ಕೊರೊನಾ ಏರಿಕೆ ಮಧ್ಯೆಯೂ ರಿಲೀಸ್​ ಆಗ್ತಿದೆ ಸಲ್ಮಾನ್​ ಖಾನ್​ ರಾಧೆ; ಆದರೆ ಇಲ್ಲಿದೆ ಟ್ವಿಸ್ಟ್​

ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಕ್ಲೋಸ್​ ಆಗಿರುವುದನ್ನು ಗಮನಿಸಿರುವ ಚಿತ್ರತಂಡ ರಾಧೆ ಸಿನಿಮಾವನ್ನು ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್​ ಮಾಡುತ್ತಿದೆ.

ಕೊರೊನಾ ಏರಿಕೆ ಮಧ್ಯೆಯೂ ರಿಲೀಸ್​ ಆಗ್ತಿದೆ ಸಲ್ಮಾನ್​ ಖಾನ್​ ರಾಧೆ; ಆದರೆ ಇಲ್ಲಿದೆ ಟ್ವಿಸ್ಟ್​
ಸಲ್ಮಾನ್​ ಖಾನ್
Follow us
|

Updated on: Apr 21, 2021 | 7:12 PM

ಕೊರೊನಾ ವೈರಸ್​ ಎರಡನೆ ಅಲೆ ಮಿತಿಮೀರಿ ಹರಡುತ್ತಿರುವುದರಿಂದ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರಗಳನ್ನು ಮುಚ್ಚುವ ಆದೇಶ ಹೊರಡಿಸಲಾಗಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ಈ ಕಾರಣಕ್ಕೆ ಅನೇಕ ಸಿನಿಮಾ ತಂಡಗಳು ರಿಲೀಸ್​ ದಿನಾಂಕವನ್ನು ಮುಂದೂಡಿವೆ. ಆದರೆ, ಸಲ್ಮಾನ್​ ಖಾನ್​ ನಟನೆಯ ಬಹುನಿರೀಕ್ಷಿತ ರಾಧೆ ಸಿನಿಮಾ ಈ ಮೊದಲು ನಿಗದಿ ಮಾಡಿದಂತೆ ಈದ್​ ಪ್ರಯುಕ್ತ ಮೇ 13ರಂದು ತೆರೆಕಾಣುತ್ತಿದೆ. ವಿಶೇಷ ಎಂದರೆ, ಚಿತ್ರಮಂದಿರದ ಜತೆಗೆ ಜೀಪ್ಲೆಕ್ಸ್​ನಲ್ಲೂ ಮೇ 13ರಂದೇ ಸಿನಿಮಾ ರಿಲೀಸ್​ ಆಗುತ್ತಿದೆ.

ಕೊರೊನಾ ನಿಯಂತ್ರಣಕ್ಕೆ ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಬಂದ್​ ಮಾಡಲಾಗಿದೆ. ಹೀಗಾಗಿ, ಸಾಕಷ್ಟು ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಅದೇ ರೀತಿ ರಾಧೆ ಸಿನಿಮಾ ಕೂಡ ತೆರೆಕಾಣೋದು ವಿಳಂಬವಾಗಲಿದೆ ಎನ್ನಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಸಲ್ಮಾನ್​ ಖಾನ್​ ಸಿನಿಮಾ ಈ ಮೊದಲು ನಿಗದಿ ಮಾಡಿದ ದಿನಾಂಕದಂದೇ ತೆರೆಗೆ ಬರುತ್ತಿದೆ.

ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಕ್ಲೋಸ್​ ಆಗಿರುವುದನ್ನು ಗಮನಿಸಿರುವ ಚಿತ್ರತಂಡ ರಾಧೆ ಸಿನಿಮಾವನ್ನು ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್​ ಮಾಡುತ್ತಿದೆ. ಇದು ಸಲ್ಮಾನ್​ ಖಾನ್​ ಅಭಿಮಾನಿಗಳಿಗೆ ಖುಷಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಚಿತ್ರತಂಡ, ಸಲ್ಮಾನ್​ ಖಾನ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಆದರೆ, ಕೆಲ ರಾಜ್ಯಗಳಲ್ಲಿ ಚಿತ್ರಮಂದಿರ ತೆರೆದಿಲ್ಲ. ಹೀಗಾಗಿ, ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿದೆ.

ರಾಧೆ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭುದೇವ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಜಾಕಿ ಶ್ರಾಫ್​, ರಣದೀಪ್​ ಹೂಡಾ ಮತ್ತು ದಿಶಾ ಪಠಾಣಿ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಸಿನಿಮಾದ ಟ್ರೇಲರ್​ ಏಪ್ರಿಲ್​ 22ಕ್ಕೆ ತೆರೆ ಕಾಣುತ್ತಿದೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?