‘ಶೋಲೆ’ ಚಿತ್ರವನ್ನು ರಿಮೇಕ್ ಮಾಡುವ ಆಸೆ ವ್ಯಕ್ತಪಡಿಸಿದ ಸಲ್ಮಾನ್ ಖಾನ್

ಸಲಿಮ್ ಖಾನ್ ಹಾಗೂ ಜಾವೇದ್ ಅಖ್ತರ್ ಅವರ ಜೀವನ ಆಧರಿಸಿ ಡ್ಯಾಕ್ಯುಮೆಂಟರಿ ಸೀರಿಸ್ ರಿಲೀಸ್ ಮಾಡಲಾಗಿದೆ. ಇಬ್ಬರೂ ಸೇರಿ ‘ಶೋಲೆ’ ಸಿನಿಮಾಗೆ ಚಿತ್ರಕಥೆ ಬರೆದಿದ್ದರು. ಈ ಚಿತ್ರವನ್ನು ಸಲ್ಮಾನ್ ಖಾನ್ ಅವರು ರಿಮೇಕ್ ಮಾಡಲು ಸಲ್ಮಾನ್ ಖಾನ್ ಮುಂದಾಗಿದ್ದಾರೆ ಎನ್ನಲಾಗಿದೆ.

‘ಶೋಲೆ’ ಚಿತ್ರವನ್ನು ರಿಮೇಕ್ ಮಾಡುವ ಆಸೆ ವ್ಯಕ್ತಪಡಿಸಿದ ಸಲ್ಮಾನ್ ಖಾನ್
ಸಲ್ಮಾನ್ ಖಾನ್
Follow us
|

Updated on: Aug 23, 2024 | 8:43 AM

ಅಮಿತಾಭ್ ಬಚ್ಚನ್ ನಟನೆಯ ‘ಶೋಲೆ’ ಸಿನಿಮಾ ರಿಲೀಸ್ ಆಗಿ 50 ವರ್ಷಗಳು ಕಳೆಯುತ್ತಾ ಬಂದಿವೆ. 1975ರ ಆಗಸ್ಟ್ 15ರಂದು ರಿಲೀಸ್ ಆದ ಈ ಚಿತ್ರ ಹಲವು ವರ್ಷ ಯಶಸ್ವಿ ಪ್ರದರ್ಶನ ಕಂಡಿತು. ಈ ಸಿನಿಮಾದಲ್ಲಿ ಅಮಿತಾಭ್ ಅವರ ಪಾತ್ರ ಗಮನ ಸೆಳೆಯಿತು. ಈ ಸಿನಿಮಾನ ರಿಮೇಕ್ ಮಾಡುವ ಆಸೆಯನ್ನು ಸಲ್ಮಾನ್ ಖಾನ್ ವ್ಯಕ್ತಪಡಿಸಿದ್ದಾರೆ.

ಸಲಿಮ್ ಖಾನ್ ಹಾಗೂ ಜಾವೇದ್ ಅಖ್ತರ್ ಅವರ ಜೀವನ ಆಧರಿಸಿ ಡ್ಯಾಕ್ಯುಮೆಂಟರಿ ಸೀರಿಸ್ ರಿಲೀಸ್ ಮಾಡಲಾಗಿದೆ. ಇಬ್ಬರೂ ಸೇರಿ ‘ಶೋಲೆ’ ಸಿನಿಮಾಗೆ ಚಿತ್ರಕಥೆ ಬರೆದಿದ್ದರು. ಈ ಚಿತ್ರವನ್ನು ರಮೇಶ್ ಸಿಪ್ಪಿ ನಿರ್ದೇಶನ ಮಾಡಿದ್ದರು. ಅಮಿತಾಭ್ ಬಚ್ಚನ್, ಧರ್ಮೇಂದ್ರ, ಸಂಜೀವ್ ಕುಮಾರ್, ಜಯಾ ಬಚ್ಚನ್, ಹೇಮಾ ಮಾಲಿನಿ ಮೊದಲಾದವರು ನಟಿಸಿದ್ದರು. ಈ ಚಿತ್ರದ ರಿಮೇಕ್ ಬಗ್ಗೆ ಸಲ್ಲು ಮಾತನಾಡಿದ್ದಾರೆ.

ನಿರ್ದೇಶಕ ಫರಾ ಖಾನ್ ಜೊತೆ ಸಲ್ಮಾನ್ ಖಾನ್ ಮಾತುಕತೆ ನಡೆಸಿದ್ದಾರೆ. ‘ಸಲಿಮ್-ಜಾವೇದ್ ಅವರ ಯಾವ ಚಿತ್ರವನ್ನು ರಿಮೇಕ್ ಮಾಡಬೇಕು ಎಂದು ನಿಮಗೆ ಅನಿಸುತ್ತಿದೆ’ ಎಂದು ಫರಾ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಸಲ್ಲು, ‘ನಾನು ಶೋಲೆ ಹಾಗೂ ದೀವಾರ್ ಚಿತ್ರವನ್ನು ರಿಮೇಕ್ ಮಾಡುತ್ತೇನೆ. ಶೋಲೆ ಸಿನಿಮಾದಲ್ಲಿ ಬರೋ ವಿರೂ, ಜೈ ಹಾಗೂ ಗಬ್ಬರ್ ಸಿಂಗ್ ಪಾತ್ರವನ್ನು ಮಾಡಬೇಕು ಎನ್ನುವ ಆಸೆ ನನ್ನದು’ ಎಂದಿದ್ದಾರೆ ಸಲ್ಮಾನ್ ಖಾನ್.

ಇದನ್ನೂ ಓದಿ: ಕೊನೆಗೂ ಒಳ್ಳೆ ನಿರ್ದೇಶಕರ ಜೊತೆ ಕೈ ಜೋಡಿಸಿದ ಸಲ್ಮಾನ್ ಖಾನ್

ಮೊದಲು ಗಬ್ಬರ್ ಸಿಂಗ್ ಪಾತ್ರವನ್ನು ಡ್ಯಾನಿ ಅವರು ಮಾಡಬೇಕಿತ್ತಂತೆ. ಆ ಬಳಿಕ ಅಮ್ಜದ್ ಖಾನ್ ಅವರನ್ನು ತರಲಾಯಿತು. ಈ ಪಾತ್ರವನ್ನು ಮಾಡೋದಕ್ಕೆ ಅನೇಕ ಕಲಾವಿದರು ಅವಕಾಶ ಕೇಳಿದ್ದರಂತೆ. ‘ಶೋಲೆ’ ಸಿನಿಮಾ 1975ರ ಆಗಸ್ಟ್ 15ರಂದು ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಇದು ಅತ್ಯಂತ ಯಶಸ್ವಿ ಸಿನಿಮಾಗಳಲ್ಲಿ ಒಂದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?