AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!

ಸಂದೀಪ್​ ಅವರ ಪಾತ್ರದಲ್ಲಿ ಅದಿವಿ ಶೇಷ್​​ ನಟಿಸುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಆಗಿತ್ತು. ಇದನ್ನು ನೋಡಿ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದರು.

ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!
ಮಹೇಶ್​ ಬಾಬು-ಸಲ್ಮಾನ್​ ಖಾನ್​- ಪೃಥ್ವಿರಾಜ್​
ರಾಜೇಶ್ ದುಗ್ಗುಮನೆ
|

Updated on: Apr 11, 2021 | 5:39 PM

Share

ಮೇಜರ್​​ ಸಂದೀಪ್​ ಉನ್ನಿಕೃಷ್ಣನ್ ಅವರು ಮುಂಬೈ ದಾಳಿ ವೇಳೆ ವೀರ ಮರಣ ಹೊಂದಿದ್ದರು. ಇವರ ಜೀವನ ಆಧರಿಸಿ ಈಗ ಮೇಜರ್​ ಹೆಸರಿನ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರಕ್ಕಾಗಿ ಸಲ್ಮಾನ್​ ಖಾನ್​, ಮಹೇಶ್​ ಬಾಬು ಹಾಗೂ ಪೃಥ್ವಿರಾಜ್​ ಒಂದಾಗಿದ್ದಾರೆ. ಹಾಗಂತ ಇವರು ಸಿನಿಮಾದಲ್ಲಿ ನಟಿಸುತ್ತಿಲ್ಲ. ಬದಲಿಗೆ ಚಿತ್ರದ ಟೀಸರ್​ ರಿಲೀಸ್​ ಮಾಡುತ್ತಿದ್ದಾರೆ. ಸಂದೀಪ್​ ಉನ್ನಿಕೃಷ್ಣನ್​ ಜೀವನ ಆಧರಿಸಿ ಮೇಜರ್​ ಸಿನಿಮಾ ಮಾಡಲಾಗುತ್ತಿದೆ. ಹಿಂದಿ, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈಗ ಚಿತ್ರದ ಟೀಸರ್​ ಅನ್ನು ಸಿನಿಮಾ ತಂಡ ಲಾಂಚ್​ ಮಾಡುತ್ತಿದೆ. ಹಿಂದಿಯಲ್ಲಿ ಸಲ್ಮಾನ್​ ಖಾನ್, ತೆಲುಗಿನಲ್ಲಿ ಮಹೇಶ್​​ ಬಾಬು ಹಾಗೂ ಮಲಯಾಳಂನಲ್ಲಿ ಪೃಥ್ವಿರಾಜ್​ ಟೀಸರ್​ ಲಾಂಚ್ ಮಾಡುತ್ತಿದ್ದಾರೆ.

ಸಂದೀಪ್​ ಅವರು ಜೀವನದಲ್ಲಿ ಹೇಗಿದ್ದರು, ಮುಂಬೈ ದಾಳಿ ವೇಳೆ ಅವರು ಅದನ್ನು ಹೇಗೆ ಎದುರಿಸಿದರು ಎನ್ನುವುದನ್ನು ಟೀಸರ್​ನಲ್ಲಿ ತೋರಿಸಲಾಗುತ್ತಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಸಂದೀಪ್​ ಅವರ ಪಾತ್ರದಲ್ಲಿ ಅದಿವಿ ಶೇಷ್​​ ನಟಿಸುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಆಗಿತ್ತು. ಇದನ್ನು ನೋಡಿ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದರು. 2008ರಲ್ಲಿ ಮುಂಬೈ ದಾಳಿ ನಡೆದಿತ್ತು. ಈ ದಾಳೆ ವೇಳೆ ಮೇಜರ್​ ಸಂದೀಪ್​ ಹುತಾತ್ಮರಾಗಿದ್ದರು. ಹಿಂದಿ, ತೆಲುಗು ಹಾಗೂ ಮಲಯಾಳಂನಲ್ಲಿ ಸಿನಿಮಾ ರಿಲೀಸ್​ ಆಗುತ್ತಿದೆ. ಶಶಿ ಕಿರಣ್​ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇತ್ತೀಚೆಗೆ ಪ್ಯಾನ್​ ಇಂಡಿಯಾ ಸಿನಿಮಾಗಳು ಸಾಕಷ್ಟು ತೆರೆಗೆ ಬರುತ್ತಿವೆ. ಬೇರೆ ಬೇರೆ ಭಾಷೆಯ ಪ್ರೇಕ್ಷಕರನ್ನು ಸೆಳೆಯಲು ಪ್ಯಾನ್​ ಇಂಡಿಯಾ ಸಿನಿಮಾ ಸಹಕಾರಿ. ಸಂದೀಪ್​ ಖ್ಯಾತಿ ಇಡೀ ದೇಶಾದ್ಯಂತ ಹಬ್ಬಿದೆ. ಹೀಗಾಗಿ, ಮೂರು ಭಾಷೆಗಳಲ್ಲಿ ಸಿನಿಮಾ ರಿಲೀಸ್​ ಮಾಡುವ ಮೂಲಕ ಹೆಚ್ಚು ಪ್ರೇಕ್ಷಕರನ್ನು ತಲುಪುವ ಆಲೋಚನೆ ನಿರ್ದೇಶಕರದ್ದು.

ಇದನ್ನೂ ಓದಿ: ಮದಗಜ; ನಿರ್ದೇಶಕ ಮಹೇಶ್​ಗೆ ರಾಬರ್ಟ್​ ನಿರ್ಮಾಪಕ ಉಮಾಪತಿಯಿಂದ ದುಬಾರಿ ಕಾರ್ ಗಿಫ್ಟ್​!

ವಕೀಲ್​ ಸಾಬ್​ ಸಿನಿಮಾಗೆ ಮಹೇಶ್​ ಬಾಬು ವಿಮರ್ಶೆ! ಪವನ್​ ಕಲ್ಯಾಣ್​ ಚಿತ್ರದಲ್ಲಿ ಪ್ರಿನ್ಸ್​ ಮೆಚ್ಚಿದ್ದೇನು?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ