AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha Akkineni: ಸಂಕಷ್ಟದಲ್ಲಿದ್ದ ಮಹಿಳಾ ಆಟೋ ಡ್ರೈವರ್​​ಗೆ ದುಬಾರಿ ಕಾರ್​ ಗಿಫ್ಟ್​ ನೀಡಿದ ನಟಿ ಸಮಂತಾ

ಕವಿತಾ ಹೆಸರಿನ ಮಹಿಳೆ ಆಟೋ ಓಡಿಸಿ ಮನೆ ನಡೆಸುತ್ತಿದ್ದರು. ಅವರ ಆಟೋ ಮೀಟರ್​ ಓಡಿದರೆ ಮಾತ್ರ ಮನೆಯಲ್ಲಿ ಊಟ. ತಂದೆ-ತಾಯಿ ತೀರಿಕೊಂಡ ನಂತರ ತಂಗಿಯನ್ನು ಸಾಕುವ ಜವಾಬ್ದಾರಿ ಕವಿತಾ ಹೆಗಲೇರಿತ್ತು.

Samantha Akkineni: ಸಂಕಷ್ಟದಲ್ಲಿದ್ದ ಮಹಿಳಾ ಆಟೋ ಡ್ರೈವರ್​​ಗೆ ದುಬಾರಿ ಕಾರ್​ ಗಿಫ್ಟ್​ ನೀಡಿದ ನಟಿ ಸಮಂತಾ
ಸಮಂತಾ ಅಕ್ಕಿನೇನಿ
ರಾಜೇಶ್ ದುಗ್ಗುಮನೆ
|

Updated on:Apr 21, 2021 | 8:51 PM

Share

ಸಮಂತಾ ಅಕ್ಕಿನೇನಿ ಸಿನಿಮಾ ಮೂಲಕ ಎಲ್ಲರ ಗಮನ ಸೆಳೆದವರು. ಭಿನ್ನ ಪಾತ್ರಗಳನ್ನು ಮಾಡುತ್ತಾ ಸಾಕಷ್ಟು ಅಭಿಮಾನಿಗಳನ್ನು ಅವರು ಹೊಂದಿದ್ದಾರೆ. ಇದರ ಜತೆಗೆ ಸಾಮಾಜಿಕ ಕೆಲಸಗಳ ಮೂಲಕವೂ ಸಮಂತಾ ಗುರುತಿಸಿಕೊಂಡಿದ್ದಾರೆ. ಈಗ ಬಡ ಮಹಿಳಾ ಆಟೋ ಡ್ರೈವರ್​ಗೆ ಸಹಾಯ ಮಾಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅವರು ಮಾಡಿದ ಕೆಲಸಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕವಿತಾ ಹೆಸರಿನ ಮಹಿಳೆ ಆಟೋ ಓಡಿಸಿ ಮನೆ ನಡೆಸುತ್ತಿದ್ದರು. ಅವರ ಆಟೋ ಮೀಟರ್​ ಓಡಿದರೆ ಮಾತ್ರ ಮನೆಯಲ್ಲಿ ಊಟ. ತಂದೆ-ತಾಯಿ ತೀರಿಕೊಂಡ ನಂತರ ತಂಗಿಯನ್ನು ಸಾಕುವ ಜವಾಬ್ದಾರಿ ಕವಿತಾ ಹೆಗಲೇರಿತ್ತು. ತೀವ್ರ ಬಡತನ ಇದ್ದಿದ್ದರಿಂದ ತಂಗಿಗೆ ಶಿಕ್ಷಣ ನೀಡುವುದು ಕೂಡ ಕಷ್ಟವಾಗಿತ್ತು. ಅಲ್ಲದೆ, ಕೊರೊನಾ, ಲಾಕ್​​ಡೌನ್​ನಿಂದ ಜೀವನ ನಡೆಸುವುದು ಮತ್ತಷ್ಟು ಕಷ್ಟವಾಗಿತ್ತು.

ಈ ವಿಚಾರ ಸಮಂತಾ ಕಿವಿಗೆ ಬಿದ್ದಿದೆ. ಇದನ್ನು ತಿಳಿದ ತಕ್ಷಣ ಅವರು ಕವಿತಾಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಬರೋಬ್ಬರಿ 12.5 ಲಕ್ಷ ರೂಪಾಯಿ ಕಾರನ್ನು ಸಮಂತಾ ಗಿಫ್ಟ್​ ಆಗಿ ನೀಡಿದ್ದಾರೆ. ಈ ವಿಚಾರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕವಿತಾ ಕಾರನ್ನು ಕೂಡ ಓಡಿಸಲು ಕಲಿತಿದ್ದಾರೆ. ಹೀಗಾಗಿ, ಸಮಂತಾ ನೀಡಿದ ಕಾರಿನಿಂದ ಅವರು ಕ್ಯಾಬ್​ ಕೂಡ ಓಡಿಸಬಹುದು. ಈ ಮೂಲಕ ಕವಿತಾ ಕುಟುಂಬಕ್ಕೆ ಸಮಂತಾ ಆಸರೆ ಆಗಿದ್ದಾರೆ.

ಸಮಂತಾ ಅಸಿಸ್ಟಂಟ್​​ಗಳು ಕವಿತಾಗೆ ಕಾರ್​ ನೀಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸಮಂತಾ ಕೆಲಸಕ್ಕೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಕೆಲಸವನ್ನು ಹೀಗೆಯೇ ಮುಂದುವರಿಸಲಿ ಎಂದು ಅನೇಕರು ಆಶಿಸಿದ್ದಾರೆ.

ಸಮಂತಾ ಸದ್ಯ ಸಿನಿಮಾಗಳ ಜತೆಗೆ ವೆಬ್​ ಸೀರಿಸ್​ನಲ್ಲೂ ಬ್ಯುಸಿಯಾಗಿದ್ದಾರೆ. ಈ ಮೊದಲು ಫ್ಯಾಮಿಲಿಮೆನ್​ ವೆಬ್​ ಸೀರಿಸ್​ ಹಿಟ್​ ಆಗಿತ್ತು. ಈಗ ಫ್ಯಾಮಿಲಿ ಮ್ಯಾನ್​​-2ನಲ್ಲೂ ಸಮಂತಾ ನಟಿಸುತ್ತಿದ್ದಾರೆ. ಇದರ ಜತೆಗೆ 2 ಸಿನಿಮಾಗಳಲ್ಲೂ ಸಮಂತಾ ನಟಿಸುತ್ತಿದ್ದಾರೆ.

ಇದನ್ನೂ ಓದಿ: Samantha Yoga : ಸೌತ್ ನಟಿ ಸಮಂತಾ ಅಕ್ಕಿನೇನಿ ಯೋಗಾಸನ ಮಾಡುವ ಫೋಟೋಗಳು ಸಿಕ್ಕಾ ಪಟ್ಟೆ ವೈರಲ್!

Published On - 8:46 pm, Wed, 21 April 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ