AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವದಂತಿ ವಿಚಾರದಲ್ಲಿ ಮೌನ ಮುರಿದ ಸಮಂತಾ ಅಕ್ಕಿನೇನಿ; ಅಭಿಮಾನಿಗಳಿಗೆ ಎಲ್ಲವನ್ನೂ ಸ್ಪಷ್ಟಪಡಿಸಿದ ನಟಿ

ಸಮಂತಾ ಅಕ್ಕಿನೇನಿ ಸದ್ಯ ಯಾವುದೇ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಅವರು ಕೆಲ ಕಾಲ ಚಿತ್ರರಂಗದಿಂದ ಬ್ರೇಕ್​ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ, ಇದು ಸುಳ್ಳು ಎನ್ನುತ್ತಿವೆ ಕೆಲ ಮೂಲಗಳು.

ವದಂತಿ ವಿಚಾರದಲ್ಲಿ ಮೌನ ಮುರಿದ ಸಮಂತಾ ಅಕ್ಕಿನೇನಿ; ಅಭಿಮಾನಿಗಳಿಗೆ ಎಲ್ಲವನ್ನೂ ಸ್ಪಷ್ಟಪಡಿಸಿದ ನಟಿ
ಸಮಂತಾ ಅಕ್ಕಿನೇನಿ
TV9 Web
| Edited By: |

Updated on: Sep 29, 2021 | 2:36 PM

Share

ಸಮಂತಾ ಅಕ್ಕಿನೇನಿ ಇತ್ತೀಚೆಗೆ ಸಾಕಷ್ಟು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ. ಕೆಲ ಮಾಧ್ಯಮಗಳು  ಅವರ ವಿಚ್ಛೇದನದ ವದಂತಿ ಬಗ್ಗೆ ಮನಬಂದಂತೆ ಸುದ್ದಿ ಬಿತ್ತರ ಮಾಡುತ್ತಿವೆ. ಇದರಲ್ಲಿ ಯಾವುದನ್ನು ನಂಬಬೇಕು, ಯಾವುದನ್ನು ಬಿಡಬೇಕು ಎಂಬುದು ಅಭಿಮಾನಿಗಳಿಗೆ ಪ್ರಶ್ನೆಯಾಗಿದೆ. ಈಗ ಅವರು ಕೆಲ ವದಂತಿಗೆ ಫುಲ್​ ಸ್ಟಾಪ್​ ಹಾಕಿದ್ದಾರೆ.

ಸಮಂತಾ ಅಕ್ಕಿನೇನಿ ಸದ್ಯ ಯಾವುದೇ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಅವರು ಕೆಲ ಕಾಲ ಚಿತ್ರರಂಗದಿಂದ ಬ್ರೇಕ್​ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ, ಇದು ಸುಳ್ಳು ಎನ್ನುತ್ತಿವೆ ಕೆಲ ಮೂಲಗಳು. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ನಲ್ಲಿ ನಟಿಸಿದ ನಂತರ ಅವರಿಗೆ ಬಾಲಿವುಡ್​ ಕಡೆಯಿಂದ ಆಫರ್​ಗಳು ಬರುತ್ತಿವೆ ಎನ್ನಲಾಗಿದೆ. ಇದರಲ್ಲಿ ಕೆಲವನ್ನು ಸಮಂತಾ ಒಪ್ಪಿಕೊಂಡಿದ್ದಾರೆ. ಇವು ಹಿಟ್​ ಆದರೆ ಬಾಲಿವುಡ್​ನಲ್ಲೇ ಅವರು ಮುಂದುವರಿಯಲಿದ್ದಾರೆ. ಇದಕ್ಕಾಗಿ ಅವರು ಮುಂಬೈಗೆ ಶಿಫ್ಟ್​ ಆಗಲಿದ್ದಾರೆ ಎನ್ನುವ ಸುದ್ದಿ ಬಿತ್ತರವಾಗಿದೆ. ಈ ವಿಚಾರದ ಬಗ್ಗೆ ಸಮಂತಾಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಸಮಂತಾ ನೇರವಾಗಿ ಉತ್ತರಿಸಿದ್ದಾರೆ.

ಸಮಂತಾ ಅಕ್ಕಿನೇನಿ ಹುಟ್ಟಿದ್ದು ಚೆನ್ನೈನಲ್ಲಿ. ಆದರೆ, ಅವರು ಹೆಚ್ಚು ಗುರುತಿಸಿಕೊಂಡಿದ್ದು ಟಾಲಿವುಡ್​ನಲ್ಲಿ. ಹೀಗಾಗಿ, ಹೈದರಾಬಾದ್​ ಅವರ ಮನೆ ಎಂದು ಪರಿಗಣಿಸಿದ್ದಾರೆ. ಈಗ ಮುಂಬೈಗೆ ಅವರು ತೆರಳಲಿದ್ದಾರೆ ಎನ್ನುವ ವಿಚಾರ ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ.  ಈ ಬಗ್ಗೆ ಸಮಂತಾ ಅವರನನ್ನು ಪ್ರಶ್ನಿಸಬೇಕು ಎಂದುಕೊಂಡಿದ್ದರು. ಇದಕ್ಕೆ ಸಮಂತಾ ಅವಕಾಶ ನೀಡಿದ್ದರು. ಈ ವೇಳೆ ಅವರು ಮುಂಬೈಗೆ ಶಿಫ್ಟ್​ ಆಗುವ ಬಗ್ಗೆ ಉತ್ತರ ನೀಡಿದ್ದಾರೆ.

‘ಈ ವದಂತಿ ಎಲ್ಲಿ ಹುಟ್ಟಿಕೊಂಡಿತು ಎನ್ನುವ ಬಗ್ಗೆ ನನಗೆ ಗೊತ್ತಿಲ್ಲ. ಉಳಿದ ನೂರು ವದಂತಿಗಳಂತೆ ಇದೂ ಕೂಡ ಸುಳ್ಳು. ಹೈದರಾಬಾದ್​ ನನ್ನ ಮನೆ. ನಾನು ಇದನ್ನು ಬಿಟ್ಟು ಎಲ್ಲಿಯೂ ಹೋಗುವುದಿಲ್ಲ. ಹೈದರಾಬಾದ್​ ನನಗೆ ಎಲ್ಲವನ್ನೂ ನೀಡಿದೆ. ನಾನು ಇಲ್ಲೇ ಉಳಿದುಕೊಳ್ಳಲು ಇಷ್ಟಪಡುತ್ತೇನೆ’ ಎಂದಿದ್ದಾರೆ ಅವರು. ಈ ಮೂಲಕ ಅವರು ಒಂದು ವದಂತಿಗೆ ಬ್ರೇಕ್​ ಹಾಕಿದ್ದಾರೆ. ಸಮಂತಾ-ನಾಗ ಚೈತನ್ಯ ವಿಚ್ಛೇದನ ವದಂತಿಗೆ ಈ ವರೆಗೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ಸ್ಪಷ್ಟನೆ ಸಿಗಬೇಕಿತ್ತು.

ಇದನ್ನೂ ಓದಿ: ಆಮಿರ್​ ಖಾನ್​​ಗೆ ವಿಶೇಷ ಪಾರ್ಟಿ ಕೊಟ್ಟ ನಾಗ ಚೈತನ್ಯ; ಸಮಂತಾ ಅಕ್ಕಿನೇನಿ ಮಿಸ್ಸಿಂಗ್​

ನಾಗ ಚೈತನ್ಯ-ಸಾಯಿ ಪಲ್ಲವಿ ಪಾಲಿಗೆ ಇದು ಬಿಗ್​ ಡೇ; ಈಗಲಾದರೂ ಬರುತ್ತಾರಾ ಸಮಂತಾ?

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!