AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧೆ ನಿಮ್ಮನ್ನು ರಂಜಿಸೋದು ಕೇವಲ 114 ನಿಮಿಷ; ಇದು ಸಲ್ಮಾನ್ ನಟನೆಯ ಅತಿ ಸಣ್ಣ ಚಿತ್ರ!

ಈ ಮೊದಲು ತೆರೆಕಂಡ ಸಲ್ಮಾನ್​ ನಟನೆಯ ಚಿತ್ರಗಳು ಎರಡೂವರೆ ಗಂಟೆಗೂ ಮೀರಿ ಇರುತ್ತಿದ್ದವು. ಆದರೆ, ಈಗ ಈ ಸಿನಿಮಾ ಕೇವಲ 114 ನಿಮಿಷ ಇರಲಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

ರಾಧೆ ನಿಮ್ಮನ್ನು ರಂಜಿಸೋದು ಕೇವಲ 114 ನಿಮಿಷ; ಇದು ಸಲ್ಮಾನ್ ನಟನೆಯ ಅತಿ ಸಣ್ಣ ಚಿತ್ರ!
ಸಲ್ಮಾನ್​ ಖಾನ್​
ರಾಜೇಶ್ ದುಗ್ಗುಮನೆ
|

Updated on: May 03, 2021 | 8:41 PM

Share

ಕೊರೊನಾ ವೈರಸ್​ ಎರಡನೆ ಅಲೆ ಮಿತಿಮೀರಿ ಹರಡುತ್ತಿರುವುದರಿಂದ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರಗಳನ್ನು ಮುಚ್ಚುವ ಆದೇಶ ಹೊರಡಿಸಲಾಗಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ಇದರ ಮಧ್ಯೆಯೂ ಸಲ್ಮಾನ್​ ಖಾನ್​ ನಟನೆಯ ಬಹುನಿರೀಕ್ಷಿತ ರಾಧೆ ಸಿನಿಮಾ ತೆರೆಕಾಣುತ್ತಿದೆ.  ಈ ಚಿತ್ರಕ್ಕೆ ಸೆನ್ಸಾರ್​ ಮಂಡಳಿ U/A ಪ್ರಮಾಣಪತ್ರ ಸಿಕ್ಕಿದೆ. ವಿಶೇಷ ಎಂದರೆ, ಈ ಚಿತ್ರದ ಅವಧಿ ಕೇವಲ 114 ನಿಮಿಷ ಇರಲಿದೆಯಂತೆ.  

ಸಲ್ಮಾನ್​ ಖಾನ್​ ಸಿನಿಮಾದಲ್ಲಿ ಆ್ಯಕ್ಷನ್​ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಈ ಮೊದಲು ತೆರೆಕಂಡ ಸಲ್ಮಾನ್​ ನಟನೆಯ ಚಿತ್ರಗಳು ಎರಡೂವರೆ ಗಂಟೆಗೂ ಮೀರಿ ಇರುತ್ತಿದ್ದವು. ಆದರೆ, ಈಗ ಈ ಸಿನಿಮಾ ಕೇವಲ 114 ನಿಮಿಷ ಇರಲಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

ಪ್ರತಿ ವರ್ಷ ಈದ್​ ಹಬ್ಬಕ್ಕೆ ಸಲ್ಮಾನ್​ ಖಾನ್​ ನಟನೆಯ ಯಾವುದಾದರೊಂದು ಸಿನಿಮಾ ಬಿಡುಗಡೆ ಆಗುವುದು ವಾಡಿಕೆ. ಈ ವರ್ಷವೂ ಅದು ಮುಂದುವರಿಯಲಿದೆ. ಮೇ 13ರಂದು ಈ ಚಿತ್ರ ಓಟಿಟಿ ಮತ್ತು ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಕೊರೊನಾ ನಿಯಂತ್ರಣಕ್ಕೆ ಮಹಾರಾಷ್ಟ್ರ, ಕರ್ನಾಟಕ ಸೇರಿ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಬಂದ್​ ಮಾಡಲಾಗಿದೆ. ಹೀಗಾಗಿ, ಸಾಕಷ್ಟು ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಆದರೆ, ರಾಧೆ ಮಾತ್ರ ಈ ವಿಚಾರದಲ್ಲಿ ನಿರ್ಧಾರ ಬದಲಿಸಿಲ್ಲ. ಇತ್ತೀಚೆಗೆ ಚಿತ್ರದ ಟ್ರೇಲರ್​ ರಿಲೀಸ್​ ಆಗಿ ಭಾರೀ ಹೈಪ್​ ಸೃಷ್ಟಿ ಮಾಡಿತ್ತು.

ರಾಧೆ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭುದೇವ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಜಾಕಿ ಶ್ರಾಫ್​, ರಣದೀಪ್​ ಹೂಡಾ ಮತ್ತು ದಿಶಾ ಪಠಾಣಿ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಇದನ್ನೂ ಓದಿ: Salman Khan: ಟೈಗರ್​ ಶ್ರಾಫ್​ ಪ್ರೇಯಸಿ ದಿಶಾಗೆ ಸಲ್ಮಾನ್​ ಕಿಸ್​ ಮಾಡಿದ್ದು ನಿಜ; ಆದರೆ ಇಲ್ಲಿದೆ ಟ್ವಿಸ್ಟ್​

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!