AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಏರಿಕೆ ಮಧ್ಯೆಯೂ ರಿಲೀಸ್​ ಆಗ್ತಿದೆ ಸಲ್ಮಾನ್​ ಖಾನ್​ ರಾಧೆ; ಆದರೆ ಇಲ್ಲಿದೆ ಟ್ವಿಸ್ಟ್​

ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಕ್ಲೋಸ್​ ಆಗಿರುವುದನ್ನು ಗಮನಿಸಿರುವ ಚಿತ್ರತಂಡ ರಾಧೆ ಸಿನಿಮಾವನ್ನು ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್​ ಮಾಡುತ್ತಿದೆ.

ಕೊರೊನಾ ಏರಿಕೆ ಮಧ್ಯೆಯೂ ರಿಲೀಸ್​ ಆಗ್ತಿದೆ ಸಲ್ಮಾನ್​ ಖಾನ್​ ರಾಧೆ; ಆದರೆ ಇಲ್ಲಿದೆ ಟ್ವಿಸ್ಟ್​
ಸಲ್ಮಾನ್​ ಖಾನ್
ರಾಜೇಶ್ ದುಗ್ಗುಮನೆ
|

Updated on: Apr 21, 2021 | 7:12 PM

Share

ಕೊರೊನಾ ವೈರಸ್​ ಎರಡನೆ ಅಲೆ ಮಿತಿಮೀರಿ ಹರಡುತ್ತಿರುವುದರಿಂದ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರಗಳನ್ನು ಮುಚ್ಚುವ ಆದೇಶ ಹೊರಡಿಸಲಾಗಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ಈ ಕಾರಣಕ್ಕೆ ಅನೇಕ ಸಿನಿಮಾ ತಂಡಗಳು ರಿಲೀಸ್​ ದಿನಾಂಕವನ್ನು ಮುಂದೂಡಿವೆ. ಆದರೆ, ಸಲ್ಮಾನ್​ ಖಾನ್​ ನಟನೆಯ ಬಹುನಿರೀಕ್ಷಿತ ರಾಧೆ ಸಿನಿಮಾ ಈ ಮೊದಲು ನಿಗದಿ ಮಾಡಿದಂತೆ ಈದ್​ ಪ್ರಯುಕ್ತ ಮೇ 13ರಂದು ತೆರೆಕಾಣುತ್ತಿದೆ. ವಿಶೇಷ ಎಂದರೆ, ಚಿತ್ರಮಂದಿರದ ಜತೆಗೆ ಜೀಪ್ಲೆಕ್ಸ್​ನಲ್ಲೂ ಮೇ 13ರಂದೇ ಸಿನಿಮಾ ರಿಲೀಸ್​ ಆಗುತ್ತಿದೆ.

ಕೊರೊನಾ ನಿಯಂತ್ರಣಕ್ಕೆ ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಬಂದ್​ ಮಾಡಲಾಗಿದೆ. ಹೀಗಾಗಿ, ಸಾಕಷ್ಟು ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಅದೇ ರೀತಿ ರಾಧೆ ಸಿನಿಮಾ ಕೂಡ ತೆರೆಕಾಣೋದು ವಿಳಂಬವಾಗಲಿದೆ ಎನ್ನಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಸಲ್ಮಾನ್​ ಖಾನ್​ ಸಿನಿಮಾ ಈ ಮೊದಲು ನಿಗದಿ ಮಾಡಿದ ದಿನಾಂಕದಂದೇ ತೆರೆಗೆ ಬರುತ್ತಿದೆ.

ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಕ್ಲೋಸ್​ ಆಗಿರುವುದನ್ನು ಗಮನಿಸಿರುವ ಚಿತ್ರತಂಡ ರಾಧೆ ಸಿನಿಮಾವನ್ನು ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್​ ಮಾಡುತ್ತಿದೆ. ಇದು ಸಲ್ಮಾನ್​ ಖಾನ್​ ಅಭಿಮಾನಿಗಳಿಗೆ ಖುಷಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಚಿತ್ರತಂಡ, ಸಲ್ಮಾನ್​ ಖಾನ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಆದರೆ, ಕೆಲ ರಾಜ್ಯಗಳಲ್ಲಿ ಚಿತ್ರಮಂದಿರ ತೆರೆದಿಲ್ಲ. ಹೀಗಾಗಿ, ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿದೆ.

ರಾಧೆ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭುದೇವ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಜಾಕಿ ಶ್ರಾಫ್​, ರಣದೀಪ್​ ಹೂಡಾ ಮತ್ತು ದಿಶಾ ಪಠಾಣಿ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಸಿನಿಮಾದ ಟ್ರೇಲರ್​ ಏಪ್ರಿಲ್​ 22ಕ್ಕೆ ತೆರೆ ಕಾಣುತ್ತಿದೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ