AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್ 2’ ವಿವಾದದ ಬೆನ್ನಲ್ಲೇ ನಟಿ ಸಮಂತಾ ಅಕ್ಕಿನೇನಿಗೆ ಬಂತು ಎಚ್ಚರಿಕೆಯ ಸಂದೇಶ

ಸಮಂತಾ ಸಾಕಷ್ಟು ಮಾಧ್ಯಮಗಳಿಗೆ ಈ ವೆಬ್​ ಸೀರಿಸ್​ ಕುರಿತಾಗಿ ಸಂದರ್ಶನ ನೀಡುತ್ತಿದ್ದಾರೆ. ಈ ಸಂದರ್ಶನದ ವೇಳೆ ವಿವಾದದ ಬಗ್ಗೆ ಪ್ರಶ್ನೆ ಎದುರಾಗೋದು ಸಾಮಾನ್ಯ.

‘ದಿ ಫ್ಯಾಮಿಲಿ ಮ್ಯಾನ್ 2’ ವಿವಾದದ ಬೆನ್ನಲ್ಲೇ ನಟಿ ಸಮಂತಾ ಅಕ್ಕಿನೇನಿಗೆ ಬಂತು ಎಚ್ಚರಿಕೆಯ ಸಂದೇಶ
ಸಮಂತಾ ಅಕ್ಕಿನೇನಿ
ರಾಜೇಶ್ ದುಗ್ಗುಮನೆ
|

Updated on: May 29, 2021 | 5:44 PM

Share

 ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್​​​ ಶೂಟಿಂಗ್​ ಆರಂಭವಾದಾಗಿನಿಂದಲೂ ನಟಿ ಸಮಂತಾ ಸುದ್ದಿಯಲ್ಲಿದ್ದಾರೆ. ಅವರು ಸ್ಯೂಸೈಡ್​ ಬಾಂಬರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ಟ್ರೇಲರ್​ನಲ್ಲಿ ಸ್ಪಷ್ಟವಾಗಿತ್ತು. ಈಗ ಅವರಿಗೆ ಎಚ್ಚರಿಕೆಯ ಪತ್ರವೊಂದು ಬಂದಿದೆ. ಅದೂ ಅಮೇಜಾನ್​ ಪ್ರೈಮ್​ ಕಡೆಯಿಂದ ಅನ್ನೋದು ವಿಶೇಷ.

2019ರಲ್ಲಿ ಬಿಡುಗಡೆ ಆಗಿದ್ದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸಿರೀಸ್​ ಸಿಕ್ಕಾಪಟ್ಟೆ ಹಿಟ್​ ಆಗಿತ್ತು. ಮನೋಜ್​ ಬಾಜಪೇಯ್​, ಪ್ರಿಯಾಮಣಿ ಮುಂತಾದವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ‘ದಿ ಫ್ಯಾಮಿಲಿ ಮ್ಯಾನ್​ 2’ಗಾಗಿ ಎಲ್ಲರೂ ಕಾದಿದ್ದರು. ಆದರೆ, ವೆಬ್​​ಸೀರಿಸ್​ ಟ್ರೇಲರ್​ ತಮಿಳಿಯನ್ನರ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳು ಜನರನ್ನು ಉಗ್ರಗಾಮಿಗಳ ರೀತಿಯಲ್ಲಿ ತೋರಿಸಲಾಗಿದೆ ಎನ್ನುವ ಆರೋಪ ಮಾಡಲಾಗಿದೆ. ಹೀಗಾಗಿ, ಅಮೇಜಾನ್​ ಪ್ರೈಮ್​ ಟ್ರೇಲರ್ ಎಡಿಟ್​ ಮಾಡುವ ಕೆಲಸವನ್ನು ಕೂಡ ಮಾಡಿತ್ತು.

ಸಮಂತಾ ಸಾಕಷ್ಟು ಮಾಧ್ಯಮಗಳಿಗೆ ಈ ವೆಬ್​ ಸೀರಿಸ್​ ಕುರಿತಾಗಿ ಸಂದರ್ಶನ ನೀಡುತ್ತಿದ್ದಾರೆ. ಈ ಸಂದರ್ಶನದ ವೇಳೆ ವಿವಾದದ ಬಗ್ಗೆ ಪ್ರಶ್ನೆ ಎದುರಾಗೋದು ಸಾಮಾನ್ಯ. ಆದರೆ, ಯಾವುದೇ ಕಾರಣಕ್ಕೂ ಈ ವಿವಾದದ ಬಗ್ಗೆ ಮಾತನಾಡದಂತೆ ಅಮೇಜಾನ್​ ಪ್ರೈಮ್​ ಸಮಂತಾಗೆ ಎಚ್ಚರಿಸಿದೆ. ಈ ಮೂಲಕ ವಿವಾದ ದೊಡ್ಡದಾಗದಂತೆ ನೋಡಿಕೊಳ್ಳುವ ಆಲೋಚನೆ ಪ್ರೈಮ್​ನದ್ದು.

ದೊಡ್ಡ ದೊಡ್ಡ ವೆಬ್​ ಸೀರಿಸ್​ಗಳು ಹಾಗೂ ಸಿನಿಮಾಗಳು ತೆರೆಕಾಣುತ್ತಿರುವಾಗ ಯಾರಾದರೂ ಒಬ್ಬರು ಸಣ್ಣ ಸಣ್ಣ ವಿಚಾರಗಳನ್ನು ಇಟ್ಟುಕೊಂಡು ತಕಾರಾರು ತೆಗೆಯುತ್ತಾರೆ. ಈಗ ತಮಿಳಿಯನ್ನರು ಉಗ್ರಗಾಮಿಗಳಂತೆ ತೋರಿಸಲಾಗುತ್ತಿದೆ ಎನ್ನುವ ವಿಚಾರ ಇಟ್ಟುಕೊಂಡು ಕೆಲವು ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್​ ಬ್ಯಾನ್​ ಮಾಡುವಂತೆ ಆಗ್ರಹಿಸಿದ್ದಾರೆ. ಆದರೆ, ವೆಬ್​ ಸೀರಿಸ್​ ನೋಡದೆಯೇ ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ ಎನ್ನುವ ಅಭಿಪ್ರಾಯವನ್ನು ತಂಡ ವ್ಯಕ್ತಪಡಿಸಿದೆ.

‘ದಿ ಫ್ಯಾಮಿಲಿ ಮ್ಯಾನ್​ ಸೀಸನ್​-2’ ಜೂನ್​ 4ರಂದು ಅಮೇಜಾನ್​ ಪ್ರೈಮ್​ನಲ್ಲಿ ಪ್ರೀಮಿಯರ್​ ಆಗುತ್ತಿದೆ. ಈ ವೆಬ್​ ಸೀರಿಸ್​ನ ನಿರ್ದೇಶನ ಜವಾಬ್ದಾರಿಯನ್ನು ರಾಜ್​ ಮತ್ತು​ ಡಿ.ಕೆ. ನಿಭಾಯಿಸಿದ್ದಾರೆ. ಮೊದಲ ಸೀಸನ್​ ದೊಡ್ಡಮಟ್ಟದಲ್ಲಿ ಹಿಟ್ ಆದ್ದರಿಂದ ಎರಡನೇ ಸೀಸನ್​ಮೇಲೆ ಹೆಚ್ಚು ನಿರೀಕ್ಷೆ ಇದೆ.

ಇದನ್ನೂ ಓದಿ: ‘ದಿ ಫ್ಯಾಮಿಲಿ ಮ್ಯಾನ್​ 2’ ವಿವಾದದ ಬಗ್ಗೆ ಮೌನ ಮುರಿದ ಮನೋಜ್​ ಬಾಜಪೇಯ್

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ