AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧೆ ಸಿನಿಮಾ ಕಳಪೆ ಎಂದ ನಟನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಲ್ಮಾನ್​ ಖಾನ್​

ಕಮಾಲ್​ ಖಾನ್​ ಹಿಂದಿ ಚಿತ್ರಗಳನ್ನು ವಿಮರ್ಶೆ ಮಾಡುತ್ತಾರೆ. ಈಗ ಅವರು ರಾಧೆ ಸಿನಿಮಾವನ್ನು ಕೂಡ ವಿಮರ್ಶೆ ಮಾಡಿದ್ದರು. ಈ ವೇಳೆ ಸಿನಿಮಾ ಬಗ್ಗೆ ಋಣಾತ್ಮಕವಾಗಿ ಮಾತನಾಡಿದ್ದರು.

ರಾಧೆ ಸಿನಿಮಾ ಕಳಪೆ ಎಂದ ನಟನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​ - ದಿಶಾ ಪಠಾಣಿ
Follow us
ರಾಜೇಶ್ ದುಗ್ಗುಮನೆ
|

Updated on: May 26, 2021 | 3:53 PM

ಈದ್​ ಪ್ರಯುಕ್ತ ಮೇ 13ರಂದು ತೆರೆಗೆ ಬಂದಿದ್ದ ಸಲ್ಮಾನ್​ ಖಾನ್​ ನಟನೆಯ ‘ರಾಧೆ ಯುವರ್ ಮೋಸ್ಟ್ ವಾಂಟೆಡ್​ ಭಾಯ್​’ ಸಿನಿಮಾ ಒಳ್ಳೆ ವಿಮರ್ಶೆ ಪಡೆಯುವಲ್ಲಿ ಸೋತಿತ್ತು. ಅನೇಕ ಪ್ರಮುಖ ವಿಮರ್ಶಕರು ಈ ಸಿನಿಮಾವನ್ನು ಕಳಪೆ ಎಂದು ಕರೆದಿದ್ದರು. ಬಾಲಿವುಡ್ ನಟ ಕಮಾಲ್​ ಆರ್​. ಖಾನ್​ ಕೂಡ ಈ ಸಿನಿಮಾ ಚೆನ್ನಾಗಿಲ್ಲ ಎಂದು ಹೇಳಿದ್ದರು. ಈ ಕಾರಣಕ್ಕೆ ಅವರ ವಿರುದ್ಧ ಸಲ್ಮಾನ್​ ಖಾನ್​ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.

ಕಮಾಲ್​ ಖಾನ್​ ಹಿಂದಿ ಚಿತ್ರಗಳನ್ನು ವಿಮರ್ಶೆ ಮಾಡುತ್ತಾರೆ. ಈಗ ಅವರು ರಾಧೆ ಸಿನಿಮಾವನ್ನು ಕೂಡ ವಿಮರ್ಶೆ ಮಾಡಿದ್ದರು. ಈ ವೇಳೆ ಸಿನಿಮಾ ಬಗ್ಗೆ ಋಣಾತ್ಮಕವಾಗಿ ಮಾತನಾಡಿದ್ದರು. ಈ ವಿಚಾರ ಸಲ್ಮಾನ್​ ಖಾನ್​ ಕೋಪಕ್ಕೆ ಕಾರಣವಾಗಿದೆ. ಹೀಗಾಗಿ, ಮುಂಬೈನ ಹೆಚ್ಚುವರಿ ಸೆಷನ್​ ನ್ಯಾಯಾಲಯದಲ್ಲಿ ಸಲ್ಮಾನ್​ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಕಮಾಲ್​, ‘ರಾಧೆ ವಿಮರ್ಶೆ ಮಾಡಿದ್ದಕ್ಕೆ ಸಲ್ಮಾನ್​ ಖಾನ್​ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಇದಾದ ಮೇಲೆ ಮತ್ತೊಂದು ಟ್ವೀಟ್​ನಲ್ಲಿ, ‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಈಗ ಸಲ್ಮಾನ್​ ಖಾನ್​ ನನ್ನ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ನಾನು ಅವರ ಸಿನಿಮಾಗಳನ್ನು ಇನ್ಮುಂದೆ ವಿಮರ್ಶೆ ಮಾಡುವುದಿಲ್ಲ’ ಎಂದು ಶಪಥ ಮಾಡಿದ್ದಾರೆ.

ಏಕ್​ ವಿಲನ್​, ದೇಶದ್ರೋಹಿ ಮೊದಲಾದ ಸಿನಿಮಾಗಳಲ್ಲಿ ಕಮಾಲ್​ ನಟಿಸಿದ್ದರು. 2009ರಲ್ಲಿ ಬಿಗ್​ ಬಾಸ್​ ಸೀಸನ್​ 3ರ ಸ್ಪರ್ಧಿಯಾಗಿ ತೆರಳಿದ್ದರು.

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಮೊದಲ ದಿನ ಸಿನಿಮಾ ನೋಡೋಕೆ ಸಿನಿಪ್ರಿಯರು ಮುಗಿಬಿದ್ದಿದ್ದರಿಂದ ಜೀ5 ಸರ್ವರ್​​ ಕ್ರ್ಯಾಶ್​ ಆಗಿತ್ತು. ಇಷ್ಟೆಲ್ಲ ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ  ಸೋತಿತ್ತು. ರಾಧೆ ಚಿತ್ರಕ್ಕೆ ಐಎಂಡಿಬಿ 10 ಅಂಕಕ್ಕೆ ಕೇವಲ 2.4 ರೇಟಿಂಗ್​ ನೀಡಿತ್ತು.

ಇದನ್ನೂ ಓದಿ: ಥಿಯೇಟರ್​ನಲ್ಲಿ ಬಹುಕೋಟಿ ಬಾಚುತ್ತಿದ್ದ ಸಲ್ಮಾನ್​ ಖಾನ್​ ಈಗ ರಾಧೆ ಚಿತ್ರದಿಂದ ಮೊದಲ ದಿನ ಗಳಿಸಿದ್ದು ಬರೀ 10 ಸಾವಿರ

ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!