AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರೆಮೇಲೆ ಒಂದಾಗುತ್ತಿದ್ದಾರೆ ಗಂಡ-ಹೆಂಡತಿ; ಶೀಘ್ರವೇ ಸೆಟ್ಟೇರಲಿದೆ ನಾಗಚೈತನ್ಯ-ಸಮಂತಾ ಸಿನಿಮಾ?

‘ಬಂಗಾರ್​ ರಾಜು’ ಸಿನಿಮಾದಲ್ಲಿ ಸಮಂತಾ ಮತ್ತು ನಾಗ ಚೈತನ್ಯ ಒಟ್ಟಾಗಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಇಬ್ಬರೂ ಕತೆ ಕೇಳಿದ್ದು, ಸಿನಿಮಾ ಇಷ್ಟಪಟ್ಟಿದ್ದಾರೆ.

ತೆರೆಮೇಲೆ ಒಂದಾಗುತ್ತಿದ್ದಾರೆ ಗಂಡ-ಹೆಂಡತಿ; ಶೀಘ್ರವೇ ಸೆಟ್ಟೇರಲಿದೆ ನಾಗಚೈತನ್ಯ-ಸಮಂತಾ ಸಿನಿಮಾ?
ನಾಗ ಚೈತ್ರನ್ಯ - ಸಮಂತಾ
ರಾಜೇಶ್ ದುಗ್ಗುಮನೆ
| Edited By: |

Updated on: May 21, 2021 | 5:05 PM

Share

ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ನಿಜ ಜೀವನದಲ್ಲಿ ಪತಿ-ಪತ್ನಿಯರು. ಇವರು ಮದುವೆ ಆಗುವುದಕ್ಕೂ ಮೊದಲು ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಅವರ ನಡುವೆ ಪ್ರೀತಿ ಹುಟ್ಟಿಕೊಂಡಿದ್ದು ಶೂಟಿಂಗ್​ ಸೆಟ್​ನಲ್ಲೇ ಅನ್ನೋದು ವಿಶೇಷ. ಮದುವೆ ನಂತರದಲ್ಲಿ ಈ ಜೋಡಿ ‘ಮಜಿಲಿ’ ಸಿನಿಮಾದಲ್ಲಿ ಒಟ್ಟಾಗಿ ಕಾಣಿಸಿಕೊಂಡಿತ್ತು. ಈಗ ಈ ಜೋಡಿ ಮತ್ತೆ ತೆರೆಮೇಲೆ ಒಂದಾಗುತ್ತಿದೆಯಂತೆ. ಸದ್ಯ, ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಬಂಗಾರ್​ ರಾಜು’ ಸಿನಿಮಾದಲ್ಲಿ ಸಮಂತಾ ಮತ್ತು ನಾಗ ಚೈತನ್ಯ ಒಟ್ಟಾಗಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಇಬ್ಬರೂ ಕತೆ ಕೇಳಿದ್ದು, ಸಿನಿಮಾ ಇಷ್ಟಪಟ್ಟಿದ್ದಾರೆ. ಈ ಕಾರಣಕ್ಕೆ ಅವರು ಸಿನಿಮಾದಲ್ಲಿ ನಟಿಸೋಕೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿಚಾರ ಕೇಳಿದ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಅಷ್ಟೇ ಅಲ್ಲ, ಈ ಜೋಡಿಯನ್ನು ಕಣ್ತುಂಬಿಕೊಳ್ಳೋಕೆ ಕಾಯುತ್ತಿದ್ದಾರೆ.

ಕಲ್ಯಾಣ್​ ಕೃಷ್ಣ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಾಗಾರ್ಜುನ ಮತ್ತು ರಮ್ಯಾ ಕೃಷ್ಣ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. 2016ರಲ್ಲಿ ತೆರೆಗೆ ಬಂದ ಸೂಪರ್​ ಹಿಟ್​ ಸಿನಿಮಾ ಸೊಗ್ಗಾಡೆ ಚಿನ್ನಿ ನಯನಾ ಸಿನಿಮಾದ ಸೀಕ್ವೆಲ್​ ಇದಾಗಿದೆ. ಇದರಲ್ಲಿ ನಾಗ ಚೈತನ್ಯ-ಸಮಂತಾ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಾಗ ಚೈತನ್ಯ ‘ಥ್ಯಾಂಕ್ಯ್​​ ಯೂ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ, ವಿಕ್ರಮ್​ ಕುಮಾರ್​ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ‘ಲವ್​ ಸ್ಟೋರಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಆಮೀರ್​ ಖಾನ್​ ನಟನೆಯ ಲಾಲ್​ ಸಿಂಗ್​ ಚಡ್ಡಾ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಇನ್ನು, ಸಮಂತಾ, ದಿ ಫ್ಯಾಮಿಲಿ ಮ್ಯಾನ್- 2 ವೆಬ್​ ಸೀರಿಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಈ ವೆಬ್​ ಸೀರಿಸ್​ ಟ್ರೈಲರ್​ ರಿಲೀಸ್​ ಆಗಿತ್ತು. ಇದರಲ್ಲಿ ತಮಿಳು ಜನರನ್ನು ಟೆರರಿಸ್ಟ್​ಗಳ ರೀತಿಯಲ್ಲಿ ತೋರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಹೀಗಾಗಿ, ಇದರ ಟ್ರೇಲರ್​ ಎಡಿಟ್​ ಮಾಡಲಾಗಿದೆ.

ಇದನ್ನೂ ಓದಿ: ತಮಿಳರ ಕೋಪಕ್ಕೆ ಕಾರಣವಾದ ಸಮಂತಾ; ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ನಲ್ಲಿ ಅವರು ಮಾಡಿದ ತಪ್ಪೇನು?

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್