AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಗತ್ತನ್ನು ಬದಲಾಯಿಸಬೇಕಾದರೆ ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು’; ವಿಚ್ಛೇದನದ ನಂತರ ಸಮಂತಾ ಮೊದಲ ಮಾತು

ಅಕ್ಟೋಬರ್​ 3 ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಸರು ಬದಲಿಸಿದ್ದಾರೆ. ಎಸ್ ಎಂದು ಇದ್ದ ಹೆಸರನ್ನು ಸಮಂತಾ ಎಂದು ಮಾಡಿದ್ದಾರೆ.

‘ಜಗತ್ತನ್ನು ಬದಲಾಯಿಸಬೇಕಾದರೆ ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು’; ವಿಚ್ಛೇದನದ ನಂತರ ಸಮಂತಾ ಮೊದಲ ಮಾತು
ಸಮಂತಾ
TV9 Web
| Edited By: |

Updated on:Oct 04, 2021 | 4:10 PM

Share

ಸಮಂತಾ ಅಕ್ಕಿನೇನಿ ಅವರು ನಾಗ ಚೈತನ್ಯ ಜತೆ ವಿಚ್ಛೇದನ ಪಡೆದ ವಿಚಾರವನ್ನು ಇತ್ತೀಚೆಗೆ ಸೋಶಿಯಲ್​ ಮೀಡಿಯಾದಲ್ಲಿ ಅಧಿಕೃತ ಮಾಡಿದ್ದರು. ಈ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸಾಕಷ್ಟು ಸೆಲೆಬ್ರಿಟಿಗಳು ಬೇಸರ ಹೊರಹಾಕಿದ್ದರು. ದಾಂಪತ್ಯ ಮುರಿದು ಕೊಂಡಿದ್ದೇಕೆ ಎನ್ನುವ ಬಗ್ಗೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ. ಹೀಗಿರುವಾಗಲೇ ಸಮಂತಾ ಹೊಸ ಪೋಸ್ಟ್​ ಹಾಕಿದ್ದಾರೆ. ವಿಚ್ಛೇದನದ ನಂತರ ಅವರು ಹಾಕುತ್ತಿರುವ ಮೊದಲ ಪೋಸ್ಟ್ ಇದಾಗಿದೆ.

ಸಮಂತಾ ವಿಮಾನದಲ್ಲಿ ಎಲ್ಲಿಯೋ ತೆರಳಿದ್ದಾರೆ. ವಿಮಾನದ ಕಿಟಕಿಯಿಂದ ಹೊರಗಿನ ಪ್ರಪಂಚವನ್ನು ಅವರು ನೋಡುತ್ತಿದ್ದಾರೆ. ರಾತ್ರಿಯಾಗಿದ್ದರಿಂದ ಇಡೀ ನಗರ ಬೆಳಕಿನಿಂದ ಹೊಳೆಯುತ್ತಿದೆ. ಈ ಪೋಸ್ಟ್​ಗೆ ಅವರು ಇಂಗ್ಲಿಷ್​ನ ಗೀತೆಯನ್ನು ಹಾಕಿದ್ದಾರೆ. ‘ಜಗತ್ತನ್ನು ಬದಲಾಯಿಸಬೇಕಾದರೆ ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು..’ ಎಂಬ ಸಾಲಿನೊಂದಿಗೆ ಈ ಹಾಡು ಪ್ರಾರಂಭವಾಗುತ್ತದೆ.

ವಿಚ್ಛೇದನಕ್ಕೂ ತಿಂಗಳು ಮೊದಲು ಸಮಂತಾ ಅವರು ಅಕ್ಕಿನೇನಿ ಸರ್​ ನೇಮ್​ ಅನ್ನು ಸೋಶಿಯಲ್​ ಮೀಡಿಯಾ ಖಾತೆಯಿಂದ ತೆಗೆದು ಹಾಕಿದ್ದರು. ಅಲ್ಲದೆ ‘ಎಸ್​’ ಎಂದಷ್ಟೇ ಇಟ್ಟಿದ್ದರು. ಈ ಮೂಲಕ ವಿಚ್ಛೇದನ ಸುದ್ದಿ ಹುಟ್ಟಿಕೊಳ್ಳುವಂತೆ ಮಾಡಿದ್ದರು. ಈಗ ವಿಚ್ಛೇದನ ಪಡೆದ ಮರುದಿನ ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಸರು ಬದಲಿಸಿದ್ದಾರೆ.

ಅಕ್ಟೋಬರ್​ 3 ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಸರು ಬದಲಿಸಿದ್ದಾರೆ. ಎಸ್ ಎಂದು ಇದ್ದ ಹೆಸರನ್ನು ಸಮಂತಾ ಎಂದು ಮಾಡಿದ್ದಾರೆ. ಮದುವೆಗೂ ಮೊದಲು ಸೋಶಿಯಲ್​ ಮೀಡಿಯಾದಲ್ಲಿ ಅವರ ಹೆಸರು ಸಮಂತಾ ರುತ್​ ಪ್ರಭು ಎಂಬುದಾಗಿ ಇತ್ತು. ಈಗ ಅವರು ಆ ಹೆಸರಿಗೆ ಮರಳಿಲ್ಲ.

samantha

ಸಮಂತಾ ಟ್ವಿಟರ್​ ಖಾತೆ

ಅಕ್ಟೋಬರ್​ 2ರಂದು ಈ ಜೋಡಿ ವಿಚ್ಛೇದನದ ಬಗ್ಗೆ ಘೋಷಣೆ ಮಾಡಿತ್ತು. ‘ಸಾಕಷ್ಟು ಆಲೋಚನೆ ಮಾಡಿದ ನಂತರ ನಾವಿಬ್ಬರು ಪತಿ-ಪತ್ನಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ದಶಕಗಳ ಕಾಲ ಸ್ನೇಹಿತರಾಗಿ ಇದ್ದಿದ್ದಕ್ಕೆ ನಾವಿಬ್ಬರೂ ಅದೃಷ್ಟ ಮಾಡಿದ್ದೆವು. ಆ ಸ್ನೇಹವೇ ನಮ್ಮ ಸಂಬಂಧದ ಶಕ್ತಿಯಾಗಿತ್ತು. ಯಾವಾಗಲೂ ನಮ್ಮ ನಡುವೆ ವಿಶೇಷ ಬಂಧ ಇರಲಿದೆ ಎಂದು ನಂಬಿದ್ದೇವೆ. ಈ ಕಷ್ಟದ ಸಂದರ್ಭದಲ್ಲಿ ನಮಗೆ ಬೆಂಬಲ ನೀಡಿ ಅಂತ ಅಭಿಮಾನಿಗಳು, ಮಾಧ್ಯಮದವರು ಮತ್ತು ಹಿತೈಷಿಗಳಲ್ಲಿ ಮನವಿ ಮಾಡುತ್ತೇವೆ. ಜೀವನದಲ್ಲಿ ಮುಂದಕ್ಕೆ ಸಾಗಲು ನಮಗೆ ಬೇಕಾಗಿರುವ ಖಾಸಗಿತನಕ್ಕೆ ಅವಕಾಶ ಮಾಡಿಕೊಡಿ ಅಂತ ಕೇಳಿಕೊಳ್ಳುತ್ತೇವೆ’ ಎಂದು ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: ವಿಚ್ಛೇದನದ ಮರುದಿನವೇ ಹೆಸರು ಬದಲಿಸಿಕೊಂಡ ನಟಿ ಸಮಂತಾ

Published On - 3:48 pm, Mon, 4 October 21

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!