AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಮೇಲೆ ನಾಗ ಚೈತನ್ಯಗೆ ಇತ್ತು ಹೊಟ್ಟೆಕಿಚ್ಚು? ವಿಚ್ಛೇದನದ ಅಸಲಿ ವಿಚಾರ ಬಯಲು

ಸಮಂತಾ ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಮದುವೆ ನಂತರ ತೆರೆಕಂಡ ‘ರಂಗಸ್ಥಲಮ್​’, ‘ಓಹ್ ಬೇಬಿ’, ‘ಮಜಿಲಿ’ ಸೇರಿ ಸಾಕಷ್ಟು ಅನೇಕ ಸಿನಿಮಾಗಳು ಯಶಸ್ಸು ಕಂಡಿದೆ. ಆದರೆ, ನಾಗ ಚೈತನ್ಯ ವೃತ್ತಿ ಜೀವನದಲ್ಲಿ ಸಾಕಷ್ಟು ಸೋಲುಗಳನ್ನು ಕಾಣುತ್ತಿದ್ದಾರೆ.

ಸಮಂತಾ ಮೇಲೆ ನಾಗ ಚೈತನ್ಯಗೆ ಇತ್ತು ಹೊಟ್ಟೆಕಿಚ್ಚು? ವಿಚ್ಛೇದನದ ಅಸಲಿ ವಿಚಾರ ಬಯಲು
ಸಮಂತಾ-ನಾಗ ಚೈತನ್ಯ
TV9 Web
| Edited By: |

Updated on:Oct 04, 2021 | 7:38 PM

Share

ಸಮಂತಾ ಅಕ್ಕಿನೇನಿ ಟಾಲಿವುಡ್​ನ ಬೇಡಿಕೆಯ ನಟಿ. ಮದುವೆ ನಂತರವೂ ಅವರಿಗಿರುವ ಡಿಮ್ಯಾಂಡ್​ ಕೊಂಚವೂ ತಗ್ಗಿಲ್ಲ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್​ ಹಿಟ್​ ಆದ ನಂತರವಂತೂ ಸಮಂತಾ ಹಿಂದಿಯಲ್ಲೂ ದೊಡ್ಡ ಹೆಸರು ಮಾಡಿದರು. ಈ ಮಧ್ಯೆ ಸಮಂತಾ-ನಾಗ ಚೈತನ್ಯ ದಾಂಪತ್ಯ ಮುರಿದು ಬಿದ್ದಿದೆ. ಇದಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಸಾಕಷ್ಟು ಜನರು ಸಾಕಷ್ಟು ರೀತಿಯಲ್ಲಿ ಚರ್ಚಿಸುತ್ತಿದ್ದಾರೆ. ಈಗ ಹೊಸ ವಿಚಾರವೊಂದು ಚರ್ಚೆ ಆಗುತ್ತಿದೆ.

ಸಮಂತಾ ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಮದುವೆ ನಂತರ ತೆರೆಕಂಡ ‘ರಂಗಸ್ಥಲಮ್​’, ‘ಓಹ್ ಬೇಬಿ’, ‘ಮಜಿಲಿ’ ಸೇರಿ ಅನೇಕ ಸಿನಿಮಾಗಳು ಯಶಸ್ಸು ಕಂಡಿವೆ. ಆದರೆ, ನಾಗ ಚೈತನ್ಯ ವೃತ್ತಿ ಜೀವನದಲ್ಲಿ ಸಾಕಷ್ಟು ಸೋಲುಗಳನ್ನು ಕಾಣುತ್ತಿದ್ದಾರೆ. ಅವರ ನಟನೆಯ ‘ಮಜಿಲಿ’ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತು. ಆದರೆ, ಅಭಿಮಾನಿಗಳು ಸಿನಿಮಾ ಯಶಸ್ಸನ್ನು ಈ ಚಿತ್ರದಲ್ಲಿ ಮುಖ್ಯಪಾತ್ರ ಮಾಡಿದ ಸಮಂತಾಗೆ ನೀಡಿದರು. ಈ ರೀತಿಯ ಸಾಕಷ್ಟು ಘಟನೆಗಳು ನಡೆದಿವೆ ಎನ್ನಲಾಗುತ್ತಿದೆ. ‘ದಿ ಫ್ಯಾಮಿಲಿ ಮ್ಯಾನ್​ 2’ ಯಶಸ್ಸಿನ ನಂತರ ಬಾಲಿವುಡ್​ಮಂದಿ ಸಮಂತಾ ಮನೆ ಬಾಗಿಲು ತಟ್ಟುತ್ತಿದ್ದಾರೆ. ಈ ವಿಚಾರದಲ್ಲಿ ನಾಗ ಚೈತನ್ಯ ಸಾಕಷ್ಟು ಹೊಟ್ಟೆಕಿಚ್ಚು ಮಾಡಿಕೊಳ್ಳುತ್ತಿದ್ದರು ಎಂದು ವರದಿ ಆಗಿದೆ.

ಇನ್ನು, ನಾಗ ಚೈತನ್ಯಗೆ ಮಕ್ಕಳನ್ನು ಆಡಿಸುವ ಆಸೆ ಇತ್ತು. ಆದರೆ, ಸಮಂತಾಗೆ ಇಷ್ಟು ಬೇಗ ಅದು ಇಷ್ಟವಿರಲಿಲ್ಲ ಎನ್ನುತ್ತಿವೆ ಮೂಲಗಳು. ಮಕ್ಕಳಾದ ನಂತರ ಅದರ ಪಾಲನೆಗೆ ಒಂದಷ್ಟು ವರ್ಷ ಹಿಡಿಯುತ್ತದೆ. ಆ ವೇಳೆಗೆ ಚಿತ್ರರಂಗದಲ್ಲಿ ಬೇಡಿಕೆ ಕುಗ್ಗಿರುತ್ತದೆ. ಈ ಕಾರಣಕ್ಕೆ ಕೆಲ ವರ್ಷ ಬಿಟ್ಟು ಮಗುವನ್ನು ಪಡೆಯುವ ಆಲೋಚನೆ ಸಮಂತಾ ಅವರದ್ದಾಗಿತ್ತು. ಈ ವಿಚಾರಕ್ಕೂ ಇಬ್ಬರ ನಡುವೆ ವಾಗ್ವಾದಗಳು ಏರ್ಪಟ್ಟಿವೆ ಎನ್ನಲಾಗಿದೆ.

ಮದುವೆ ಆದ ನಂತರದಲ್ಲಿ ಹೀರೋಯಿನ್​ಗಳು ಬೋಲ್ಡ್​ ಆಗಿ ತೆರೆಮೇಲೆ ಕಾಣಿಸಿಕೊಳ್ಳೋದು ತುಂಬಾನೇ ಅಪರೂಪ. ಕುಟುಂಬದ ಹಿರಿಯರೂ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ. ಆದರೆ, ಸಮಂತಾ ಇದಕ್ಕೆಲ್ಲ ಕೇರ್ ಮಾಡದೇ ಬೋಲ್ಡ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಸಮಂತಾ ವೃತ್ತಿ ಜೀವನದ ದೃಷ್ಟಿಯಲ್ಲಿ  ‘ದಿ ಫ್ಯಾಮಿಲಿ ಮ್ಯಾನ್​ 2’ ಬಹಳ ಮಹತ್ವ ಪಡೆದುಕೊಂಡಿದೆ. ಈ ಕಾರಣಕ್ಕೆ ಅವರು ವೆಬ್​ ಸೀರಿಸ್​ ಒಪ್ಪಿಕೊಂಡಿದ್ದರು. ಇದಕ್ಕೆ ಕುಟುಂಬದವರ ವಿರೋಧವಿದ್ದರೂ ಅವರು ತಲೆಕೆಡಿಸಿಕೊಂಡಿಲ್ಲ ಎನ್ನಲಾಗುತ್ತಿದೆ. ಈ ವಿಚಾರವೇ ಈಗ ಡಿವೋರ್ಸ್​ವರೆಗೆ ತಂದು ನಿಲ್ಲಿಸಿತು ಎನ್ನುತ್ತಿವೆ ಮೂಲಗಳು. ​

ಇದನ್ನೂ ಓದಿ: ಸಮಂತಾ ಮತ್ತು ನಾಗ ಚೈತನ್ಯ ಡಿವೋರ್ಸ್​ಗೆ ಇದುವೇ ಕಾರಣ? ಅಕ್ಕಿನೇನಿ ಕುಟುಂಬದಲ್ಲಿ ಅಸಲಿಗೆ ಆಗಿದ್ದೇನು?

ಮಗನಿಗೆ ವಿಚ್ಛೇದನ ಕೊಟ್ಟರೂ ಮಾಜಿ ಸೊಸೆ ಮೇಲೆ ಪ್ರೀತಿ ತೋರಿದ ಅಕ್ಕಿನೇನಿ ನಾಗಾರ್ಜುನ

Published On - 7:38 pm, Mon, 4 October 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!