Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಹಾಡು ನೋಡಿ ಅಲ್ಲು ಅರ್ಜುನ್​ ಪ್ರತಿಭೆಗೆ ಸಲಾಂ ಎಂದ ಸಲ್ಮಾನ್​ ಖಾನ್​

‘ಸೀಟಿಮಾರ್​’ ಹಾಡನ್ನು ಕಾಪಿ ಮಾಡಿದ್ದು ಸರಿಯಲ್ಲ ಎಂದು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​ ಆಗುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ಸಲ್ಮಾನ್​ ಖಾನ್​ ಅವರು ಅಲ್ಲು ಅರ್ಜುನ್​ಗೆ ಮೆಚ್ಚುಗೆ ಸೂಚಿಸುವ ಮೂಲಕ ಇಡೀ ಚರ್ಚೆ ಬೇರೆ ಕಡೆಗೆ ತಿರುಗುವಂತೆ ಮಾಡಿದ್ದಾರೆ.

ಒಂದೇ ಒಂದು ಹಾಡು ನೋಡಿ ಅಲ್ಲು ಅರ್ಜುನ್​ ಪ್ರತಿಭೆಗೆ ಸಲಾಂ ಎಂದ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​ - ಅಲ್ಲು ಅರ್ಜುನ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Apr 26, 2021 | 4:07 PM

ಕೆಲವು ವರ್ಷಗಳ ಹಿಂದೆ ದಕ್ಷಿಣ ಭಾರತದ ಹಿಟ್​ ಸಿನಿಮಾಗಳನ್ನು ರಿಮೇಕ್​ ಮಾಡಿದ ಬಳಿಕ ಮತ್ತೆ ಹಳೇ ಚಾರ್ಮ್​ ಪಡೆದುಕೊಂಡವರು ನಟ ಸಲ್ಮಾನ್ ಖಾನ್. ಇನ್ನು, ದಕ್ಷಿಣ ಭಾರತದ ಕೆಲವು ಸೂಪರ್​ ಹಿಟ್​ ಗೀತೆಗಳ ಮೇಲೂ ಬಾಲಿವುಡ್​ ಮಂದಿ ಕಣ್ಣಿಟ್ಟಿರುತ್ತಾರೆ. ಈಗ ಸಲ್ಮಾನ್​ ಖಾನ್​ ನಟಿಸಿರುವ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಸಿನಿಮಾದಲ್ಲಿ ಕೂಡ ಅಂಥ ಒಂದು ಹಾಡು ಬಳಕೆ ಆಗಿದೆ. ಅದರ ಬಗ್ಗೆ ಈಗಾಗಲೇ ಹಲವು ಬಗೆಯ ಚರ್ಚೆ ಶುರುವಾಗಿದೆ.

2017ರಲ್ಲಿ ಅಲ್ಲು ಅರ್ಜುನ್​ ನಟಿಸಿದ್ದ ದುವ್ವಡ ಜಗನ್ನಾಥಂ ಸಿನಿಮಾದಲ್ಲಿ ‘ಸೀಟಿಮಾರ್​ ಸೀಟಿಮಾರ್​..’ ಹಾಡು ತುಂಬ ಜನಪ್ರಿಯವಾಗಿತ್ತು. ಅದರಲ್ಲಿ ಅಲ್ಲು ಅರ್ಜುನ್​ ಮತ್ತು ನಟಿ ಪೂಜಾ ಹೆಗ್ಡೆ ಭರ್ಜರಿಯಾಗಿ ಸ್ಟೆಪ್​ ಹಾಕಿದ್ದರು. ಅದೇ ಹಾಡನ್ನು ಯಥಾವತ್ತಾಗಿ ಈಗ ‘ರಾಧೆ’ ಸಿನಿಮಾದಲ್ಲಿ ಬಳಕೆ ಮಾಡಲಾಗಿದೆ. ಅದರ ಬಗ್ಗೆ ಸಾಕಷ್ಟು ಟೀಕೆ ಕೇಳಿಬಂದಿದೆ. ಸಲ್ಲು ಹೀಗೆ ಕಾಪಿ ಮಾಡಿದ್ದು ಸರಿಯಲ್ಲ ಎಂದು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಸಲ್ಮಾನ್​ ಖಾನ್​ ಅವರು ಅಲ್ಲು ಅರ್ಜುನ್​ಗೆ ಮೆಚ್ಚುಗೆ ಸೂಚಿಸುವ ಮೂಲಕ ಇಡೀ ಚರ್ಚೆ ಬೇರೆ ಕಡೆಗೆ ತಿರುಗುವಂತೆ ಮಾಡಿದ್ದಾರೆ.

ಮೂಲ ಸೀಟಿಮಾರ್​ ಸಾಂಗ್​ನಲ್ಲಿ ಅಲ್ಲು ಅರ್ಜುನ್​ ಡ್ಯಾನ್ಸ್​ ಮಾಡಿರುವುದನ್ನು ಕಂಡು ಸಲ್ಮಾನ್​ ಖಾನ್​ ಮೆಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ. ‘ಸೀಟಿಮಾರ್​ ಹಾಡು ನೀಡಿದ್ದಕ್ಕಾಗಿ ನಿಮಗೆ ಧನ್ಯವಾದಗಳು. ಅದರಲ್ಲಿ ನಿಮ್ಮ ಪರ್ಫಾಮೆನ್ಸ್​​ ನೋಡಿ ಇಷ್ಟಪಟ್ಟೆ. ನಿಮ್ಮ ಡ್ಯಾನ್ಸ್​, ನಿಮ್ಮ ಸ್ಟೈಲ್​ ಎಲ್ಲವೂ ಫೆಂಟಾಸ್ಟಿಕ್​. ಕಾಳಜಿ ವಹಿಸಿ. ಸುರಕ್ಷಿತವಾಗಿರಿ. ಲವ್​ ಯು ಬ್ರದರ್​’ ಎಂದು ಸಲ್ಮಾನ್​ ಮಾಡಿರುವ ಟ್ವೀಟ್​ ವೈರಲ್​ ಆಗಿದೆ.

ಸಲ್ಮಾನ್​ ಹೇಳಿರುವ ಈ ಪ್ರೀತಿ ಪೂರ್ವಕ ಮಾತುಗಳಿಂದ ಅಲ್ಲು ಅರ್ಜುನ್​ ಖುಷಿ ಆಗಿದ್ದಾರೆ. ‘ಧನ್ಯವಾದಗಳು ಸಲ್ಮಾನ್​ ಅವರೇ. ನಿಮ್ಮಿಂದ ಮೆಚ್ಚುಗೆ ಸ್ವೀಕರಿಸುವುದಕ್ಕೆ ಖುಷಿ ಎನಿಸುತ್ತದೆ. ಬೆಳ್ಳಿಪರದೆ ಮೇಲೆ ರಾಧೆ ಸಿನಿಮಾಗೆ ಅಭಿಮಾನಿಗಳು ಸೀಟಿಮಾರ್​ ಎನ್ನಲಿ. ನಿಮ್ಮ ಪ್ರೀತಿಗೆ ಧನ್ಯವಾದಗಳು’ ಎಂದು ಅಲ್ಲು ಅರ್ಜುನ್​ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಲಾಕ್​ಡೌನ್​ನಲ್ಲೂ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್;​ ಆದ್ರೂ ಇದು ಮೆಚ್ಚುವ ಕೆಲಸ

Salman Khan: ಸಲ್ಮಾನ್​ ಖಾನ್​ ವಿರುದ್ಧ ತಿರುಗಿ ಬಿದ್ದ ಸುಶಾಂತ್ ಫ್ಯಾನ್ಸ್​; ‘ರಾಧೆ’ ಬಹಿಷ್ಕಾರ ಮಾಡಲು ಶಪಥ

ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
ಕ್ಯಾಂಟರ್ ಚಾಲಕ ಪಾನಮತ್ತನಾಗಿದ್ದ, ಅಪಘಾತದಲ್ಲಿ ಆಟೋರಿಕ್ಷಾವೊಂದು ಅಪ್ಪಚ್ಚಿ
ಕ್ಯಾಂಟರ್ ಚಾಲಕ ಪಾನಮತ್ತನಾಗಿದ್ದ, ಅಪಘಾತದಲ್ಲಿ ಆಟೋರಿಕ್ಷಾವೊಂದು ಅಪ್ಪಚ್ಚಿ