AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಹಾಡು ನೋಡಿ ಅಲ್ಲು ಅರ್ಜುನ್​ ಪ್ರತಿಭೆಗೆ ಸಲಾಂ ಎಂದ ಸಲ್ಮಾನ್​ ಖಾನ್​

‘ಸೀಟಿಮಾರ್​’ ಹಾಡನ್ನು ಕಾಪಿ ಮಾಡಿದ್ದು ಸರಿಯಲ್ಲ ಎಂದು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​ ಆಗುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ಸಲ್ಮಾನ್​ ಖಾನ್​ ಅವರು ಅಲ್ಲು ಅರ್ಜುನ್​ಗೆ ಮೆಚ್ಚುಗೆ ಸೂಚಿಸುವ ಮೂಲಕ ಇಡೀ ಚರ್ಚೆ ಬೇರೆ ಕಡೆಗೆ ತಿರುಗುವಂತೆ ಮಾಡಿದ್ದಾರೆ.

ಒಂದೇ ಒಂದು ಹಾಡು ನೋಡಿ ಅಲ್ಲು ಅರ್ಜುನ್​ ಪ್ರತಿಭೆಗೆ ಸಲಾಂ ಎಂದ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​ - ಅಲ್ಲು ಅರ್ಜುನ್​
ಮದನ್​ ಕುಮಾರ್​
| Edited By: |

Updated on: Apr 26, 2021 | 4:07 PM

Share

ಕೆಲವು ವರ್ಷಗಳ ಹಿಂದೆ ದಕ್ಷಿಣ ಭಾರತದ ಹಿಟ್​ ಸಿನಿಮಾಗಳನ್ನು ರಿಮೇಕ್​ ಮಾಡಿದ ಬಳಿಕ ಮತ್ತೆ ಹಳೇ ಚಾರ್ಮ್​ ಪಡೆದುಕೊಂಡವರು ನಟ ಸಲ್ಮಾನ್ ಖಾನ್. ಇನ್ನು, ದಕ್ಷಿಣ ಭಾರತದ ಕೆಲವು ಸೂಪರ್​ ಹಿಟ್​ ಗೀತೆಗಳ ಮೇಲೂ ಬಾಲಿವುಡ್​ ಮಂದಿ ಕಣ್ಣಿಟ್ಟಿರುತ್ತಾರೆ. ಈಗ ಸಲ್ಮಾನ್​ ಖಾನ್​ ನಟಿಸಿರುವ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಸಿನಿಮಾದಲ್ಲಿ ಕೂಡ ಅಂಥ ಒಂದು ಹಾಡು ಬಳಕೆ ಆಗಿದೆ. ಅದರ ಬಗ್ಗೆ ಈಗಾಗಲೇ ಹಲವು ಬಗೆಯ ಚರ್ಚೆ ಶುರುವಾಗಿದೆ.

2017ರಲ್ಲಿ ಅಲ್ಲು ಅರ್ಜುನ್​ ನಟಿಸಿದ್ದ ದುವ್ವಡ ಜಗನ್ನಾಥಂ ಸಿನಿಮಾದಲ್ಲಿ ‘ಸೀಟಿಮಾರ್​ ಸೀಟಿಮಾರ್​..’ ಹಾಡು ತುಂಬ ಜನಪ್ರಿಯವಾಗಿತ್ತು. ಅದರಲ್ಲಿ ಅಲ್ಲು ಅರ್ಜುನ್​ ಮತ್ತು ನಟಿ ಪೂಜಾ ಹೆಗ್ಡೆ ಭರ್ಜರಿಯಾಗಿ ಸ್ಟೆಪ್​ ಹಾಕಿದ್ದರು. ಅದೇ ಹಾಡನ್ನು ಯಥಾವತ್ತಾಗಿ ಈಗ ‘ರಾಧೆ’ ಸಿನಿಮಾದಲ್ಲಿ ಬಳಕೆ ಮಾಡಲಾಗಿದೆ. ಅದರ ಬಗ್ಗೆ ಸಾಕಷ್ಟು ಟೀಕೆ ಕೇಳಿಬಂದಿದೆ. ಸಲ್ಲು ಹೀಗೆ ಕಾಪಿ ಮಾಡಿದ್ದು ಸರಿಯಲ್ಲ ಎಂದು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಸಲ್ಮಾನ್​ ಖಾನ್​ ಅವರು ಅಲ್ಲು ಅರ್ಜುನ್​ಗೆ ಮೆಚ್ಚುಗೆ ಸೂಚಿಸುವ ಮೂಲಕ ಇಡೀ ಚರ್ಚೆ ಬೇರೆ ಕಡೆಗೆ ತಿರುಗುವಂತೆ ಮಾಡಿದ್ದಾರೆ.

ಮೂಲ ಸೀಟಿಮಾರ್​ ಸಾಂಗ್​ನಲ್ಲಿ ಅಲ್ಲು ಅರ್ಜುನ್​ ಡ್ಯಾನ್ಸ್​ ಮಾಡಿರುವುದನ್ನು ಕಂಡು ಸಲ್ಮಾನ್​ ಖಾನ್​ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ. ‘ಸೀಟಿಮಾರ್​ ಹಾಡು ನೀಡಿದ್ದಕ್ಕಾಗಿ ನಿಮಗೆ ಧನ್ಯವಾದಗಳು. ಅದರಲ್ಲಿ ನಿಮ್ಮ ಪರ್ಫಾಮೆನ್ಸ್​​ ನೋಡಿ ಇಷ್ಟಪಟ್ಟೆ. ನಿಮ್ಮ ಡ್ಯಾನ್ಸ್​, ನಿಮ್ಮ ಸ್ಟೈಲ್​ ಎಲ್ಲವೂ ಫೆಂಟಾಸ್ಟಿಕ್​. ಕಾಳಜಿ ವಹಿಸಿ. ಸುರಕ್ಷಿತವಾಗಿರಿ. ಲವ್​ ಯು ಬ್ರದರ್​’ ಎಂದು ಸಲ್ಮಾನ್​ ಮಾಡಿರುವ ಟ್ವೀಟ್​ ವೈರಲ್​ ಆಗಿದೆ.

ಸಲ್ಮಾನ್​ ಹೇಳಿರುವ ಈ ಪ್ರೀತಿ ಪೂರ್ವಕ ಮಾತುಗಳಿಂದ ಅಲ್ಲು ಅರ್ಜುನ್​ ಖುಷಿ ಆಗಿದ್ದಾರೆ. ‘ಧನ್ಯವಾದಗಳು ಸಲ್ಮಾನ್​ ಅವರೇ. ನಿಮ್ಮಿಂದ ಮೆಚ್ಚುಗೆ ಸ್ವೀಕರಿಸುವುದಕ್ಕೆ ಖುಷಿ ಎನಿಸುತ್ತದೆ. ಬೆಳ್ಳಿಪರದೆ ಮೇಲೆ ರಾಧೆ ಸಿನಿಮಾಗೆ ಅಭಿಮಾನಿಗಳು ಸೀಟಿಮಾರ್​ ಎನ್ನಲಿ. ನಿಮ್ಮ ಪ್ರೀತಿಗೆ ಧನ್ಯವಾದಗಳು’ ಎಂದು ಅಲ್ಲು ಅರ್ಜುನ್​ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಲಾಕ್​ಡೌನ್​ನಲ್ಲೂ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್;​ ಆದ್ರೂ ಇದು ಮೆಚ್ಚುವ ಕೆಲಸ

Salman Khan: ಸಲ್ಮಾನ್​ ಖಾನ್​ ವಿರುದ್ಧ ತಿರುಗಿ ಬಿದ್ದ ಸುಶಾಂತ್ ಫ್ಯಾನ್ಸ್​; ‘ರಾಧೆ’ ಬಹಿಷ್ಕಾರ ಮಾಡಲು ಶಪಥ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!