Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಹಾಡು ನೋಡಿ ಅಲ್ಲು ಅರ್ಜುನ್​ ಪ್ರತಿಭೆಗೆ ಸಲಾಂ ಎಂದ ಸಲ್ಮಾನ್​ ಖಾನ್​

‘ಸೀಟಿಮಾರ್​’ ಹಾಡನ್ನು ಕಾಪಿ ಮಾಡಿದ್ದು ಸರಿಯಲ್ಲ ಎಂದು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​ ಆಗುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ಸಲ್ಮಾನ್​ ಖಾನ್​ ಅವರು ಅಲ್ಲು ಅರ್ಜುನ್​ಗೆ ಮೆಚ್ಚುಗೆ ಸೂಚಿಸುವ ಮೂಲಕ ಇಡೀ ಚರ್ಚೆ ಬೇರೆ ಕಡೆಗೆ ತಿರುಗುವಂತೆ ಮಾಡಿದ್ದಾರೆ.

ಒಂದೇ ಒಂದು ಹಾಡು ನೋಡಿ ಅಲ್ಲು ಅರ್ಜುನ್​ ಪ್ರತಿಭೆಗೆ ಸಲಾಂ ಎಂದ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​ - ಅಲ್ಲು ಅರ್ಜುನ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Apr 26, 2021 | 4:07 PM

ಕೆಲವು ವರ್ಷಗಳ ಹಿಂದೆ ದಕ್ಷಿಣ ಭಾರತದ ಹಿಟ್​ ಸಿನಿಮಾಗಳನ್ನು ರಿಮೇಕ್​ ಮಾಡಿದ ಬಳಿಕ ಮತ್ತೆ ಹಳೇ ಚಾರ್ಮ್​ ಪಡೆದುಕೊಂಡವರು ನಟ ಸಲ್ಮಾನ್ ಖಾನ್. ಇನ್ನು, ದಕ್ಷಿಣ ಭಾರತದ ಕೆಲವು ಸೂಪರ್​ ಹಿಟ್​ ಗೀತೆಗಳ ಮೇಲೂ ಬಾಲಿವುಡ್​ ಮಂದಿ ಕಣ್ಣಿಟ್ಟಿರುತ್ತಾರೆ. ಈಗ ಸಲ್ಮಾನ್​ ಖಾನ್​ ನಟಿಸಿರುವ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಸಿನಿಮಾದಲ್ಲಿ ಕೂಡ ಅಂಥ ಒಂದು ಹಾಡು ಬಳಕೆ ಆಗಿದೆ. ಅದರ ಬಗ್ಗೆ ಈಗಾಗಲೇ ಹಲವು ಬಗೆಯ ಚರ್ಚೆ ಶುರುವಾಗಿದೆ.

2017ರಲ್ಲಿ ಅಲ್ಲು ಅರ್ಜುನ್​ ನಟಿಸಿದ್ದ ದುವ್ವಡ ಜಗನ್ನಾಥಂ ಸಿನಿಮಾದಲ್ಲಿ ‘ಸೀಟಿಮಾರ್​ ಸೀಟಿಮಾರ್​..’ ಹಾಡು ತುಂಬ ಜನಪ್ರಿಯವಾಗಿತ್ತು. ಅದರಲ್ಲಿ ಅಲ್ಲು ಅರ್ಜುನ್​ ಮತ್ತು ನಟಿ ಪೂಜಾ ಹೆಗ್ಡೆ ಭರ್ಜರಿಯಾಗಿ ಸ್ಟೆಪ್​ ಹಾಕಿದ್ದರು. ಅದೇ ಹಾಡನ್ನು ಯಥಾವತ್ತಾಗಿ ಈಗ ‘ರಾಧೆ’ ಸಿನಿಮಾದಲ್ಲಿ ಬಳಕೆ ಮಾಡಲಾಗಿದೆ. ಅದರ ಬಗ್ಗೆ ಸಾಕಷ್ಟು ಟೀಕೆ ಕೇಳಿಬಂದಿದೆ. ಸಲ್ಲು ಹೀಗೆ ಕಾಪಿ ಮಾಡಿದ್ದು ಸರಿಯಲ್ಲ ಎಂದು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಸಲ್ಮಾನ್​ ಖಾನ್​ ಅವರು ಅಲ್ಲು ಅರ್ಜುನ್​ಗೆ ಮೆಚ್ಚುಗೆ ಸೂಚಿಸುವ ಮೂಲಕ ಇಡೀ ಚರ್ಚೆ ಬೇರೆ ಕಡೆಗೆ ತಿರುಗುವಂತೆ ಮಾಡಿದ್ದಾರೆ.

ಮೂಲ ಸೀಟಿಮಾರ್​ ಸಾಂಗ್​ನಲ್ಲಿ ಅಲ್ಲು ಅರ್ಜುನ್​ ಡ್ಯಾನ್ಸ್​ ಮಾಡಿರುವುದನ್ನು ಕಂಡು ಸಲ್ಮಾನ್​ ಖಾನ್​ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ. ‘ಸೀಟಿಮಾರ್​ ಹಾಡು ನೀಡಿದ್ದಕ್ಕಾಗಿ ನಿಮಗೆ ಧನ್ಯವಾದಗಳು. ಅದರಲ್ಲಿ ನಿಮ್ಮ ಪರ್ಫಾಮೆನ್ಸ್​​ ನೋಡಿ ಇಷ್ಟಪಟ್ಟೆ. ನಿಮ್ಮ ಡ್ಯಾನ್ಸ್​, ನಿಮ್ಮ ಸ್ಟೈಲ್​ ಎಲ್ಲವೂ ಫೆಂಟಾಸ್ಟಿಕ್​. ಕಾಳಜಿ ವಹಿಸಿ. ಸುರಕ್ಷಿತವಾಗಿರಿ. ಲವ್​ ಯು ಬ್ರದರ್​’ ಎಂದು ಸಲ್ಮಾನ್​ ಮಾಡಿರುವ ಟ್ವೀಟ್​ ವೈರಲ್​ ಆಗಿದೆ.

ಸಲ್ಮಾನ್​ ಹೇಳಿರುವ ಈ ಪ್ರೀತಿ ಪೂರ್ವಕ ಮಾತುಗಳಿಂದ ಅಲ್ಲು ಅರ್ಜುನ್​ ಖುಷಿ ಆಗಿದ್ದಾರೆ. ‘ಧನ್ಯವಾದಗಳು ಸಲ್ಮಾನ್​ ಅವರೇ. ನಿಮ್ಮಿಂದ ಮೆಚ್ಚುಗೆ ಸ್ವೀಕರಿಸುವುದಕ್ಕೆ ಖುಷಿ ಎನಿಸುತ್ತದೆ. ಬೆಳ್ಳಿಪರದೆ ಮೇಲೆ ರಾಧೆ ಸಿನಿಮಾಗೆ ಅಭಿಮಾನಿಗಳು ಸೀಟಿಮಾರ್​ ಎನ್ನಲಿ. ನಿಮ್ಮ ಪ್ರೀತಿಗೆ ಧನ್ಯವಾದಗಳು’ ಎಂದು ಅಲ್ಲು ಅರ್ಜುನ್​ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಲಾಕ್​ಡೌನ್​ನಲ್ಲೂ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್;​ ಆದ್ರೂ ಇದು ಮೆಚ್ಚುವ ಕೆಲಸ

Salman Khan: ಸಲ್ಮಾನ್​ ಖಾನ್​ ವಿರುದ್ಧ ತಿರುಗಿ ಬಿದ್ದ ಸುಶಾಂತ್ ಫ್ಯಾನ್ಸ್​; ‘ರಾಧೆ’ ಬಹಿಷ್ಕಾರ ಮಾಡಲು ಶಪಥ

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ