AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಹಾಡು ನೋಡಿ ಅಲ್ಲು ಅರ್ಜುನ್​ ಪ್ರತಿಭೆಗೆ ಸಲಾಂ ಎಂದ ಸಲ್ಮಾನ್​ ಖಾನ್​

‘ಸೀಟಿಮಾರ್​’ ಹಾಡನ್ನು ಕಾಪಿ ಮಾಡಿದ್ದು ಸರಿಯಲ್ಲ ಎಂದು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​ ಆಗುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ಸಲ್ಮಾನ್​ ಖಾನ್​ ಅವರು ಅಲ್ಲು ಅರ್ಜುನ್​ಗೆ ಮೆಚ್ಚುಗೆ ಸೂಚಿಸುವ ಮೂಲಕ ಇಡೀ ಚರ್ಚೆ ಬೇರೆ ಕಡೆಗೆ ತಿರುಗುವಂತೆ ಮಾಡಿದ್ದಾರೆ.

ಒಂದೇ ಒಂದು ಹಾಡು ನೋಡಿ ಅಲ್ಲು ಅರ್ಜುನ್​ ಪ್ರತಿಭೆಗೆ ಸಲಾಂ ಎಂದ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​ - ಅಲ್ಲು ಅರ್ಜುನ್​
ಮದನ್​ ಕುಮಾರ್​
| Edited By: |

Updated on: Apr 26, 2021 | 4:07 PM

Share

ಕೆಲವು ವರ್ಷಗಳ ಹಿಂದೆ ದಕ್ಷಿಣ ಭಾರತದ ಹಿಟ್​ ಸಿನಿಮಾಗಳನ್ನು ರಿಮೇಕ್​ ಮಾಡಿದ ಬಳಿಕ ಮತ್ತೆ ಹಳೇ ಚಾರ್ಮ್​ ಪಡೆದುಕೊಂಡವರು ನಟ ಸಲ್ಮಾನ್ ಖಾನ್. ಇನ್ನು, ದಕ್ಷಿಣ ಭಾರತದ ಕೆಲವು ಸೂಪರ್​ ಹಿಟ್​ ಗೀತೆಗಳ ಮೇಲೂ ಬಾಲಿವುಡ್​ ಮಂದಿ ಕಣ್ಣಿಟ್ಟಿರುತ್ತಾರೆ. ಈಗ ಸಲ್ಮಾನ್​ ಖಾನ್​ ನಟಿಸಿರುವ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಸಿನಿಮಾದಲ್ಲಿ ಕೂಡ ಅಂಥ ಒಂದು ಹಾಡು ಬಳಕೆ ಆಗಿದೆ. ಅದರ ಬಗ್ಗೆ ಈಗಾಗಲೇ ಹಲವು ಬಗೆಯ ಚರ್ಚೆ ಶುರುವಾಗಿದೆ.

2017ರಲ್ಲಿ ಅಲ್ಲು ಅರ್ಜುನ್​ ನಟಿಸಿದ್ದ ದುವ್ವಡ ಜಗನ್ನಾಥಂ ಸಿನಿಮಾದಲ್ಲಿ ‘ಸೀಟಿಮಾರ್​ ಸೀಟಿಮಾರ್​..’ ಹಾಡು ತುಂಬ ಜನಪ್ರಿಯವಾಗಿತ್ತು. ಅದರಲ್ಲಿ ಅಲ್ಲು ಅರ್ಜುನ್​ ಮತ್ತು ನಟಿ ಪೂಜಾ ಹೆಗ್ಡೆ ಭರ್ಜರಿಯಾಗಿ ಸ್ಟೆಪ್​ ಹಾಕಿದ್ದರು. ಅದೇ ಹಾಡನ್ನು ಯಥಾವತ್ತಾಗಿ ಈಗ ‘ರಾಧೆ’ ಸಿನಿಮಾದಲ್ಲಿ ಬಳಕೆ ಮಾಡಲಾಗಿದೆ. ಅದರ ಬಗ್ಗೆ ಸಾಕಷ್ಟು ಟೀಕೆ ಕೇಳಿಬಂದಿದೆ. ಸಲ್ಲು ಹೀಗೆ ಕಾಪಿ ಮಾಡಿದ್ದು ಸರಿಯಲ್ಲ ಎಂದು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಸಲ್ಮಾನ್​ ಖಾನ್​ ಅವರು ಅಲ್ಲು ಅರ್ಜುನ್​ಗೆ ಮೆಚ್ಚುಗೆ ಸೂಚಿಸುವ ಮೂಲಕ ಇಡೀ ಚರ್ಚೆ ಬೇರೆ ಕಡೆಗೆ ತಿರುಗುವಂತೆ ಮಾಡಿದ್ದಾರೆ.

ಮೂಲ ಸೀಟಿಮಾರ್​ ಸಾಂಗ್​ನಲ್ಲಿ ಅಲ್ಲು ಅರ್ಜುನ್​ ಡ್ಯಾನ್ಸ್​ ಮಾಡಿರುವುದನ್ನು ಕಂಡು ಸಲ್ಮಾನ್​ ಖಾನ್​ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ. ‘ಸೀಟಿಮಾರ್​ ಹಾಡು ನೀಡಿದ್ದಕ್ಕಾಗಿ ನಿಮಗೆ ಧನ್ಯವಾದಗಳು. ಅದರಲ್ಲಿ ನಿಮ್ಮ ಪರ್ಫಾಮೆನ್ಸ್​​ ನೋಡಿ ಇಷ್ಟಪಟ್ಟೆ. ನಿಮ್ಮ ಡ್ಯಾನ್ಸ್​, ನಿಮ್ಮ ಸ್ಟೈಲ್​ ಎಲ್ಲವೂ ಫೆಂಟಾಸ್ಟಿಕ್​. ಕಾಳಜಿ ವಹಿಸಿ. ಸುರಕ್ಷಿತವಾಗಿರಿ. ಲವ್​ ಯು ಬ್ರದರ್​’ ಎಂದು ಸಲ್ಮಾನ್​ ಮಾಡಿರುವ ಟ್ವೀಟ್​ ವೈರಲ್​ ಆಗಿದೆ.

ಸಲ್ಮಾನ್​ ಹೇಳಿರುವ ಈ ಪ್ರೀತಿ ಪೂರ್ವಕ ಮಾತುಗಳಿಂದ ಅಲ್ಲು ಅರ್ಜುನ್​ ಖುಷಿ ಆಗಿದ್ದಾರೆ. ‘ಧನ್ಯವಾದಗಳು ಸಲ್ಮಾನ್​ ಅವರೇ. ನಿಮ್ಮಿಂದ ಮೆಚ್ಚುಗೆ ಸ್ವೀಕರಿಸುವುದಕ್ಕೆ ಖುಷಿ ಎನಿಸುತ್ತದೆ. ಬೆಳ್ಳಿಪರದೆ ಮೇಲೆ ರಾಧೆ ಸಿನಿಮಾಗೆ ಅಭಿಮಾನಿಗಳು ಸೀಟಿಮಾರ್​ ಎನ್ನಲಿ. ನಿಮ್ಮ ಪ್ರೀತಿಗೆ ಧನ್ಯವಾದಗಳು’ ಎಂದು ಅಲ್ಲು ಅರ್ಜುನ್​ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಲಾಕ್​ಡೌನ್​ನಲ್ಲೂ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್;​ ಆದ್ರೂ ಇದು ಮೆಚ್ಚುವ ಕೆಲಸ

Salman Khan: ಸಲ್ಮಾನ್​ ಖಾನ್​ ವಿರುದ್ಧ ತಿರುಗಿ ಬಿದ್ದ ಸುಶಾಂತ್ ಫ್ಯಾನ್ಸ್​; ‘ರಾಧೆ’ ಬಹಿಷ್ಕಾರ ಮಾಡಲು ಶಪಥ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’