ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!

|

Updated on: Apr 11, 2021 | 5:39 PM

ಸಂದೀಪ್​ ಅವರ ಪಾತ್ರದಲ್ಲಿ ಅದಿವಿ ಶೇಷ್​​ ನಟಿಸುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಆಗಿತ್ತು. ಇದನ್ನು ನೋಡಿ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದರು.

ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!
ಮಹೇಶ್​ ಬಾಬು-ಸಲ್ಮಾನ್​ ಖಾನ್​- ಪೃಥ್ವಿರಾಜ್​
Follow us on

ಮೇಜರ್​​ ಸಂದೀಪ್​ ಉನ್ನಿಕೃಷ್ಣನ್ ಅವರು ಮುಂಬೈ ದಾಳಿ ವೇಳೆ ವೀರ ಮರಣ ಹೊಂದಿದ್ದರು. ಇವರ ಜೀವನ ಆಧರಿಸಿ ಈಗ ಮೇಜರ್​ ಹೆಸರಿನ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರಕ್ಕಾಗಿ ಸಲ್ಮಾನ್​ ಖಾನ್​, ಮಹೇಶ್​ ಬಾಬು ಹಾಗೂ ಪೃಥ್ವಿರಾಜ್​ ಒಂದಾಗಿದ್ದಾರೆ. ಹಾಗಂತ ಇವರು ಸಿನಿಮಾದಲ್ಲಿ ನಟಿಸುತ್ತಿಲ್ಲ. ಬದಲಿಗೆ ಚಿತ್ರದ ಟೀಸರ್​ ರಿಲೀಸ್​ ಮಾಡುತ್ತಿದ್ದಾರೆ.

ಸಂದೀಪ್​ ಉನ್ನಿಕೃಷ್ಣನ್​ ಜೀವನ ಆಧರಿಸಿ ಮೇಜರ್​ ಸಿನಿಮಾ ಮಾಡಲಾಗುತ್ತಿದೆ. ಹಿಂದಿ, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈಗ ಚಿತ್ರದ ಟೀಸರ್​ ಅನ್ನು ಸಿನಿಮಾ ತಂಡ ಲಾಂಚ್​ ಮಾಡುತ್ತಿದೆ. ಹಿಂದಿಯಲ್ಲಿ ಸಲ್ಮಾನ್​ ಖಾನ್, ತೆಲುಗಿನಲ್ಲಿ ಮಹೇಶ್​​ ಬಾಬು ಹಾಗೂ ಮಲಯಾಳಂನಲ್ಲಿ ಪೃಥ್ವಿರಾಜ್​ ಟೀಸರ್​ ಲಾಂಚ್ ಮಾಡುತ್ತಿದ್ದಾರೆ.

ಸಂದೀಪ್​ ಅವರು ಜೀವನದಲ್ಲಿ ಹೇಗಿದ್ದರು, ಮುಂಬೈ ದಾಳಿ ವೇಳೆ ಅವರು ಅದನ್ನು ಹೇಗೆ ಎದುರಿಸಿದರು ಎನ್ನುವುದನ್ನು ಟೀಸರ್​ನಲ್ಲಿ ತೋರಿಸಲಾಗುತ್ತಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಸಂದೀಪ್​ ಅವರ ಪಾತ್ರದಲ್ಲಿ ಅದಿವಿ ಶೇಷ್​​ ನಟಿಸುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಆಗಿತ್ತು. ಇದನ್ನು ನೋಡಿ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದರು. 2008ರಲ್ಲಿ ಮುಂಬೈ ದಾಳಿ ನಡೆದಿತ್ತು. ಈ ದಾಳೆ ವೇಳೆ ಮೇಜರ್​ ಸಂದೀಪ್​ ಹುತಾತ್ಮರಾಗಿದ್ದರು. ಹಿಂದಿ, ತೆಲುಗು ಹಾಗೂ ಮಲಯಾಳಂನಲ್ಲಿ ಸಿನಿಮಾ ರಿಲೀಸ್​ ಆಗುತ್ತಿದೆ. ಶಶಿ ಕಿರಣ್​ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇತ್ತೀಚೆಗೆ ಪ್ಯಾನ್​ ಇಂಡಿಯಾ ಸಿನಿಮಾಗಳು ಸಾಕಷ್ಟು ತೆರೆಗೆ ಬರುತ್ತಿವೆ. ಬೇರೆ ಬೇರೆ ಭಾಷೆಯ ಪ್ರೇಕ್ಷಕರನ್ನು ಸೆಳೆಯಲು ಪ್ಯಾನ್​ ಇಂಡಿಯಾ ಸಿನಿಮಾ ಸಹಕಾರಿ. ಸಂದೀಪ್​ ಖ್ಯಾತಿ ಇಡೀ ದೇಶಾದ್ಯಂತ ಹಬ್ಬಿದೆ. ಹೀಗಾಗಿ, ಮೂರು ಭಾಷೆಗಳಲ್ಲಿ ಸಿನಿಮಾ ರಿಲೀಸ್​ ಮಾಡುವ ಮೂಲಕ ಹೆಚ್ಚು ಪ್ರೇಕ್ಷಕರನ್ನು ತಲುಪುವ ಆಲೋಚನೆ ನಿರ್ದೇಶಕರದ್ದು.

ಇದನ್ನೂ ಓದಿ: ಮದಗಜ; ನಿರ್ದೇಶಕ ಮಹೇಶ್​ಗೆ ರಾಬರ್ಟ್​ ನಿರ್ಮಾಪಕ ಉಮಾಪತಿಯಿಂದ ದುಬಾರಿ ಕಾರ್ ಗಿಫ್ಟ್​!

ವಕೀಲ್​ ಸಾಬ್​ ಸಿನಿಮಾಗೆ ಮಹೇಶ್​ ಬಾಬು ವಿಮರ್ಶೆ! ಪವನ್​ ಕಲ್ಯಾಣ್​ ಚಿತ್ರದಲ್ಲಿ ಪ್ರಿನ್ಸ್​ ಮೆಚ್ಚಿದ್ದೇನು?