AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಮಿಸಿ, ನಾನು ಸಂಭಾವನೆ ಪಡೆಯಲ್ಲ; ಶಾರುಖ್​ಗಾಗಿ ಸಲ್ಮಾನ್​ ಹೀಗೊಂದು ತ್ಯಾಗ!

10 ದಿನಗಳ ಕಾಲ ಸಲ್ಮಾನ್​ ಖಾನ್​ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ. ಈ ಚಿತ್ರಕ್ಕಾಗಿ ನಿರ್ಮಾಪಕ ಆದಿತ್ಯ ಚೋಪ್ರಾ ದೊಡ್ಡ ಮೊತ್ತದ ಸಂಭಾವನೆ ಕೊಡೋಕೆ ಸಿದ್ಧರಾಗಿದ್ದರು.

ಕ್ಷಮಿಸಿ, ನಾನು ಸಂಭಾವನೆ ಪಡೆಯಲ್ಲ; ಶಾರುಖ್​ಗಾಗಿ ಸಲ್ಮಾನ್​ ಹೀಗೊಂದು ತ್ಯಾಗ!
ಸಲ್ಮಾನ್​-ಶಾರುಖ್​
ರಾಜೇಶ್ ದುಗ್ಗುಮನೆ
|

Updated on:Apr 15, 2021 | 9:11 PM

Share

ಜೀರೋ ನಂತರ ಶಾರುಖ್​ ಖಾನ್​ ‘ಪಠಾಣ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಾರುಖ್​ ಈ ಚಿತ್ರಕ್ಕಾಗಿ 100 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನುವ ವಿಚಾರ ಭಾರೀ ಚರ್ಚೆ ಆಗಿತ್ತು.  ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದು ಕೇಳಿ ಬಂದಿದೆ. ಶಾರುಖ್​ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಸಲ್ಮಾನ್​ ಖಾನ್​ ಸಂಭಾವನೆಯನ್ನೇ ಪಡೆದಿಲ್ಲ. 10 ದಿನಗಳ ಕಾಲ ಸಲ್ಮಾನ್​ ಖಾನ್​ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ. ಈ ಚಿತ್ರಕ್ಕಾಗಿ ನಿರ್ಮಾಪಕ ಆದಿತ್ಯ ಚೋಪ್ರಾ ದೊಡ್ಡ ಮೊತ್ತದ ಸಂಭಾವನೆ ಕೊಡೋಕೆ ಸಿದ್ಧರಾಗಿದ್ದರು. ಆದರೆ, ಸಲ್ಮಾನ್​ ಖಾನ್​ ಇದನ್ನು ತಿರಸ್ಕರಿಸಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಈ ವಿಚಾರ ಬಾಲಿವುಡ್​ ಅಂಗಳದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಸಲ್ಮಾನ್​ ಖಾನ್​ ಕಾಲ್​ಶೀಟ್​ ಪಡೆಯೋಕೆ ದೊಡ್ಡ ದೊಡ್ಡ ಪ್ರೊಡ್ಯೂಸರ್​ಗಳು ಸರದಿ ಸಾಲಿನಲ್ಲಿ ನಿಂತಿದ್ದಾರೆ. ಅವರು ಸಿನಿಮಾದಲ್ಲಿ ನಟಿಸುತ್ತಾರೆ ಎಂದರೆ ಭಾರೀ ಸಂಭಾವನೆಯನ್ನೇ ನೀಡಲಾಗುತ್ತದೆ. ಆದರೆ, ಶಾರುಖ್​ ಚಿತ್ರಕ್ಕೆ ಅವರು ಒಂದು ರೂಪಾಯಿ ಕೂಡ ತೆಗೆದುಕೊಂಡಿಲ್ಲ ಅನ್ನೋದು ವಿಶೇಷ. ಶಾರುಖ್​ ಖಾನ್​ ನನ್ನ ಸಹೋದರನಿದ್ದಂತೆ. ಅವರಿಗಾಗಿ ನಾನು ಏನು ಬೇಕಾದರೂ ಮಾಡೋಕೆ ಸಿದ್ಧನಿದ್ದೇನೆ ಎಂದು ಸಲ್ಮಾನ್​ ಖಾನ್​ ಹೇಳಿದ್ದಾರೆ ಎಂದು ವರದಿ ಆಗಿದೆ.

ಸಲ್ಮಾನ್​ ಖಾನ್ ಸಂಭಾವನೆ ಬೇಡ ಎಂದ ಹೊರತಾಗಿಯೂ ಸಿನಿಮಾ ನಿರ್ಮಾಪಕ ಆದಿತ್ಯ ಚೋಪ್ರಾ ದುಬಾರಿ ಗಿಫ್ಟ್​ ಒಂದನ್ನು ನೀಡಿದ್ದಾರಂತೆ. ಆ ಗಿಫ್ಟ್​ ಏನು ಎನ್ನುವ ವಿಚಾರ ಇನ್ನೂ ಬಹಿರಂಗವಾಗಿಲ್ಲ. ದೇಶದಲ್ಲಿ ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ, ಪಠಾಣ್​ ಸಿನಿಮಾ ಶೂಟಿಂಗ್​​ ನಿಲ್ಲಿಸಲಾಗಿದೆ. ಇದರಿಂದ ಸಿನಿಮಾ ರಿಲೀಸ್​ ದಿನಾಂಕ ಕೂಡ ಮುಂದೂಡುತ್ತಿದೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!

 ಸೋತು ಸುಣ್ಣವಾಗಿರುವ ಶಾರುಖ್​ ಖಾನ್​ಗೆ ಈಗ ಸಿಗುತ್ತಿರುವ ಸಂಭಾವನೆ ಎಷ್ಟು?

Published On - 9:10 pm, Thu, 15 April 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ