AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧೆ ನಿಮ್ಮನ್ನು ರಂಜಿಸೋದು ಕೇವಲ 114 ನಿಮಿಷ; ಇದು ಸಲ್ಮಾನ್ ನಟನೆಯ ಅತಿ ಸಣ್ಣ ಚಿತ್ರ!

ಈ ಮೊದಲು ತೆರೆಕಂಡ ಸಲ್ಮಾನ್​ ನಟನೆಯ ಚಿತ್ರಗಳು ಎರಡೂವರೆ ಗಂಟೆಗೂ ಮೀರಿ ಇರುತ್ತಿದ್ದವು. ಆದರೆ, ಈಗ ಈ ಸಿನಿಮಾ ಕೇವಲ 114 ನಿಮಿಷ ಇರಲಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

ರಾಧೆ ನಿಮ್ಮನ್ನು ರಂಜಿಸೋದು ಕೇವಲ 114 ನಿಮಿಷ; ಇದು ಸಲ್ಮಾನ್ ನಟನೆಯ ಅತಿ ಸಣ್ಣ ಚಿತ್ರ!
ಸಲ್ಮಾನ್​ ಖಾನ್​
ರಾಜೇಶ್ ದುಗ್ಗುಮನೆ
|

Updated on: May 03, 2021 | 8:41 PM

Share

ಕೊರೊನಾ ವೈರಸ್​ ಎರಡನೆ ಅಲೆ ಮಿತಿಮೀರಿ ಹರಡುತ್ತಿರುವುದರಿಂದ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರಗಳನ್ನು ಮುಚ್ಚುವ ಆದೇಶ ಹೊರಡಿಸಲಾಗಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ಇದರ ಮಧ್ಯೆಯೂ ಸಲ್ಮಾನ್​ ಖಾನ್​ ನಟನೆಯ ಬಹುನಿರೀಕ್ಷಿತ ರಾಧೆ ಸಿನಿಮಾ ತೆರೆಕಾಣುತ್ತಿದೆ.  ಈ ಚಿತ್ರಕ್ಕೆ ಸೆನ್ಸಾರ್​ ಮಂಡಳಿ U/A ಪ್ರಮಾಣಪತ್ರ ಸಿಕ್ಕಿದೆ. ವಿಶೇಷ ಎಂದರೆ, ಈ ಚಿತ್ರದ ಅವಧಿ ಕೇವಲ 114 ನಿಮಿಷ ಇರಲಿದೆಯಂತೆ.  

ಸಲ್ಮಾನ್​ ಖಾನ್​ ಸಿನಿಮಾದಲ್ಲಿ ಆ್ಯಕ್ಷನ್​ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಈ ಮೊದಲು ತೆರೆಕಂಡ ಸಲ್ಮಾನ್​ ನಟನೆಯ ಚಿತ್ರಗಳು ಎರಡೂವರೆ ಗಂಟೆಗೂ ಮೀರಿ ಇರುತ್ತಿದ್ದವು. ಆದರೆ, ಈಗ ಈ ಸಿನಿಮಾ ಕೇವಲ 114 ನಿಮಿಷ ಇರಲಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

ಪ್ರತಿ ವರ್ಷ ಈದ್​ ಹಬ್ಬಕ್ಕೆ ಸಲ್ಮಾನ್​ ಖಾನ್​ ನಟನೆಯ ಯಾವುದಾದರೊಂದು ಸಿನಿಮಾ ಬಿಡುಗಡೆ ಆಗುವುದು ವಾಡಿಕೆ. ಈ ವರ್ಷವೂ ಅದು ಮುಂದುವರಿಯಲಿದೆ. ಮೇ 13ರಂದು ಈ ಚಿತ್ರ ಓಟಿಟಿ ಮತ್ತು ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಕೊರೊನಾ ನಿಯಂತ್ರಣಕ್ಕೆ ಮಹಾರಾಷ್ಟ್ರ, ಕರ್ನಾಟಕ ಸೇರಿ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಬಂದ್​ ಮಾಡಲಾಗಿದೆ. ಹೀಗಾಗಿ, ಸಾಕಷ್ಟು ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಆದರೆ, ರಾಧೆ ಮಾತ್ರ ಈ ವಿಚಾರದಲ್ಲಿ ನಿರ್ಧಾರ ಬದಲಿಸಿಲ್ಲ. ಇತ್ತೀಚೆಗೆ ಚಿತ್ರದ ಟ್ರೇಲರ್​ ರಿಲೀಸ್​ ಆಗಿ ಭಾರೀ ಹೈಪ್​ ಸೃಷ್ಟಿ ಮಾಡಿತ್ತು.

ರಾಧೆ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭುದೇವ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಜಾಕಿ ಶ್ರಾಫ್​, ರಣದೀಪ್​ ಹೂಡಾ ಮತ್ತು ದಿಶಾ ಪಠಾಣಿ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಇದನ್ನೂ ಓದಿ: Salman Khan: ಟೈಗರ್​ ಶ್ರಾಫ್​ ಪ್ರೇಯಸಿ ದಿಶಾಗೆ ಸಲ್ಮಾನ್​ ಕಿಸ್​ ಮಾಡಿದ್ದು ನಿಜ; ಆದರೆ ಇಲ್ಲಿದೆ ಟ್ವಿಸ್ಟ್​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!