AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್​ಗೆ ಬಾಲಿವುಡ್​ನಲ್ಲಿ ಬಿಗ್​ ಕ್ಲ್ಯಾಶ್​; ಜಾನ್​-ಸಲ್ಲು ಚಿತ್ರಗಳು ಮುಖಾಮುಖಿ

ಸಲ್ಮಾನ್​ ಖಾನ್​ ನಟನೆಯ 'ರಾಧೆ' ಈದ್​ ಪ್ರಯುಕ್ತ ಮೇ 13ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಕಾಂಪಿಟೇಷನ್​ ಕೊಡೋಕೆ ಜಾನ್​ ಅಬ್ರಹಾಂ ರೆಡಿ ಆಗಿದ್ದಾರೆ.

ಈದ್​ಗೆ ಬಾಲಿವುಡ್​ನಲ್ಲಿ ಬಿಗ್​ ಕ್ಲ್ಯಾಶ್​; ಜಾನ್​-ಸಲ್ಲು ಚಿತ್ರಗಳು ಮುಖಾಮುಖಿ
ಸಲ್ಮಾನ್​ ಖಾನ್​-ಜಾನ್​ ಅಬ್ರಹಾಂ
ರಾಜೇಶ್ ದುಗ್ಗುಮನೆ
|

Updated on: Mar 18, 2021 | 7:09 PM

Share

ಬಾಲಿವುಡ್​ನಲ್ಲಿ ಸಿನಿಮಾಗಳು ಕ್ಲ್ಯಾಶ್​ ಆಗೋದು ಹೊಸ ವಿಚಾರ ಅಲ್ಲವೇ ಅಲ್ಲ. ಹಬ್ಬದ ಸಮಯದಲ್ಲಿ ಅಥವಾ ವಿಶೇಷ ದಿನಗಳಲ್ಲಿ ಸ್ಟಾರ್​ ನಟರ ಚಿತ್ರಗಳು ರಿಲೀಸ್​ ಆಗುತ್ತವೆ. ಕೊರೊನಾದಿಂದ ತಣ್ಣಗಾಗಿದ್ದ ಬಾಲಿವುಡ್​ ಪುಟಿದೆದ್ದಿದ್ದು, ಸಾಲು ಸಾಲು ಚಿತ್ರಗಳು ರಿಲೀಸ್​ಗೆ ರೆಡಿ ಆಗಿವೆ. ಈಗ ಈದ್​ ಹಬ್ಬಕ್ಕೆ ಬಾಲಿವುಡ್​ನಲ್ಲಿ ದೊಡ್ಡ ಕ್ಲ್ಯಾಶ್​ ಏರ್ಪಡುತ್ತಿದೆ. ಸಲ್ಮಾನ್​ ಖಾನ್​ ನಟನೆಯ ‘ರಾಧೆ’ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರ ಈದ್​ ಪ್ರಯುಕ್ತ ಮೇ 13ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಕಾಂಪಿಟೇಷನ್​ ಕೊಡೋಕೆ ಜಾನ್​ ಅಬ್ರಹಾಂ ರೆಡಿ ಆಗಿದ್ದಾರೆ. ಅವರ ನಟನೆಯ ‘ಸತ್ಯಮೇವ ಜಯತೆ 2’ ಚಿತ್ರ ಕೂಡ ಈದ್​ಗೆ ಬಿಡುಗಡೆ ಆಗುತ್ತಿದೆ.

ಸತ್ಯಮೇವ ಜಯತೆ ಸಿನಿಮಾದಲ್ಲಿ ಜಾನ್​ ಅಬ್ರಹಾಂ ಮೂರು ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಹೊಸ ಲುಕ್​ಗಳನ್ನು ಚಿತ್ರತಂಡ ಶೀಘ್ರವೇ ರಿಲೀಸ್​ ಮಾಡಲಿದೆ ಎನ್ನಲಾಗುತ್ತಿದೆ. ಕಳೆದ ವರ್ಷ ಸತ್ಯಮೇವ ಜಯತೆ-2 ಸಿನಿಮಾದಲ್ಲಿ ಜಾನ್​ ಅಬ್ರಹಾಂ ಲುಕ್​ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಆದರೆ, ಇದನ್ನು ಚಿತ್ರತಂಡ ತಳ್ಳಿ ಹಾಕಿತ್ತು.

2009ರ ನಂತರ ಸಲ್ಮಾನ್​ ಖಾನ್​ ನಟನೆಯ ಚಿತ್ರಗಳು ಬಹುತೇಕವಾಗಿ ಈದ್​ ಅಂದೇ ತೆರೆಗೆ ಬರುತ್ತಿದೆ. ಈ ವರ್ಷವೂ ಸಲ್ಮಾನ್​ ಈ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುವ ಆಲೋಚನೆಯಲ್ಲಿದ್ದಾರೆ. ಈಗ ಜಾನ್​ ಅಬ್ರಹಾಂ ಸಿನಿಮಾ ಕೂಡ ಇದೇ ದಿನ ಬರುತ್ತಿರುವುದು ಸಿನಿಮಾ ಪ್ರೇಕ್ಷಕರ ಖುಷಿ ಹೆಚ್ಚಿಸಿದೆ.

ಅಂದಹಾಗೆ, ಈ ಎರಡೂ ಸಿನಿಮಾಗಳು ಸಾಕಷ್ಟು ಆ್ಯಕ್ಷನ್​ನಿಂದ ಕೂಡಿರಲಿವೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ರಾಧೆ ಚಿತ್ರಕ್ಕೆ ಪ್ರಭುದೇವ ಅವರ ನಿರ್ದೇಶನ ಇದೆ. ನಾಯಕಿಯಾಗಿ ದಿಶಾ ಪಟಾಣಿ ನಟಿಸಿದ್ದಾರೆ. ಜಾಕಿ ಶ್ರಾಫ್​, ರಣದೀಪ್​ ಹೂಡ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. 2019ರ ಅಕ್ಟೋಬರ್​ 18ರಂದು ಚಿತ್ರ ಅಧಿಕೃತವಾಗಿ ಘೋಷಣೆ ಆಗಿತ್ತು. ಎಲ್ಲ ಅಂದುಕೊಂಡಿದ್ದರೆ ಕಳೆದ ಮೇ ತಿಂಗಳಲ್ಲೇ ಚಿತ್ರ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು.

ಇನ್ನು ಸತ್ಯಮೇವ ಜಯತೆ 2ಗೆ ಮಿಲಪ್​ ಜಾವೇರಿ ನಿರ್ದೇಶನವಿದೆ. ಜಾನ್​ ಅಬ್ರಹಾಂಗೆ ಜತೆಯಾಗಿ ದಿವ್ಯಾ ಖೋಸ್ಲಾ ಕುಮಾರ್ ನಟಿಸಿದ್ದಾರೆ. 2018ರಲ್ಲಿ ತೆರೆಕಂಡ ಸತ್ಯಮೇವ ಜಯತೆ ಚಿತ್ರದ ಮುಂದಿನ ಭಾಗ ಇದಾಗಿದೆ.

ಇದನ್ನೂ ಓದಿ: ಈದ್​ ವೇಳೆಗೆ ತೆರೆಕಾಣಲಿದೆ ಸಲ್ಮಾನ್​ ಖಾನ್ ಅಭಿನಯದ​ ರಾಧೆ; ಪ್ರಭುದೇವ ನಿರ್ದೇಶನದ ಮೇಲೆ ಭಾರೀ ನಿರೀಕ್ಷೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?