AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧೆ ಸಿನಿಮಾ ಕಳಪೆ ಎಂದ ನಟನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಲ್ಮಾನ್​ ಖಾನ್​

ಕಮಾಲ್​ ಖಾನ್​ ಹಿಂದಿ ಚಿತ್ರಗಳನ್ನು ವಿಮರ್ಶೆ ಮಾಡುತ್ತಾರೆ. ಈಗ ಅವರು ರಾಧೆ ಸಿನಿಮಾವನ್ನು ಕೂಡ ವಿಮರ್ಶೆ ಮಾಡಿದ್ದರು. ಈ ವೇಳೆ ಸಿನಿಮಾ ಬಗ್ಗೆ ಋಣಾತ್ಮಕವಾಗಿ ಮಾತನಾಡಿದ್ದರು.

ರಾಧೆ ಸಿನಿಮಾ ಕಳಪೆ ಎಂದ ನಟನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​ - ದಿಶಾ ಪಠಾಣಿ
ರಾಜೇಶ್ ದುಗ್ಗುಮನೆ
|

Updated on: May 26, 2021 | 3:53 PM

Share

ಈದ್​ ಪ್ರಯುಕ್ತ ಮೇ 13ರಂದು ತೆರೆಗೆ ಬಂದಿದ್ದ ಸಲ್ಮಾನ್​ ಖಾನ್​ ನಟನೆಯ ‘ರಾಧೆ ಯುವರ್ ಮೋಸ್ಟ್ ವಾಂಟೆಡ್​ ಭಾಯ್​’ ಸಿನಿಮಾ ಒಳ್ಳೆ ವಿಮರ್ಶೆ ಪಡೆಯುವಲ್ಲಿ ಸೋತಿತ್ತು. ಅನೇಕ ಪ್ರಮುಖ ವಿಮರ್ಶಕರು ಈ ಸಿನಿಮಾವನ್ನು ಕಳಪೆ ಎಂದು ಕರೆದಿದ್ದರು. ಬಾಲಿವುಡ್ ನಟ ಕಮಾಲ್​ ಆರ್​. ಖಾನ್​ ಕೂಡ ಈ ಸಿನಿಮಾ ಚೆನ್ನಾಗಿಲ್ಲ ಎಂದು ಹೇಳಿದ್ದರು. ಈ ಕಾರಣಕ್ಕೆ ಅವರ ವಿರುದ್ಧ ಸಲ್ಮಾನ್​ ಖಾನ್​ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.

ಕಮಾಲ್​ ಖಾನ್​ ಹಿಂದಿ ಚಿತ್ರಗಳನ್ನು ವಿಮರ್ಶೆ ಮಾಡುತ್ತಾರೆ. ಈಗ ಅವರು ರಾಧೆ ಸಿನಿಮಾವನ್ನು ಕೂಡ ವಿಮರ್ಶೆ ಮಾಡಿದ್ದರು. ಈ ವೇಳೆ ಸಿನಿಮಾ ಬಗ್ಗೆ ಋಣಾತ್ಮಕವಾಗಿ ಮಾತನಾಡಿದ್ದರು. ಈ ವಿಚಾರ ಸಲ್ಮಾನ್​ ಖಾನ್​ ಕೋಪಕ್ಕೆ ಕಾರಣವಾಗಿದೆ. ಹೀಗಾಗಿ, ಮುಂಬೈನ ಹೆಚ್ಚುವರಿ ಸೆಷನ್​ ನ್ಯಾಯಾಲಯದಲ್ಲಿ ಸಲ್ಮಾನ್​ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಕಮಾಲ್​, ‘ರಾಧೆ ವಿಮರ್ಶೆ ಮಾಡಿದ್ದಕ್ಕೆ ಸಲ್ಮಾನ್​ ಖಾನ್​ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಇದಾದ ಮೇಲೆ ಮತ್ತೊಂದು ಟ್ವೀಟ್​ನಲ್ಲಿ, ‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಈಗ ಸಲ್ಮಾನ್​ ಖಾನ್​ ನನ್ನ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ. ನಾನು ಅವರ ಸಿನಿಮಾಗಳನ್ನು ಇನ್ಮುಂದೆ ವಿಮರ್ಶೆ ಮಾಡುವುದಿಲ್ಲ’ ಎಂದು ಶಪಥ ಮಾಡಿದ್ದಾರೆ.

ಏಕ್​ ವಿಲನ್​, ದೇಶದ್ರೋಹಿ ಮೊದಲಾದ ಸಿನಿಮಾಗಳಲ್ಲಿ ಕಮಾಲ್​ ನಟಿಸಿದ್ದರು. 2009ರಲ್ಲಿ ಬಿಗ್​ ಬಾಸ್​ ಸೀಸನ್​ 3ರ ಸ್ಪರ್ಧಿಯಾಗಿ ತೆರಳಿದ್ದರು.

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಮೊದಲ ದಿನ ಸಿನಿಮಾ ನೋಡೋಕೆ ಸಿನಿಪ್ರಿಯರು ಮುಗಿಬಿದ್ದಿದ್ದರಿಂದ ಜೀ5 ಸರ್ವರ್​​ ಕ್ರ್ಯಾಶ್​ ಆಗಿತ್ತು. ಇಷ್ಟೆಲ್ಲ ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ  ಸೋತಿತ್ತು. ರಾಧೆ ಚಿತ್ರಕ್ಕೆ ಐಎಂಡಿಬಿ 10 ಅಂಕಕ್ಕೆ ಕೇವಲ 2.4 ರೇಟಿಂಗ್​ ನೀಡಿತ್ತು.

ಇದನ್ನೂ ಓದಿ: ಥಿಯೇಟರ್​ನಲ್ಲಿ ಬಹುಕೋಟಿ ಬಾಚುತ್ತಿದ್ದ ಸಲ್ಮಾನ್​ ಖಾನ್​ ಈಗ ರಾಧೆ ಚಿತ್ರದಿಂದ ಮೊದಲ ದಿನ ಗಳಿಸಿದ್ದು ಬರೀ 10 ಸಾವಿರ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ