AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!

ಸಂದೀಪ್​ ಅವರ ಪಾತ್ರದಲ್ಲಿ ಅದಿವಿ ಶೇಷ್​​ ನಟಿಸುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಆಗಿತ್ತು. ಇದನ್ನು ನೋಡಿ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದರು.

ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!
ಮಹೇಶ್​ ಬಾಬು-ಸಲ್ಮಾನ್​ ಖಾನ್​- ಪೃಥ್ವಿರಾಜ್​
ರಾಜೇಶ್ ದುಗ್ಗುಮನೆ
|

Updated on: Apr 11, 2021 | 5:39 PM

Share

ಮೇಜರ್​​ ಸಂದೀಪ್​ ಉನ್ನಿಕೃಷ್ಣನ್ ಅವರು ಮುಂಬೈ ದಾಳಿ ವೇಳೆ ವೀರ ಮರಣ ಹೊಂದಿದ್ದರು. ಇವರ ಜೀವನ ಆಧರಿಸಿ ಈಗ ಮೇಜರ್​ ಹೆಸರಿನ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರಕ್ಕಾಗಿ ಸಲ್ಮಾನ್​ ಖಾನ್​, ಮಹೇಶ್​ ಬಾಬು ಹಾಗೂ ಪೃಥ್ವಿರಾಜ್​ ಒಂದಾಗಿದ್ದಾರೆ. ಹಾಗಂತ ಇವರು ಸಿನಿಮಾದಲ್ಲಿ ನಟಿಸುತ್ತಿಲ್ಲ. ಬದಲಿಗೆ ಚಿತ್ರದ ಟೀಸರ್​ ರಿಲೀಸ್​ ಮಾಡುತ್ತಿದ್ದಾರೆ. ಸಂದೀಪ್​ ಉನ್ನಿಕೃಷ್ಣನ್​ ಜೀವನ ಆಧರಿಸಿ ಮೇಜರ್​ ಸಿನಿಮಾ ಮಾಡಲಾಗುತ್ತಿದೆ. ಹಿಂದಿ, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈಗ ಚಿತ್ರದ ಟೀಸರ್​ ಅನ್ನು ಸಿನಿಮಾ ತಂಡ ಲಾಂಚ್​ ಮಾಡುತ್ತಿದೆ. ಹಿಂದಿಯಲ್ಲಿ ಸಲ್ಮಾನ್​ ಖಾನ್, ತೆಲುಗಿನಲ್ಲಿ ಮಹೇಶ್​​ ಬಾಬು ಹಾಗೂ ಮಲಯಾಳಂನಲ್ಲಿ ಪೃಥ್ವಿರಾಜ್​ ಟೀಸರ್​ ಲಾಂಚ್ ಮಾಡುತ್ತಿದ್ದಾರೆ.

ಸಂದೀಪ್​ ಅವರು ಜೀವನದಲ್ಲಿ ಹೇಗಿದ್ದರು, ಮುಂಬೈ ದಾಳಿ ವೇಳೆ ಅವರು ಅದನ್ನು ಹೇಗೆ ಎದುರಿಸಿದರು ಎನ್ನುವುದನ್ನು ಟೀಸರ್​ನಲ್ಲಿ ತೋರಿಸಲಾಗುತ್ತಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಸಂದೀಪ್​ ಅವರ ಪಾತ್ರದಲ್ಲಿ ಅದಿವಿ ಶೇಷ್​​ ನಟಿಸುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಆಗಿತ್ತು. ಇದನ್ನು ನೋಡಿ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದರು. 2008ರಲ್ಲಿ ಮುಂಬೈ ದಾಳಿ ನಡೆದಿತ್ತು. ಈ ದಾಳೆ ವೇಳೆ ಮೇಜರ್​ ಸಂದೀಪ್​ ಹುತಾತ್ಮರಾಗಿದ್ದರು. ಹಿಂದಿ, ತೆಲುಗು ಹಾಗೂ ಮಲಯಾಳಂನಲ್ಲಿ ಸಿನಿಮಾ ರಿಲೀಸ್​ ಆಗುತ್ತಿದೆ. ಶಶಿ ಕಿರಣ್​ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇತ್ತೀಚೆಗೆ ಪ್ಯಾನ್​ ಇಂಡಿಯಾ ಸಿನಿಮಾಗಳು ಸಾಕಷ್ಟು ತೆರೆಗೆ ಬರುತ್ತಿವೆ. ಬೇರೆ ಬೇರೆ ಭಾಷೆಯ ಪ್ರೇಕ್ಷಕರನ್ನು ಸೆಳೆಯಲು ಪ್ಯಾನ್​ ಇಂಡಿಯಾ ಸಿನಿಮಾ ಸಹಕಾರಿ. ಸಂದೀಪ್​ ಖ್ಯಾತಿ ಇಡೀ ದೇಶಾದ್ಯಂತ ಹಬ್ಬಿದೆ. ಹೀಗಾಗಿ, ಮೂರು ಭಾಷೆಗಳಲ್ಲಿ ಸಿನಿಮಾ ರಿಲೀಸ್​ ಮಾಡುವ ಮೂಲಕ ಹೆಚ್ಚು ಪ್ರೇಕ್ಷಕರನ್ನು ತಲುಪುವ ಆಲೋಚನೆ ನಿರ್ದೇಶಕರದ್ದು.

ಇದನ್ನೂ ಓದಿ: ಮದಗಜ; ನಿರ್ದೇಶಕ ಮಹೇಶ್​ಗೆ ರಾಬರ್ಟ್​ ನಿರ್ಮಾಪಕ ಉಮಾಪತಿಯಿಂದ ದುಬಾರಿ ಕಾರ್ ಗಿಫ್ಟ್​!

ವಕೀಲ್​ ಸಾಬ್​ ಸಿನಿಮಾಗೆ ಮಹೇಶ್​ ಬಾಬು ವಿಮರ್ಶೆ! ಪವನ್​ ಕಲ್ಯಾಣ್​ ಚಿತ್ರದಲ್ಲಿ ಪ್ರಿನ್ಸ್​ ಮೆಚ್ಚಿದ್ದೇನು?

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್