AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ನೆಲಕಚ್ಚಿದ ರಾಧೆ; ಸಲ್ಮಾನ್​ ವೃತ್ತಿಜೀವನದಲ್ಲೇ ಅತ್ಯಂತ ಕಳಪೆ ಸಿನಿಮಾ

ಸಿನಿಮಾ ನೋಡಿದ ಅನೇಕ ಮಂದಿ ರಾಧೆ ಸಿನಿಮಾವನ್ನು ಟ್ರೋಲ್​ ಮಾಡುತ್ತಿದ್ದಾರೆ. ಇದು ನಾನು ನೋಡಿದ ಅತ್ಯಂತ ಕೆಟ್ಟ ಸಿನಿಮಾಗಳಲ್ಲಿ ಒಂದು ಎಂದು ಬಣ್ಣಿಸಿದ್ದಾರೆ.

Salman Khan: ನೆಲಕಚ್ಚಿದ ರಾಧೆ; ಸಲ್ಮಾನ್​ ವೃತ್ತಿಜೀವನದಲ್ಲೇ ಅತ್ಯಂತ ಕಳಪೆ ಸಿನಿಮಾ
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: May 14, 2021 | 7:56 PM

Share

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಮೊದಲ ದಿನ ಸಿನಿಮಾ ನೋಡೋಕೆ ಸಿನಿಪ್ರಿಯರು ಮುಗಿಬಿದ್ದಿದ್ದರಿಂದ ಜೀ5 ಸರ್ವರ್​​ ಕ್ರ್ಯಾಶ್​ ಆಗಿತ್ತು. ಆದರೆ, ಇದೆಲ್ಲವೂ ಕೇವಲ ಅಭಿಮಾನಿಗಳ ಬಲದಿಂದ ಆಗಿದ್ದು ಎಂಬುದು ಸ್ಪಷ್ಟವಾಗಿದೆ. ರಾಧೆ ಕೇವಲ ಸೋತಿದ್ದು ಮಾತ್ರವಲ್ಲ ಸಲ್ಮಾನ್​ ಖಾನ್​ ಕೆರಿಯರ್​ನಲ್ಲೇ ಅತ್ಯಂತ ಕಳಪೆ ಸಿನಿಮಾ ಎನ್ನುವ ಹಣೆಪಟ್ಟಿ ಕೂಡ ಹೊತ್ತಿದೆ.

ಕೊರೊನಾ ವೈರಸ್​ನಿಂದಾಗಿ ದೇಶದ ಸಾಕಷ್ಟು ರಾಜ್ಯಗಳಲ್ಲಿ ಲಾಕ್​ಡೌನ್​ ಹೇರಲಾಗಿದೆ. ಹೀಗಾಗಿ, ರಾಧೆ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡಲಿದೆ ಎನ್ನಲಾಗಿತ್ತು. ಆದರೆ, ರಾಧೆ ತಂಡ ಈದ್​ ಹಬ್ಬದಂದೆ (ಮೇ 13) ಚಿತ್ರವನ್ನು ಥಿಯೇಟರ್​ ಹಾಗೂ ಒಟಿಟಿಯಲ್ಲಿ ಒಟ್ಟಿಗೇ ರಿಲೀಸ್​ ಮಾಡಿತ್ತು. ದೇಶದಲ್ಲಿ ಬಹುತೇಕ ಚಿತ್ರಮಂದಿರಗಳು ಕ್ಲೋಸ್​ ಇರುವುದರಿಂದ ಸಿನಿಮಾ ಕಲೆಕ್ಷನ್​ ಮಾಡಿಲ್ಲ. ಇನ್ನು, ಸಿನಿಮಾ ರಿಲೀಸ್​ ಆದ ದಿನವೇ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿಲ್ಲ.

ಐಎಂಡಿಬಿ ರಾಧೆ ಚಿತ್ರಕ್ಕೆ 10 ಅಂಕಕ್ಕೆ ಕೇವಲ 2.4 ರೇಟಿಂಗ್​ ನೀಡಿದೆ. ಇದರ ಜತೆಗೆ ಚಿತ್ರಮಂದಿರಗಳಿಂದ ಸಿನಿಮಾಗೆ ಕಲೆಕ್ಷನ್​ ಕೂಡ ಇಲ್ಲ. ಇದರಿಂದ ಸಲ್ಮಾನ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಸಿನಿಮಾಗಳ ಸಾಲಿನಲ್ಲಿ ರಾಧೆ ಕೂಡ ನಿಂತಿದೆ. ರೇಸ್​ 3 ಚಿತ್ರಕ್ಕೆ ಐಎಂಡಿಬಿ 1.9 ರೇಟಿಂಗ್​ ನೀಡಿತ್ತು. ಇದು ಸಲ್ಲು ವೃತ್ತಿ ಜೀವನದ ಅತ್ಯಂತ ಕಳಪೆ ಚಿತ್ರವಾಗಿತ್ತು. ಈಗ ಈ ಸಾಲಿಗೆ ರಾಧೆ ಕೂಡ ಸೇರ್ಪಡೆ ಆಗಿದೆ.

ಇನ್ನು, ಸಿನಿಮಾ ನೋಡಿದ ಅನೇಕ ಮಂದಿ ರಾಧೆ ಸಿನಿಮಾವನ್ನು ಟ್ರೋಲ್​ ಮಾಡುತ್ತಿದ್ದಾರೆ. ಇದು ನಾನು ನೋಡಿದ ಅತ್ಯಂತ ಕೆಟ್ಟ ಸಿನಿಮಾಗಳಲ್ಲಿ ಒಂದು ಎಂದು ಬಣ್ಣಿಸಿದ್ದಾರೆ. ಇದರಿಂದ ಸಲ್ಮಾನ್​ ವೃತ್ತಿ ಜೀವನದಲ್ಲಿ ಮತ್ತೊಂದು ಚಿತ್ರ ನೆಲಕಚ್ಚಿದಂತಾಗಿದೆ.

2017ರಲ್ಲಿ ತೆರೆಕಂಡಿದ್ದ ‘ಟೈಗರ್ ಜಿಂದಾ ಹೇ’ ಚಿತ್ರವೇ ಕೊನೆ. ಅದಾದ ನಂತರದಲ್ಲಿ ಸಲ್ಲುಗೆ ಅಂಥ ಯಶಸ್ಸು ಸಿಕ್ಕಿಲ್ಲ. ‘ರೇಸ್​-3’, ‘ಭಾರತ್’​, ‘ದಬಾಂಗ್​ 3’ ಚಿತ್ರಗಳು ಸೋಲು ಕಂಡಿದ್ದವು. ಈ ಸಾಲಿಗೆ ಈಗ ರಾಧೆ ಸಿನಿಮಾ ಕೂಡ ಸೇರಿಕೊಂಡಿದೆ.

ಇದನ್ನೂ ಓದಿ: Radhe Movie: ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಲೀಕ್​ ಆಯ್ತು ರಾಧೆ ಸಿನಿಮಾ; ಸಲ್ಲು ಅಭಿಮಾನಿಗಳಿಗೆ ಬೇಸರ

Radhe Movie Review: ‘ರಾಧೆ’ ನೋಡಿ ಏನು ಹೇಳಿದ್ರು ಸಲ್ಮಾನ್​ ಖಾನ್​ ಫ್ಯಾನ್ಸ್​? ಇಲ್ಲಿದೆ ಟ್ವಿಟರ್​ ವಿಮರ್ಶೆ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!