AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತಕ್ಕೆ ಬಂದು ಚಿರಂಜೀವಿಗೆ ಹೊಸ ಐಡಿಯಾ ಕೊಟ್ಟ ಸಲ್ಮಾನ್​ ಖಾನ್​

ಸಲ್ಮಾನ್​ ಖಾನ್​ ಹಾಗೂ ಚಿರು ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇಂಡಸ್ಟ್ರಿ ಬೇರೆ ಆದರೂ ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ. ಈ ಕಾರಣಕ್ಕೆ ಸಿನಿಮಾ ನಿರ್ಮಾತೃರು ಸಲ್ಲು ಅವರನ್ನು ಕರೆತಂದಿದ್ದಾರೆ.

ದಕ್ಷಿಣ ಭಾರತಕ್ಕೆ ಬಂದು ಚಿರಂಜೀವಿಗೆ ಹೊಸ ಐಡಿಯಾ ಕೊಟ್ಟ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​-ಚಿರಂಜೀವಿ
TV9 Web
| Edited By: |

Updated on: Nov 14, 2021 | 2:51 PM

Share

ಮೆಗಾಸ್ಟಾರ್​ ಚಿರಂಜೀವಿ (Chiranjeevi) 153ನೇ ಸಿನಿಮಾ ‘ಗಾಡ್​​ಫಾದರ್​’  (Godfather)ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಮಲಯಾಳಂನ ಸೂಪರ್​ ಹಿಟ್​ ಚಿತ್ರ ‘ಲೂಸಿಫರ್’ ರಿಮೇಕ್​ ಇದಾಗಿದೆ. ಈ ಸಿನಿಮಾದ ಶೂಟಿಂಗ್​ ಈಗಾಗಲೇ ಆರಂಭಗೊಂಡಿದೆ. ಚಿತ್ರದಲ್ಲಿ ಸಲ್ಮಾನ್​ ಖಾನ್​ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ನಟನೆಯ ‘ಲೂಸಿಫರ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಚಿತ್ರದಲ್ಲಿ ಪೃಥ್ವಿರಾಜ್​ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮೋಹನ್​ಲಾಲ್​​ಗೆ ಸಹಾಯ ಮಾಡುವ ಡಾನ್​ ಪಾತ್ರ ಇದಾಗಿತ್ತು. ಅವರು ತೆರೆಮೇಲೆ ಕಾಣಿಸೋದು ಕಡಿಮೆಯಾದರೂ ಇಡೀ ಚಿತ್ರದಲ್ಲಿ ತುಂಬಾನೇ ಮುಖ್ಯ ಎನಿಸಿಕೊಳ್ಳುತ್ತದೆ ಆ ಪಾತ್ರ. ತೆಲುಗಿನಲ್ಲಿ ಸಲ್ಲು ಈ ಪಾತ್ರದಲ್ಲಿ ನಟಿಸಲಿದ್ದಾರೆ. ಈಗ ಚಿರಂಜೀವಿಗೆ ಸ್ಪೆಷಲ್​ ಐಡಿಯಾ ಒಂದನ್ನು ನೀಡಿದ್ದಾರೆ ಎನ್ನಲಾಗುತ್ತಿದೆ.

ಸಲ್ಮಾನ್​ ಖಾನ್​ ಹಾಗೂ ಚಿರುಗೋಸ್ಕರ ವಿಶೇಷ ಸಾಂಗ್​ ಮಾಡೋಕೆ ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ಮೂಲ ಸಿನಿಮಾ ‘ಲೂಸಿಫರ್​’ನಲ್ಲಿ ಈ ರೀತಿಯ ಸಾಂಗ್ ಇಲ್ಲ. ಆದರೆ, ಸಲ್ಲು ಬಾಲಿವುಡ್​ ಅಂಗಳದಿಂದ ದಕ್ಷಿಣಕ್ಕೆ ಬರುವ ಕಾರಣಕ್ಕೆ ಚಿತ್ರತಂಡ ಈ ಆಲೋಚನೆ ಮಾಡಿದೆ. ತಮನ್​ ಈ ಸಿನಿಮಾ ಸಂಗೀತ ಸಂಯೋಜನೆ ಮಾಡುತ್ತಿದ್ದು, ವಿದೇಶಿ ಗಾಯಕರನ್ನು ತರುವ ಆಲೋಚನೆಯಲ್ಲಿದ್ದಾರೆ. ಆದರೆ, ಈ ಆಲೋಚನೆಯನ್ನು ಸಲ್ಮಾನ್​ ಖಾನ್​ ತಿರಸ್ಕರಿಸಿದ್ದಾರೆ. ಅಲ್ಲದೆ, ಚಿತ್ರತಂಡಕ್ಕೆ ಹೊಸ ಐಡಿಯಾ ನೀಡಿದ್ದಾರೆ. ಬಾಲಿವುಡ್​ನ ಸಾಕಷ್ಟು ಸಿಂಗರ್​ಗಳು ವಿಶ್ವ ಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡಿದ್ದಾರೆ. ಅವರಲ್ಲಿ ಕೆಲವರು ದಕ್ಷಿಣಕ್ಕೆ ಬಂದಿಲ್ಲ. ವಿದೇಶಿ ಸಿಂಗರ್​ಗಳಿಗೆ ಹೆಚ್ಚಿನ ಹಣ ನೀಡಿ ಅವರನ್ನು ಕರೆ ತರುವ ಬದಲು, ಬಾಲಿವುಡ್​ ಮಂದಿಯನ್ನೇ ಕರೆತರುವಂತೆ ಸೂಚನೆ ನೀಡಿದ್ದಾರೆ. ಈ ಆಯ್ಕೆ ಚಿತ್ರತಂಡದವರಿಗೂ ಇಷ್ಟವಾಗಿದೆ.

ಸಲ್ಮಾನ್​ ಖಾನ್​ ಹಾಗೂ ಚಿರು ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇಂಡಸ್ಟ್ರಿ ಬೇರೆ ಆದರೂ ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ. ಈ ಕಾರಣಕ್ಕೆ ಸಿನಿಮಾ ನಿರ್ಮಾತೃರು ಸಲ್ಲು ಅವರನ್ನು ಕರೆತಂದಿದ್ದಾರೆ. ಮೋಹನ್​ ರಾಜ್​ ಅವರು ಚಿರು 153ನೇ ಚಿತ್ರ ‘ಗಾಡ್​ಫಾದರ್​’ಗೆ ಆ್ಯಕ್ಷನ್​​ ಕಟ್​ ಹೇಳುತ್ತಿದ್ದಾರೆ.

ಇದನ್ನೂ ಓದಿ: 6 ದಿನ ನಡೆಯುವ ಕತ್ರಿನಾ ಮದುವೆಗೆ ಮಾಜಿ ಬಾಯ್​ಫ್ರೆಂಡ್​ಗಳಿಗೆ ಇದೆಯಾ ಆಹ್ವಾನ? ರಣಬೀರ್​, ಸಲ್ಲು ಕೂಡ ಬರ್ತಾರಾ?

ಬಿಗ್​ ಬಾಸ್​ ಸ್ಪರ್ಧಿ ಮೇಲೆ ಸಿಟ್ಟಾಗಿ ಬೀಪ್​ ಶಬ್ದಗಳಿಂದ ಬೈದ ಸಲ್ಮಾನ್​ ಖಾನ್

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ