AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಏರಿಕೆ ಮಧ್ಯೆಯೂ ರಿಲೀಸ್​ ಆಗ್ತಿದೆ ಸಲ್ಮಾನ್​ ಖಾನ್​ ರಾಧೆ; ಆದರೆ ಇಲ್ಲಿದೆ ಟ್ವಿಸ್ಟ್​

ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಕ್ಲೋಸ್​ ಆಗಿರುವುದನ್ನು ಗಮನಿಸಿರುವ ಚಿತ್ರತಂಡ ರಾಧೆ ಸಿನಿಮಾವನ್ನು ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್​ ಮಾಡುತ್ತಿದೆ.

ಕೊರೊನಾ ಏರಿಕೆ ಮಧ್ಯೆಯೂ ರಿಲೀಸ್​ ಆಗ್ತಿದೆ ಸಲ್ಮಾನ್​ ಖಾನ್​ ರಾಧೆ; ಆದರೆ ಇಲ್ಲಿದೆ ಟ್ವಿಸ್ಟ್​
ಸಲ್ಮಾನ್​ ಖಾನ್
ರಾಜೇಶ್ ದುಗ್ಗುಮನೆ
|

Updated on: Apr 21, 2021 | 7:12 PM

Share

ಕೊರೊನಾ ವೈರಸ್​ ಎರಡನೆ ಅಲೆ ಮಿತಿಮೀರಿ ಹರಡುತ್ತಿರುವುದರಿಂದ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರಗಳನ್ನು ಮುಚ್ಚುವ ಆದೇಶ ಹೊರಡಿಸಲಾಗಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ಈ ಕಾರಣಕ್ಕೆ ಅನೇಕ ಸಿನಿಮಾ ತಂಡಗಳು ರಿಲೀಸ್​ ದಿನಾಂಕವನ್ನು ಮುಂದೂಡಿವೆ. ಆದರೆ, ಸಲ್ಮಾನ್​ ಖಾನ್​ ನಟನೆಯ ಬಹುನಿರೀಕ್ಷಿತ ರಾಧೆ ಸಿನಿಮಾ ಈ ಮೊದಲು ನಿಗದಿ ಮಾಡಿದಂತೆ ಈದ್​ ಪ್ರಯುಕ್ತ ಮೇ 13ರಂದು ತೆರೆಕಾಣುತ್ತಿದೆ. ವಿಶೇಷ ಎಂದರೆ, ಚಿತ್ರಮಂದಿರದ ಜತೆಗೆ ಜೀಪ್ಲೆಕ್ಸ್​ನಲ್ಲೂ ಮೇ 13ರಂದೇ ಸಿನಿಮಾ ರಿಲೀಸ್​ ಆಗುತ್ತಿದೆ.

ಕೊರೊನಾ ನಿಯಂತ್ರಣಕ್ಕೆ ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಬಂದ್​ ಮಾಡಲಾಗಿದೆ. ಹೀಗಾಗಿ, ಸಾಕಷ್ಟು ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಅದೇ ರೀತಿ ರಾಧೆ ಸಿನಿಮಾ ಕೂಡ ತೆರೆಕಾಣೋದು ವಿಳಂಬವಾಗಲಿದೆ ಎನ್ನಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಸಲ್ಮಾನ್​ ಖಾನ್​ ಸಿನಿಮಾ ಈ ಮೊದಲು ನಿಗದಿ ಮಾಡಿದ ದಿನಾಂಕದಂದೇ ತೆರೆಗೆ ಬರುತ್ತಿದೆ.

ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಕ್ಲೋಸ್​ ಆಗಿರುವುದನ್ನು ಗಮನಿಸಿರುವ ಚಿತ್ರತಂಡ ರಾಧೆ ಸಿನಿಮಾವನ್ನು ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್​ ಮಾಡುತ್ತಿದೆ. ಇದು ಸಲ್ಮಾನ್​ ಖಾನ್​ ಅಭಿಮಾನಿಗಳಿಗೆ ಖುಷಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಚಿತ್ರತಂಡ, ಸಲ್ಮಾನ್​ ಖಾನ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಆದರೆ, ಕೆಲ ರಾಜ್ಯಗಳಲ್ಲಿ ಚಿತ್ರಮಂದಿರ ತೆರೆದಿಲ್ಲ. ಹೀಗಾಗಿ, ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿದೆ.

ರಾಧೆ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭುದೇವ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಜಾಕಿ ಶ್ರಾಫ್​, ರಣದೀಪ್​ ಹೂಡಾ ಮತ್ತು ದಿಶಾ ಪಠಾಣಿ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಸಿನಿಮಾದ ಟ್ರೇಲರ್​ ಏಪ್ರಿಲ್​ 22ಕ್ಕೆ ತೆರೆ ಕಾಣುತ್ತಿದೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ