AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್​ಗೆ ಬಾಲಿವುಡ್​ನಲ್ಲಿ ಬಿಗ್​ ಕ್ಲ್ಯಾಶ್​; ಜಾನ್​-ಸಲ್ಲು ಚಿತ್ರಗಳು ಮುಖಾಮುಖಿ

ಸಲ್ಮಾನ್​ ಖಾನ್​ ನಟನೆಯ 'ರಾಧೆ' ಈದ್​ ಪ್ರಯುಕ್ತ ಮೇ 13ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಕಾಂಪಿಟೇಷನ್​ ಕೊಡೋಕೆ ಜಾನ್​ ಅಬ್ರಹಾಂ ರೆಡಿ ಆಗಿದ್ದಾರೆ.

ಈದ್​ಗೆ ಬಾಲಿವುಡ್​ನಲ್ಲಿ ಬಿಗ್​ ಕ್ಲ್ಯಾಶ್​; ಜಾನ್​-ಸಲ್ಲು ಚಿತ್ರಗಳು ಮುಖಾಮುಖಿ
ಸಲ್ಮಾನ್​ ಖಾನ್​-ಜಾನ್​ ಅಬ್ರಹಾಂ
ರಾಜೇಶ್ ದುಗ್ಗುಮನೆ
|

Updated on: Mar 18, 2021 | 7:09 PM

Share

ಬಾಲಿವುಡ್​ನಲ್ಲಿ ಸಿನಿಮಾಗಳು ಕ್ಲ್ಯಾಶ್​ ಆಗೋದು ಹೊಸ ವಿಚಾರ ಅಲ್ಲವೇ ಅಲ್ಲ. ಹಬ್ಬದ ಸಮಯದಲ್ಲಿ ಅಥವಾ ವಿಶೇಷ ದಿನಗಳಲ್ಲಿ ಸ್ಟಾರ್​ ನಟರ ಚಿತ್ರಗಳು ರಿಲೀಸ್​ ಆಗುತ್ತವೆ. ಕೊರೊನಾದಿಂದ ತಣ್ಣಗಾಗಿದ್ದ ಬಾಲಿವುಡ್​ ಪುಟಿದೆದ್ದಿದ್ದು, ಸಾಲು ಸಾಲು ಚಿತ್ರಗಳು ರಿಲೀಸ್​ಗೆ ರೆಡಿ ಆಗಿವೆ. ಈಗ ಈದ್​ ಹಬ್ಬಕ್ಕೆ ಬಾಲಿವುಡ್​ನಲ್ಲಿ ದೊಡ್ಡ ಕ್ಲ್ಯಾಶ್​ ಏರ್ಪಡುತ್ತಿದೆ. ಸಲ್ಮಾನ್​ ಖಾನ್​ ನಟನೆಯ ‘ರಾಧೆ’ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರ ಈದ್​ ಪ್ರಯುಕ್ತ ಮೇ 13ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಕಾಂಪಿಟೇಷನ್​ ಕೊಡೋಕೆ ಜಾನ್​ ಅಬ್ರಹಾಂ ರೆಡಿ ಆಗಿದ್ದಾರೆ. ಅವರ ನಟನೆಯ ‘ಸತ್ಯಮೇವ ಜಯತೆ 2’ ಚಿತ್ರ ಕೂಡ ಈದ್​ಗೆ ಬಿಡುಗಡೆ ಆಗುತ್ತಿದೆ.

ಸತ್ಯಮೇವ ಜಯತೆ ಸಿನಿಮಾದಲ್ಲಿ ಜಾನ್​ ಅಬ್ರಹಾಂ ಮೂರು ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಹೊಸ ಲುಕ್​ಗಳನ್ನು ಚಿತ್ರತಂಡ ಶೀಘ್ರವೇ ರಿಲೀಸ್​ ಮಾಡಲಿದೆ ಎನ್ನಲಾಗುತ್ತಿದೆ. ಕಳೆದ ವರ್ಷ ಸತ್ಯಮೇವ ಜಯತೆ-2 ಸಿನಿಮಾದಲ್ಲಿ ಜಾನ್​ ಅಬ್ರಹಾಂ ಲುಕ್​ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಆದರೆ, ಇದನ್ನು ಚಿತ್ರತಂಡ ತಳ್ಳಿ ಹಾಕಿತ್ತು.

2009ರ ನಂತರ ಸಲ್ಮಾನ್​ ಖಾನ್​ ನಟನೆಯ ಚಿತ್ರಗಳು ಬಹುತೇಕವಾಗಿ ಈದ್​ ಅಂದೇ ತೆರೆಗೆ ಬರುತ್ತಿದೆ. ಈ ವರ್ಷವೂ ಸಲ್ಮಾನ್​ ಈ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುವ ಆಲೋಚನೆಯಲ್ಲಿದ್ದಾರೆ. ಈಗ ಜಾನ್​ ಅಬ್ರಹಾಂ ಸಿನಿಮಾ ಕೂಡ ಇದೇ ದಿನ ಬರುತ್ತಿರುವುದು ಸಿನಿಮಾ ಪ್ರೇಕ್ಷಕರ ಖುಷಿ ಹೆಚ್ಚಿಸಿದೆ.

ಅಂದಹಾಗೆ, ಈ ಎರಡೂ ಸಿನಿಮಾಗಳು ಸಾಕಷ್ಟು ಆ್ಯಕ್ಷನ್​ನಿಂದ ಕೂಡಿರಲಿವೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ರಾಧೆ ಚಿತ್ರಕ್ಕೆ ಪ್ರಭುದೇವ ಅವರ ನಿರ್ದೇಶನ ಇದೆ. ನಾಯಕಿಯಾಗಿ ದಿಶಾ ಪಟಾಣಿ ನಟಿಸಿದ್ದಾರೆ. ಜಾಕಿ ಶ್ರಾಫ್​, ರಣದೀಪ್​ ಹೂಡ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. 2019ರ ಅಕ್ಟೋಬರ್​ 18ರಂದು ಚಿತ್ರ ಅಧಿಕೃತವಾಗಿ ಘೋಷಣೆ ಆಗಿತ್ತು. ಎಲ್ಲ ಅಂದುಕೊಂಡಿದ್ದರೆ ಕಳೆದ ಮೇ ತಿಂಗಳಲ್ಲೇ ಚಿತ್ರ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು.

ಇನ್ನು ಸತ್ಯಮೇವ ಜಯತೆ 2ಗೆ ಮಿಲಪ್​ ಜಾವೇರಿ ನಿರ್ದೇಶನವಿದೆ. ಜಾನ್​ ಅಬ್ರಹಾಂಗೆ ಜತೆಯಾಗಿ ದಿವ್ಯಾ ಖೋಸ್ಲಾ ಕುಮಾರ್ ನಟಿಸಿದ್ದಾರೆ. 2018ರಲ್ಲಿ ತೆರೆಕಂಡ ಸತ್ಯಮೇವ ಜಯತೆ ಚಿತ್ರದ ಮುಂದಿನ ಭಾಗ ಇದಾಗಿದೆ.

ಇದನ್ನೂ ಓದಿ: ಈದ್​ ವೇಳೆಗೆ ತೆರೆಕಾಣಲಿದೆ ಸಲ್ಮಾನ್​ ಖಾನ್ ಅಭಿನಯದ​ ರಾಧೆ; ಪ್ರಭುದೇವ ನಿರ್ದೇಶನದ ಮೇಲೆ ಭಾರೀ ನಿರೀಕ್ಷೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ