇಲ್ಲಿನ ಶೈಲಿಗೆ ತಕ್ಕಂತೆ ಬದಲಾಯಿಸಲು ಪ್ರಯತ್ನಿಸುತ್ತಾರೆ ಎಂದು ಹೇಳುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸತನ ಇಲ್ಲ ಎಂಬುದನ್ನು ಸಲೀಮ್​ ಖಾನ್​ ಒತ್ತಿ ಹೇಳಿದ್ದಾರೆ.

ಕಮರ್ಷಿಯಲ್​ ಸಿನಿಮಾಗಳು ಅದ್ದರದ್ದೇ ಆದ ಜವಾಬ್ದಾರಿ ಹೊಂದಿದೆ. ಕಮರ್ಷಿಯಲ್​ ಚಿತ್ರದಿಂದ ಪ್ರತಿಯೊಬ್ಬನಿಗೂ ಹಣ ದೊರಕಬೇಕು. ಕಲಾವಿದರು​, ನಿರ್ಮಾಪಕರು, ಹಂಚಿಕೆದಾರರು ಸೇರಿ ಎಲ್ಲರಿಗೂ ಹಣ ಸಿಗಬೇಕು. ರಾಧೆ ಸಿನಿಮಾ ಹಣ ಮಾಡಿದೆ. ಆದರೆ, ಸಿನಿಮಾ ಅಷ್ಟೊಂದು ಉತ್ತಮವಾಗಿ ಮೂಡಿ ಬಂದಿಲ್ಲ ಎಂದಿದ್ದಾರೆ.

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಮೊದಲ ದಿನ ಸಿನಿಮಾ ನೋಡೋಕೆ ಸಿನಿಪ್ರಿಯರು ಮುಗಿ ಬಿದ್ದಿದ್ದರು. ಇಷ್ಟೆಲ್ಲ ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ ಸೋತಿತ್ತು. ರಾಧೆ ಚಿತ್ರವನ್ನು ಬಾಲಿವುಡ್​ ನಟ ಕಮಾಲ್​ ಖಾನ್ ಕಳಪೆ ಎಂದು ಹೇಳಿದ್ದರು. ಇದಕ್ಕೆ ಸಂಬಂಧಿಸಿ ಕಮಾಲ್​ ವಿರುದ್ಧ ಸಲ್ಮಾನ್​ ಖಾನ್​ ಮಾನನಷ್ಟ ಮೊಕದ್ದಮೆ ಹೂಡಿದ್ದರು.

‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಈಗ ಸಲ್ಮಾನ್​ ಖಾನ್​ ನನ್ನ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ನಾನು ಅವರ ಸಿನಿಮಾಗಳನ್ನು ಇನ್ಮುಂದೆ ವಿಮರ್ಶೆ ಮಾಡುವುದಿಲ್ಲ’ ಎಂದು ಕಮಾಲ್​ ಶಪಥ ಮಾಡಿದ್ದರು.

ಇದನ್ನೂ ಓದಿ: ರಾಧೆ ಸಿನಿಮಾ ಕಳಪೆ ಎಂದ ನಟನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಲ್ಮಾನ್​ ಖಾನ್​

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ