AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!

ಸಂದೀಪ್​ ಅವರ ಪಾತ್ರದಲ್ಲಿ ಅದಿವಿ ಶೇಷ್​​ ನಟಿಸುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಆಗಿತ್ತು. ಇದನ್ನು ನೋಡಿ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದರು.

ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!
ಮಹೇಶ್​ ಬಾಬು-ಸಲ್ಮಾನ್​ ಖಾನ್​- ಪೃಥ್ವಿರಾಜ್​
ರಾಜೇಶ್ ದುಗ್ಗುಮನೆ
|

Updated on: Apr 11, 2021 | 5:39 PM

Share

ಮೇಜರ್​​ ಸಂದೀಪ್​ ಉನ್ನಿಕೃಷ್ಣನ್ ಅವರು ಮುಂಬೈ ದಾಳಿ ವೇಳೆ ವೀರ ಮರಣ ಹೊಂದಿದ್ದರು. ಇವರ ಜೀವನ ಆಧರಿಸಿ ಈಗ ಮೇಜರ್​ ಹೆಸರಿನ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರಕ್ಕಾಗಿ ಸಲ್ಮಾನ್​ ಖಾನ್​, ಮಹೇಶ್​ ಬಾಬು ಹಾಗೂ ಪೃಥ್ವಿರಾಜ್​ ಒಂದಾಗಿದ್ದಾರೆ. ಹಾಗಂತ ಇವರು ಸಿನಿಮಾದಲ್ಲಿ ನಟಿಸುತ್ತಿಲ್ಲ. ಬದಲಿಗೆ ಚಿತ್ರದ ಟೀಸರ್​ ರಿಲೀಸ್​ ಮಾಡುತ್ತಿದ್ದಾರೆ. ಸಂದೀಪ್​ ಉನ್ನಿಕೃಷ್ಣನ್​ ಜೀವನ ಆಧರಿಸಿ ಮೇಜರ್​ ಸಿನಿಮಾ ಮಾಡಲಾಗುತ್ತಿದೆ. ಹಿಂದಿ, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈಗ ಚಿತ್ರದ ಟೀಸರ್​ ಅನ್ನು ಸಿನಿಮಾ ತಂಡ ಲಾಂಚ್​ ಮಾಡುತ್ತಿದೆ. ಹಿಂದಿಯಲ್ಲಿ ಸಲ್ಮಾನ್​ ಖಾನ್, ತೆಲುಗಿನಲ್ಲಿ ಮಹೇಶ್​​ ಬಾಬು ಹಾಗೂ ಮಲಯಾಳಂನಲ್ಲಿ ಪೃಥ್ವಿರಾಜ್​ ಟೀಸರ್​ ಲಾಂಚ್ ಮಾಡುತ್ತಿದ್ದಾರೆ.

ಸಂದೀಪ್​ ಅವರು ಜೀವನದಲ್ಲಿ ಹೇಗಿದ್ದರು, ಮುಂಬೈ ದಾಳಿ ವೇಳೆ ಅವರು ಅದನ್ನು ಹೇಗೆ ಎದುರಿಸಿದರು ಎನ್ನುವುದನ್ನು ಟೀಸರ್​ನಲ್ಲಿ ತೋರಿಸಲಾಗುತ್ತಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಸಂದೀಪ್​ ಅವರ ಪಾತ್ರದಲ್ಲಿ ಅದಿವಿ ಶೇಷ್​​ ನಟಿಸುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಆಗಿತ್ತು. ಇದನ್ನು ನೋಡಿ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದರು. 2008ರಲ್ಲಿ ಮುಂಬೈ ದಾಳಿ ನಡೆದಿತ್ತು. ಈ ದಾಳೆ ವೇಳೆ ಮೇಜರ್​ ಸಂದೀಪ್​ ಹುತಾತ್ಮರಾಗಿದ್ದರು. ಹಿಂದಿ, ತೆಲುಗು ಹಾಗೂ ಮಲಯಾಳಂನಲ್ಲಿ ಸಿನಿಮಾ ರಿಲೀಸ್​ ಆಗುತ್ತಿದೆ. ಶಶಿ ಕಿರಣ್​ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇತ್ತೀಚೆಗೆ ಪ್ಯಾನ್​ ಇಂಡಿಯಾ ಸಿನಿಮಾಗಳು ಸಾಕಷ್ಟು ತೆರೆಗೆ ಬರುತ್ತಿವೆ. ಬೇರೆ ಬೇರೆ ಭಾಷೆಯ ಪ್ರೇಕ್ಷಕರನ್ನು ಸೆಳೆಯಲು ಪ್ಯಾನ್​ ಇಂಡಿಯಾ ಸಿನಿಮಾ ಸಹಕಾರಿ. ಸಂದೀಪ್​ ಖ್ಯಾತಿ ಇಡೀ ದೇಶಾದ್ಯಂತ ಹಬ್ಬಿದೆ. ಹೀಗಾಗಿ, ಮೂರು ಭಾಷೆಗಳಲ್ಲಿ ಸಿನಿಮಾ ರಿಲೀಸ್​ ಮಾಡುವ ಮೂಲಕ ಹೆಚ್ಚು ಪ್ರೇಕ್ಷಕರನ್ನು ತಲುಪುವ ಆಲೋಚನೆ ನಿರ್ದೇಶಕರದ್ದು.

ಇದನ್ನೂ ಓದಿ: ಮದಗಜ; ನಿರ್ದೇಶಕ ಮಹೇಶ್​ಗೆ ರಾಬರ್ಟ್​ ನಿರ್ಮಾಪಕ ಉಮಾಪತಿಯಿಂದ ದುಬಾರಿ ಕಾರ್ ಗಿಫ್ಟ್​!

ವಕೀಲ್​ ಸಾಬ್​ ಸಿನಿಮಾಗೆ ಮಹೇಶ್​ ಬಾಬು ವಿಮರ್ಶೆ! ಪವನ್​ ಕಲ್ಯಾಣ್​ ಚಿತ್ರದಲ್ಲಿ ಪ್ರಿನ್ಸ್​ ಮೆಚ್ಚಿದ್ದೇನು?

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ