‘ದಿ ಫ್ಯಾಮಿಲಿ ಮ್ಯಾನ್ 2’ ವಿವಾದದ ಬೆನ್ನಲ್ಲೇ ನಟಿ ಸಮಂತಾ ಅಕ್ಕಿನೇನಿಗೆ ಬಂತು ಎಚ್ಚರಿಕೆಯ ಸಂದೇಶ

ಸಮಂತಾ ಸಾಕಷ್ಟು ಮಾಧ್ಯಮಗಳಿಗೆ ಈ ವೆಬ್​ ಸೀರಿಸ್​ ಕುರಿತಾಗಿ ಸಂದರ್ಶನ ನೀಡುತ್ತಿದ್ದಾರೆ. ಈ ಸಂದರ್ಶನದ ವೇಳೆ ವಿವಾದದ ಬಗ್ಗೆ ಪ್ರಶ್ನೆ ಎದುರಾಗೋದು ಸಾಮಾನ್ಯ.

‘ದಿ ಫ್ಯಾಮಿಲಿ ಮ್ಯಾನ್ 2’ ವಿವಾದದ ಬೆನ್ನಲ್ಲೇ ನಟಿ ಸಮಂತಾ ಅಕ್ಕಿನೇನಿಗೆ ಬಂತು ಎಚ್ಚರಿಕೆಯ ಸಂದೇಶ
ಸಮಂತಾ ಅಕ್ಕಿನೇನಿ
Follow us
|

Updated on: May 29, 2021 | 5:44 PM

 ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್​​​ ಶೂಟಿಂಗ್​ ಆರಂಭವಾದಾಗಿನಿಂದಲೂ ನಟಿ ಸಮಂತಾ ಸುದ್ದಿಯಲ್ಲಿದ್ದಾರೆ. ಅವರು ಸ್ಯೂಸೈಡ್​ ಬಾಂಬರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ಟ್ರೇಲರ್​ನಲ್ಲಿ ಸ್ಪಷ್ಟವಾಗಿತ್ತು. ಈಗ ಅವರಿಗೆ ಎಚ್ಚರಿಕೆಯ ಪತ್ರವೊಂದು ಬಂದಿದೆ. ಅದೂ ಅಮೇಜಾನ್​ ಪ್ರೈಮ್​ ಕಡೆಯಿಂದ ಅನ್ನೋದು ವಿಶೇಷ.

2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಹಿಟ್​ ಆಗಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ಗಾಗಿ ಎಲ್ಲರೂ ಕಾದಿದ್ದರು. ಆದರೆ, ವೆಬ್​​ಸೀರಿಸ್​ ಟ್ರೇಲರ್​ ತಮಿಳಿಯನ್ನರ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳು ಜನರನ್ನು ಉಗ್ರಗಾಮಿಗಳ ರೀತಿಯಲ್ಲಿ ತೋರಿಸಲಾಗಿದೆ ಎನ್ನುವ ಆರೋಪ ಮಾಡಲಾಗಿದೆ. ಹೀಗಾಗಿ, ಅಮೇಜಾನ್​ ಪ್ರೈಮ್​ ಟ್ರೇಲರ್ ಎಡಿಟ್​ ಮಾಡುವ ಕೆಲಸವನ್ನು ಕೂಡ ಮಾಡಿತ್ತು.

ಸಮಂತಾ ಸಾಕಷ್ಟು ಮಾಧ್ಯಮಗಳಿಗೆ ಈ ವೆಬ್​ ಸೀರಿಸ್​ ಕುರಿತಾಗಿ ಸಂದರ್ಶನ ನೀಡುತ್ತಿದ್ದಾರೆ. ಈ ಸಂದರ್ಶನದ ವೇಳೆ ವಿವಾದದ ಬಗ್ಗೆ ಪ್ರಶ್ನೆ ಎದುರಾಗೋದು ಸಾಮಾನ್ಯ. ಆದರೆ, ಯಾವುದೇ ಕಾರಣಕ್ಕೂ ಈ ವಿವಾದದ ಬಗ್ಗೆ ಮಾತನಾಡದಂತೆ ಅಮೇಜಾನ್​ ಪ್ರೈಮ್​ ಸಮಂತಾಗೆ ಎಚ್ಚರಿಸಿದೆ. ಈ ಮೂಲಕ ವಿವಾದ ದೊಡ್ಡದಾಗದಂತೆ ನೋಡಿಕೊಳ್ಳುವ ಆಲೋಚನೆ ಪ್ರೈಮ್​ನದ್ದು.

ದೊಡ್ಡ ದೊಡ್ಡ ವೆಬ್​ ಸೀರಿಸ್​ಗಳು ಹಾಗೂ ಸಿನಿಮಾಗಳು ತೆರೆಕಾಣುತ್ತಿರುವಾಗ ಯಾರಾದರೂ ಒಬ್ಬರು ಸಣ್ಣ ಸಣ್ಣ ವಿಚಾರಗಳನ್ನು ಇಟ್ಟುಕೊಂಡು ತಕಾರಾರು ತೆಗೆಯುತ್ತಾರೆ. ಈಗ ತಮಿಳಿಯನ್ನರು ಉಗ್ರಗಾಮಿಗಳಂತೆ ತೋರಿಸಲಾಗುತ್ತಿದೆ ಎನ್ನುವ ವಿಚಾರ ಇಟ್ಟುಕೊಂಡು ಕೆಲವು ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್​ ಬ್ಯಾನ್​ ಮಾಡುವಂತೆ ಆಗ್ರಹಿಸಿದ್ದಾರೆ. ಆದರೆ, ವೆಬ್​ ಸೀರಿಸ್​ ನೋಡದೆಯೇ ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ ಎನ್ನುವ ಅಭಿಪ್ರಾಯವನ್ನು ತಂಡ ವ್ಯಕ್ತಪಡಿಸಿದೆ.

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ. ಮೊದಲ ಸೀಸನ್​ ದೊಡ್ಡಮಟ್ಟದಲ್ಲಿ ಹಿಟ್ ಆದ್ದರಿಂದ ಎರಡನೇ ಸೀಸನ್​ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: ‘ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ