ಸಾಯಿ ಪಲ್ಲವಿ-ನಾಗ ಚೈತನ್ಯ ಲವ್​ ಸ್ಟೋರಿ ಬಗ್ಗೆ ಮೌನ ಮುರಿದ ಸಮಂತಾ; ಡಿವೋರ್ಸ್​ ವದಂತಿಗೆ ಬ್ರೇಕ್​

ಗಂಡನ ಸಿನಿಮಾ ಬಗ್ಗೆ ಸಮಂತಾ ಕೊನೆಗೂ ಮೌನ ಮುರಿದಿದ್ದಾರೆ. ನಾಗ ಚೈತನ್ಯ ಮಾಡಿರುವ ಟ್ವೀಟ್​ ಅನ್ನು ರೀಟ್ವೀಟ್ ಮಾಡಿರುವ ಸಮಂತಾ, ‘ವಿನ್ನರ್​’ ಎಂದು ಹೊಗಳಿದ್ದಾರೆ.

ಸಾಯಿ ಪಲ್ಲವಿ-ನಾಗ ಚೈತನ್ಯ ಲವ್​ ಸ್ಟೋರಿ ಬಗ್ಗೆ ಮೌನ ಮುರಿದ ಸಮಂತಾ; ಡಿವೋರ್ಸ್​ ವದಂತಿಗೆ ಬ್ರೇಕ್​
ನಾಗ ಚೈತನ್ಯ, ಸಾಯಿ ಪಲ್ಲವಿ, ಸಮಂತಾ ಅಕ್ಕಿನೇನಿ
Follow us
| Updated By: ಮದನ್​ ಕುಮಾರ್​

Updated on:Sep 14, 2021 | 9:59 AM

ನಟಿ ಸಮಂತಾ ಅಕ್ಕಿನೇನಿ ಅವರು ಸಾರ್ವಜನಿಕವಾಗಿ ತಮ್ಮ ಪತಿ ನಾಗ ಚೈತನ್ಯ ಬಗ್ಗೆ ಮಾತನಾಡದೇ ಹಲವು ತಿಂಗಳೇ ಕಳೆದಿದ್ದವು. ಅಲ್ಲದೇ ಅವರಿಬ್ಬರ ನಡುವೆ ಮನಸ್ತಾಪ ಉಂಟಾಗಿದ್ದು, ಇನ್ನೇನು ವಿಚ್ಛೇದನ ಕೂಡ ಪಡೆಯುತ್ತಾರೆ ಎಂಬ ಮಾಹಿತಿ ಹರಿದಾಡುತ್ತಿತ್ತು. ಸಮಂತಾ ವರ್ತನೆಗಳು ಕೂಡ ಅದಕ್ಕೆ ಪುಷ್ಠಿ ನೀಡುವಂತೆಯೇ ಇದ್ದವು. ಆದರೆ ಈಗ ಬಹುದಿನಗಳ ಬಳಿಕ ಪತಿ ನಾಗ ಚೈತನ್ಯ ಸಿನಿಮಾ ಬಗ್ಗೆ ಸಮಂತಾ ಮಾತನಾಡಿದ್ದಾರೆ. ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಜೊತೆಯಾಗಿ ‘ಲವ್​ ಸ್ಟೋರಿ’ ಸಿನಿಮಾದಲ್ಲಿ ನಟಿಸಿದ್ದು, ಆ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದೆ. ಅದರ ಬಗ್ಗೆ ಸಮಂತಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಟ್ರೇಲರ್​ ಹಂಚಿಕೊಳ್ಳಲು ತುಂಬ ಖುಷಿ ಆಗುತ್ತಿದೆ. ನಿಮ್ಮೆಲ್ಲರನ್ನು ಮತ್ತೆ ಥಿಯೇಟರ್​ನಲ್ಲಿ ಭೇಟಿಯಾಗಲು ಕಾಯುತ್ತಿದ್ದೇನೆ’ ಎಂದು ನಾಗ ಚೈತನ್ಯ ಸೋಮವಾರ (ಸೆ.13) ಟ್ವೀಟ್​ ಮಾಡಿದ್ದರು. ಅದಕ್ಕೆ ಸಮಂತಾ ಏನಾದರೂ ಪ್ರತಿಕ್ರಿಯೆ ನೀಡುತ್ತಾರೋ ಇಲ್ಲವೋ ಎಂಬ ಬಗ್ಗೆ ಜನರಿಗೆ ಕೌತುಕ ಮನೆ ಮಾಡಿತ್ತು. ಗಂಡನ ಸಿನಿಮಾ ಬಗ್ಗೆ ಸಮಂತಾ ಕೊನೆಗೂ ಮೌನ ಮುರಿದಿದ್ದಾರೆ. ನಾಗ ಚೈತನ್ಯ ಮಾಡಿರುವ ಟೀಟ್​ ಅನ್ನು ರೀಟ್ವೀಟ್ ಮಾಡಿರುವ ಸಮಂತಾ, ‘ವಿನ್ನರ್​’ ಎಂದು ಹೊಗಳಿದ್ದಾರೆ. ನಾಯಕಿ ಸಾಯಿ ಪಲ್ಲವಿ ಮತ್ತು ಇಡೀ ತಂಡಕ್ಕೆ ಅವರು ಶುಭ ಹಾರೈಸಿದ್ದಾರೆ.

ಗಂಡನ ಸಿನಿಮಾದ ಟ್ರೇಲರ್​ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿ, ಶುಭಕೋರಿದ್ದರಿಂದ ಅವರ ಸಂಸಾರದಲ್ಲಿ ಯಾವುದೇ ಬಿರುಕು ಇದ್ದಂತಿಲ್ಲ ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಆದರೂ ಅನುಮಾನ ಹೊಗೆಯಾಡುತ್ತಲೇ ಇದೆ. ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಹೆಸರಿನ ಜೊತೆ ಇದ್ದ ‘ಅಕ್ಕಿನೇನಿ’ ಎಂಬ ಸರ್​ನೇಮ್​ ತೆಗೆದುಹಾಕಿದ ಬಳಿಕ ಡಿವೋರ್ಸ್​ ವದಂತಿ ಕೇಳಿಬರಲಾರಂಭಿಸಿತು. ಆ ಬಗ್ಗೆ ಅಕ್ಕಿನೇನಿ ಕುಟುಂಬದ ಯಾರೋಬ್ಬರೂ ಅಧಿಕೃತವಾಗಿ ಈವರೆಗೆ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ:

ಮಗ-ಸೊಸೆಯ ಡಿವೋರ್ಸ್​ ತೀರ್ಮಾನಕ್ಕೆ ಹೇಗೆ ಸಹಾಯ ಮಾಡ್ತಿದ್ದಾರೆ ನಾಗಾರ್ಜುನ? ಟಾಲಿವುಡ್​ ಗಲ್ಲಿಯಲ್ಲಿ ಗುಸುಗುಸು

ರಾಮ್​ ಚರಣ್​ ಒಪ್ಪದಿದ್ದರೂ ಲಿಪ್​ ಲಾಕ್ ಮಾಡಿದ್ದ ಸಮಂತಾ? ‘ರಂಗಸ್ಥಲಂ’ ತೆರೆಹಿಂದೆ ಮುತ್ತಿನ ಪ್ರಹಸನ

Published On - 9:38 am, Tue, 14 September 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ