AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಏರಿಕೆ ಮಧ್ಯೆಯೂ ರಿಲೀಸ್​ ಆಗ್ತಿದೆ ಸಲ್ಮಾನ್​ ಖಾನ್​ ರಾಧೆ; ಆದರೆ ಇಲ್ಲಿದೆ ಟ್ವಿಸ್ಟ್​

ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಕ್ಲೋಸ್​ ಆಗಿರುವುದನ್ನು ಗಮನಿಸಿರುವ ಚಿತ್ರತಂಡ ರಾಧೆ ಸಿನಿಮಾವನ್ನು ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್​ ಮಾಡುತ್ತಿದೆ.

ಕೊರೊನಾ ಏರಿಕೆ ಮಧ್ಯೆಯೂ ರಿಲೀಸ್​ ಆಗ್ತಿದೆ ಸಲ್ಮಾನ್​ ಖಾನ್​ ರಾಧೆ; ಆದರೆ ಇಲ್ಲಿದೆ ಟ್ವಿಸ್ಟ್​
ಸಲ್ಮಾನ್​ ಖಾನ್
ರಾಜೇಶ್ ದುಗ್ಗುಮನೆ
|

Updated on: Apr 21, 2021 | 7:12 PM

Share

ಕೊರೊನಾ ವೈರಸ್​ ಎರಡನೆ ಅಲೆ ಮಿತಿಮೀರಿ ಹರಡುತ್ತಿರುವುದರಿಂದ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರಗಳನ್ನು ಮುಚ್ಚುವ ಆದೇಶ ಹೊರಡಿಸಲಾಗಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ಈ ಕಾರಣಕ್ಕೆ ಅನೇಕ ಸಿನಿಮಾ ತಂಡಗಳು ರಿಲೀಸ್​ ದಿನಾಂಕವನ್ನು ಮುಂದೂಡಿವೆ. ಆದರೆ, ಸಲ್ಮಾನ್​ ಖಾನ್​ ನಟನೆಯ ಬಹುನಿರೀಕ್ಷಿತ ರಾಧೆ ಸಿನಿಮಾ ಈ ಮೊದಲು ನಿಗದಿ ಮಾಡಿದಂತೆ ಈದ್​ ಪ್ರಯುಕ್ತ ಮೇ 13ರಂದು ತೆರೆಕಾಣುತ್ತಿದೆ. ವಿಶೇಷ ಎಂದರೆ, ಚಿತ್ರಮಂದಿರದ ಜತೆಗೆ ಜೀಪ್ಲೆಕ್ಸ್​ನಲ್ಲೂ ಮೇ 13ರಂದೇ ಸಿನಿಮಾ ರಿಲೀಸ್​ ಆಗುತ್ತಿದೆ.

ಕೊರೊನಾ ನಿಯಂತ್ರಣಕ್ಕೆ ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಬಂದ್​ ಮಾಡಲಾಗಿದೆ. ಹೀಗಾಗಿ, ಸಾಕಷ್ಟು ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಅದೇ ರೀತಿ ರಾಧೆ ಸಿನಿಮಾ ಕೂಡ ತೆರೆಕಾಣೋದು ವಿಳಂಬವಾಗಲಿದೆ ಎನ್ನಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಸಲ್ಮಾನ್​ ಖಾನ್​ ಸಿನಿಮಾ ಈ ಮೊದಲು ನಿಗದಿ ಮಾಡಿದ ದಿನಾಂಕದಂದೇ ತೆರೆಗೆ ಬರುತ್ತಿದೆ.

ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರ ಕ್ಲೋಸ್​ ಆಗಿರುವುದನ್ನು ಗಮನಿಸಿರುವ ಚಿತ್ರತಂಡ ರಾಧೆ ಸಿನಿಮಾವನ್ನು ಒಟಿಟಿ ಹಾಗೂ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್​ ಮಾಡುತ್ತಿದೆ. ಇದು ಸಲ್ಮಾನ್​ ಖಾನ್​ ಅಭಿಮಾನಿಗಳಿಗೆ ಖುಷಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಚಿತ್ರತಂಡ, ಸಲ್ಮಾನ್​ ಖಾನ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಆದರೆ, ಕೆಲ ರಾಜ್ಯಗಳಲ್ಲಿ ಚಿತ್ರಮಂದಿರ ತೆರೆದಿಲ್ಲ. ಹೀಗಾಗಿ, ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿದೆ.

ರಾಧೆ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭುದೇವ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಜಾಕಿ ಶ್ರಾಫ್​, ರಣದೀಪ್​ ಹೂಡಾ ಮತ್ತು ದಿಶಾ ಪಠಾಣಿ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಸಿನಿಮಾದ ಟ್ರೇಲರ್​ ಏಪ್ರಿಲ್​ 22ಕ್ಕೆ ತೆರೆ ಕಾಣುತ್ತಿದೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!