AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರೆಮೇಲೆ ಒಂದಾಗುತ್ತಿದ್ದಾರೆ ಗಂಡ-ಹೆಂಡತಿ; ಶೀಘ್ರವೇ ಸೆಟ್ಟೇರಲಿದೆ ನಾಗಚೈತನ್ಯ-ಸಮಂತಾ ಸಿನಿಮಾ?

‘ಬಂಗಾರ್​ ರಾಜು’ ಸಿನಿಮಾದಲ್ಲಿ ಸಮಂತಾ ಮತ್ತು ನಾಗ ಚೈತನ್ಯ ಒಟ್ಟಾಗಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಇಬ್ಬರೂ ಕತೆ ಕೇಳಿದ್ದು, ಸಿನಿಮಾ ಇಷ್ಟಪಟ್ಟಿದ್ದಾರೆ.

ತೆರೆಮೇಲೆ ಒಂದಾಗುತ್ತಿದ್ದಾರೆ ಗಂಡ-ಹೆಂಡತಿ; ಶೀಘ್ರವೇ ಸೆಟ್ಟೇರಲಿದೆ ನಾಗಚೈತನ್ಯ-ಸಮಂತಾ ಸಿನಿಮಾ?
ನಾಗ ಚೈತ್ರನ್ಯ - ಸಮಂತಾ
ರಾಜೇಶ್ ದುಗ್ಗುಮನೆ
| Edited By: |

Updated on: May 21, 2021 | 5:05 PM

Share

ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ನಿಜ ಜೀವನದಲ್ಲಿ ಪತಿ-ಪತ್ನಿಯರು. ಇವರು ಮದುವೆ ಆಗುವುದಕ್ಕೂ ಮೊದಲು ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಅವರ ನಡುವೆ ಪ್ರೀತಿ ಹುಟ್ಟಿಕೊಂಡಿದ್ದು ಶೂಟಿಂಗ್​ ಸೆಟ್​ನಲ್ಲೇ ಅನ್ನೋದು ವಿಶೇಷ. ಮದುವೆ ನಂತರದಲ್ಲಿ ಈ ಜೋಡಿ ‘ಮಜಿಲಿ’ ಸಿನಿಮಾದಲ್ಲಿ ಒಟ್ಟಾಗಿ ಕಾಣಿಸಿಕೊಂಡಿತ್ತು. ಈಗ ಈ ಜೋಡಿ ಮತ್ತೆ ತೆರೆಮೇಲೆ ಒಂದಾಗುತ್ತಿದೆಯಂತೆ. ಸದ್ಯ, ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಬಂಗಾರ್​ ರಾಜು’ ಸಿನಿಮಾದಲ್ಲಿ ಸಮಂತಾ ಮತ್ತು ನಾಗ ಚೈತನ್ಯ ಒಟ್ಟಾಗಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಇಬ್ಬರೂ ಕತೆ ಕೇಳಿದ್ದು, ಸಿನಿಮಾ ಇಷ್ಟಪಟ್ಟಿದ್ದಾರೆ. ಈ ಕಾರಣಕ್ಕೆ ಅವರು ಸಿನಿಮಾದಲ್ಲಿ ನಟಿಸೋಕೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿಚಾರ ಕೇಳಿದ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಅಷ್ಟೇ ಅಲ್ಲ, ಈ ಜೋಡಿಯನ್ನು ಕಣ್ತುಂಬಿಕೊಳ್ಳೋಕೆ ಕಾಯುತ್ತಿದ್ದಾರೆ.

ಕಲ್ಯಾಣ್​ ಕೃಷ್ಣ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಾಗಾರ್ಜುನ ಮತ್ತು ರಮ್ಯಾ ಕೃಷ್ಣ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. 2016ರಲ್ಲಿ ತೆರೆಗೆ ಬಂದ ಸೂಪರ್​ ಹಿಟ್​ ಸಿನಿಮಾ ಸೊಗ್ಗಾಡೆ ಚಿನ್ನಿ ನಯನಾ ಸಿನಿಮಾದ ಸೀಕ್ವೆಲ್​ ಇದಾಗಿದೆ. ಇದರಲ್ಲಿ ನಾಗ ಚೈತನ್ಯ-ಸಮಂತಾ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಾಗ ಚೈತನ್ಯ ‘ಥ್ಯಾಂಕ್ಯ್​​ ಯೂ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ, ವಿಕ್ರಮ್​ ಕುಮಾರ್​ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ‘ಲವ್​ ಸ್ಟೋರಿ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಆಮೀರ್​ ಖಾನ್​ ನಟನೆಯ ಲಾಲ್​ ಸಿಂಗ್​ ಚಡ್ಡಾ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಇನ್ನು, ಸಮಂತಾ, ದಿ ಫ್ಯಾಮಿಲಿ ಮ್ಯಾನ್- 2 ವೆಬ್​ ಸೀರಿಸ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಈ ವೆಬ್​ ಸೀರಿಸ್​ ಟ್ರೈಲರ್​ ರಿಲೀಸ್​ ಆಗಿತ್ತು. ಇದರಲ್ಲಿ ತಮಿಳು ಜನರನ್ನು ಟೆರರಿಸ್ಟ್​ಗಳ ರೀತಿಯಲ್ಲಿ ತೋರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಹೀಗಾಗಿ, ಇದರ ಟ್ರೇಲರ್​ ಎಡಿಟ್​ ಮಾಡಲಾಗಿದೆ.

ಇದನ್ನೂ ಓದಿ: ತಮಿಳರ ಕೋಪಕ್ಕೆ ಕಾರಣವಾದ ಸಮಂತಾ; ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​​ನಲ್ಲಿ ಅವರು ಮಾಡಿದ ತಪ್ಪೇನು?

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್